ಅಮೆರಿಕದ ದೇಗುಲ ಮೇಲೆ ದಾಳಿ, ಶಿವರಾತ್ರಿ ದಿನ ಆತಂಕ
ವಾಷಿಂಗ್ಟನ್, ಫೆ.17: ಇಲ್ಲಿನ ಹಿಂದೂ ದೇಗುಲವೊಂದರ ಮೇಲೆ ಸೋಮವಾರ ರಾತ್ರಿ ದಾಳಿ ನಡೆಸಲಾಗಿದೆ. ಸಿಯಾಟಲ್ ಮೆಟ್ರೋಪಾಲಿಟನ್ ಪ್ರದೇಶದ ದೇಗುಲದ ಗೋಡೆ ಮೇಲೆ 'ಗೆಟ್ ಔಟ್' ಎಂದು ಅಪರಿಚಿತರು ಬರೆದು ಹೋಗಿದ್ದಾರೆ. ಶಿವರಾತ್ರಿ ಆಚರಣೆಗೆ ಸಿದ್ಧವಾಗುತ್ತಿದ್ದ ಹಿಂದೂಗಳು ಆತಂಕಗೊಂಡಿದ್ದಾರೆ.
ಸ್ನೊಹೊಮಿಷ್ ಕೌಂಟಿ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಈ ಘಟನೆಯಿಂದ ಈ ಪ್ರದೇಶದ ಹಿಂದೂಗಳು ಸಹಜವಾಗಿ ಆತಂಕಕ್ಕೆ ಒಳಗಾಗಿದ್ದಾರೆ. ದುಷ್ಕರ್ಮಿಗಳು ಸ್ವಸ್ತಿಕ್ ಚಿನ್ಹೆ ಬರೆದು ಜೊತೆಗೆ ಗೆಟ್ ಔಟ್ ಎಂದು ಹಾಕಿದ್ದಾರೆ. ಯಾರಿಗೆ ಯಾವುದಕ್ಕೆ ಎಂಬುದು ತಿಳಿದಿಲ್ಲ.
'ಯಾರಿಗೆ ಗೆಟ್ ಔಟ್ ಎಂದು ಹೇಳುತ್ತಿದ್ದಾರೆ. ಎಲ್ಲರನ್ನು ವಲಸಿಗರು ಎಂದು ತಿಳಿದುಕೊಂಡಿದ್ದರೋ ಹೇಗೆ?' ಎಂದು ಹಿಂದೂ ದೇಗುಲದ ಟ್ರಸ್ಟಿ ನಿತ್ಯಾ ನಿರಂಜನ್ ಪ್ರಶ್ನಿಸಿದ್ದಾರೆ.

ಎರಡು ದಶಕಗಳಿಂದ ಈ ದೇಗುಲ ಅಮೆರಿಕದಲ್ಲಿರುವ ಹಿಂದೂಗಳಿಗೆ ಪವಿತ್ರ ತಾಣವಾಗಿ ಜನಪ್ರಿಯತೆ ಗಳಿಸಿದೆ. ಈ ಘಟನೆಯನ್ನು ಹಿಂದೂ ಅಮೆರಿಕನ್ ಫೌಂಡೇಷನ್(ಎಚ್ಎಎಫ್) ತೀವ್ರವಾಗಿ ಖಂಡಿಸಿದೆ. ಕಳೆದ ವರ್ಷ ಜಾರ್ಜಿಯಾದಲ್ಲಿ ದೇಗುಲವೊಂದು ಧ್ವಂಸಗೊಂಡ ಪ್ರಕರಣದ ನಂತರ ಈ ಘಟನೆ ನಡೆದಿದೆ.
ಇದೇ ದೇಗುಲದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಜಪ ತಪ ಹಮ್ಮಿಕೊಳ್ಳಲಾಗಿತ್ತು. ಫೆ.16ರಂದು ಬೆಳಗ್ಗೆ 9 ರಿಂದ ರಾತ್ರಿ 1ಗಂಟೆ ತನಕ ವಿವಿಧ ಪೂಜಾ ಕೈಂಕರ್ಯಗಳನ್ನು ಇಲ್ಲಿನ ಟ್ರಸ್ಟ್ ಆಯೋಜಿಸಿದೆ.
ರುದ್ರಾಭಿಷೇಕ, ರುದ್ರ ಪಠಣ, ಮಹಾ ಪ್ರಸಾದ ವಿನಿಯೋಗ, ಆರತಿ, ಅರ್ಚನೆ, ವಿಶೇಷ ಭಜನೆ ಕಾರ್ಯಕ್ರಮಗಳು ಆಯೋಜನೆಗೊಂಡಿದೆ. ಇದ್ದಲ್ಲದೆ ವಾಷಿಂಗ್ಟನ್ ನ ಮತ್ತೊಂದು ದೇಗುಲದಲ್ಲಿ ಶಿವ ಪಾರ್ವತಿ ಕಲ್ಯಾಣೋತ್ಸವ ಸಮಾರಂಭವೂ ನಡೆಯಲಿದೆ. ಫೆ.23ರಂದು ಕೂಡಾ ಮಹಾರುದ್ರಾಭಿಷೇಕ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗೆ ದೇಗುಲದ ವೆಬ್ ಸೈಟ್ ನೋಡಬಹುದು. (ಪಿಟಿಐ)
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications