ಅಮೆರಿಕದ ದೇಗುಲ ಮೇಲೆ ದಾಳಿ, ಶಿವರಾತ್ರಿ ದಿನ ಆತಂಕ
ವಾಷಿಂಗ್ಟನ್, ಫೆ.17: ಇಲ್ಲಿನ ಹಿಂದೂ ದೇಗುಲವೊಂದರ ಮೇಲೆ ಸೋಮವಾರ ರಾತ್ರಿ ದಾಳಿ ನಡೆಸಲಾಗಿದೆ. ಸಿಯಾಟಲ್ ಮೆಟ್ರೋಪಾಲಿಟನ್ ಪ್ರದೇಶದ ದೇಗುಲದ ಗೋಡೆ ಮೇಲೆ 'ಗೆಟ್ ಔಟ್' ಎಂದು ಅಪರಿಚಿತರು ಬರೆದು ಹೋಗಿದ್ದಾರೆ. ಶಿವರಾತ್ರಿ ಆಚರಣೆಗೆ ಸಿದ್ಧವಾಗುತ್ತಿದ್ದ ಹಿಂದೂಗಳು ಆತಂಕಗೊಂಡಿದ್ದಾರೆ.
ಸ್ನೊಹೊಮಿಷ್ ಕೌಂಟಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ಈ ಪ್ರದೇಶದ ಹಿಂದೂಗಳು ಸಹಜವಾಗಿ ಆತಂಕಕ್ಕೆ ಒಳಗಾಗಿದ್ದಾರೆ. ದುಷ್ಕರ್ಮಿಗಳು ಸ್ವಸ್ತಿಕ್ ಚಿನ್ಹೆ ಬರೆದು ಜೊತೆಗೆ ಗೆಟ್ ಔಟ್ ಎಂದು ಹಾಕಿದ್ದಾರೆ. ಯಾರಿಗೆ ಯಾವುದಕ್ಕೆ ಎಂಬುದು ತಿಳಿದಿಲ್ಲ.
'ಯಾರಿಗೆ ಗೆಟ್ ಔಟ್ ಎಂದು ಹೇಳುತ್ತಿದ್ದಾರೆ. ಎಲ್ಲರನ್ನು ವಲಸಿಗರು ಎಂದು ತಿಳಿದುಕೊಂಡಿದ್ದರೋ ಹೇಗೆ?' ಎಂದು ಹಿಂದೂ ದೇಗುಲದ ಟ್ರಸ್ಟಿ ನಿತ್ಯಾ ನಿರಂಜನ್ ಪ್ರಶ್ನಿಸಿದ್ದಾರೆ.

ಎರಡು ದಶಕಗಳಿಂದ ಈ ದೇಗುಲ ಅಮೆರಿಕದಲ್ಲಿರುವ ಹಿಂದೂಗಳಿಗೆ ಪವಿತ್ರ ತಾಣವಾಗಿ ಜನಪ್ರಿಯತೆ ಗಳಿಸಿದೆ. ಈ ಘಟನೆಯನ್ನು ಹಿಂದೂ ಅಮೆರಿಕನ್ ಫೌಂಡೇಷನ್(ಎಚ್ಎಎಫ್) ತೀವ್ರವಾಗಿ ಖಂಡಿಸಿದೆ. ಕಳೆದ ವರ್ಷ ಜಾರ್ಜಿಯಾದಲ್ಲಿ ದೇಗುಲವೊಂದು ಧ್ವಂಸಗೊಂಡ ಪ್ರಕರಣದ ನಂತರ ಈ ಘಟನೆ ನಡೆದಿದೆ.
ಇದೇ ದೇಗುಲದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಜಪ ತಪ ಹಮ್ಮಿಕೊಳ್ಳಲಾಗಿತ್ತು. ಫೆ.16ರಂದು ಬೆಳಗ್ಗೆ 9 ರಿಂದ ರಾತ್ರಿ 1ಗಂಟೆ ತನಕ ವಿವಿಧ ಪೂಜಾ ಕೈಂಕರ್ಯಗಳನ್ನು ಇಲ್ಲಿನ ಟ್ರಸ್ಟ್ ಆಯೋಜಿಸಿದೆ.
ರುದ್ರಾಭಿಷೇಕ, ರುದ್ರ ಪಠಣ, ಮಹಾ ಪ್ರಸಾದ ವಿನಿಯೋಗ, ಆರತಿ, ಅರ್ಚನೆ, ವಿಶೇಷ ಭಜನೆ ಕಾರ್ಯಕ್ರಮಗಳು ಆಯೋಜನೆಗೊಂಡಿದೆ. ಇದ್ದಲ್ಲದೆ ವಾಷಿಂಗ್ಟನ್ ನ ಮತ್ತೊಂದು ದೇಗುಲದಲ್ಲಿ ಶಿವ ಪಾರ್ವತಿ ಕಲ್ಯಾಣೋತ್ಸವ ಸಮಾರಂಭವೂ ನಡೆಯಲಿದೆ. ಫೆ.23ರಂದು ಕೂಡಾ ಮಹಾರುದ್ರಾಭಿಷೇಕ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗೆ ದೇಗುಲದ ವೆಬ್ ಸೈಟ್ ನೋಡಬಹುದು. (ಪಿಟಿಐ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications