ಚೀನಿ ಅಲ್ಲ ಎಂದರೆ ಬೆಂಕಿ ಹಚ್ಚಿ ಬಿಡುತ್ತಾರೆ ಎಚ್ಚರ!
ಹಾಂಗ್ ಕಾಂಗ್, ನವೆಂಬರ್.12: ಸರ್ಕಾರದ ವಿರುದ್ಧ ಹೋರಾಟದ ಕಿಚ್ಚು ದಿನೇ ದಿನೆ ಹೆಚ್ಚುತ್ತಲೇ ಇದೆ. ಹಾಂಗ್ ಕಾಂಗ್ ನಲ್ಲಿ ಪ್ರತಿಭಟನಾಕಾರರ ಕೋಪ ನೆತ್ತಿಗೇರುತ್ತಿದೆ. ಅದಕ್ಕೆ ತಕ್ಕಂದೆ ಹಿಂಸಾಚಾರವೂ ಮಿತಿ ಮೀರಿ ಹೋಗಿದೆ.
ನಿನ್ನೆಯಷ್ಟೇ ಪ್ರತಿಭಟನಾಕಾರರ ಮೇಲೆ ಪೊಲೀಸರೇ ಗುಂಡು ಹಾರಿಸಿದ್ದು ಸಾಕಷ್ಟು ಸುದ್ದಿಯಾಗಿತ್ತು. ಇಂದು ಅದಕ್ಕಿಂತ ಭಯಾನಕವಾದಂತಾ ಘಟನೆಯೊಂದು ಹಾಂಗ್ ಕಾಂಗ್ ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ಹಾಂಗ್ ಕಾಂಗ್ ನ ಮಾ ಆನ್ ಶಾನ್ ಪ್ಲಾಜಾದಲ್ಲಿ ವ್ಯಕ್ತಿಯೊಬ್ಬನ ಮೇಲೆ ಪ್ರತಿಭಟನಾಕಾರರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ದೃಶ್ಯ ಹೋಟೆಲ್ ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಚೀನಿಗನಲ್ಲ ಎಂದು ಬೆಂಕಿ ಹಚ್ಚಿ ಬಿಟ್ಟರಲ್ಲ!
ಚೀನಿಗನಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಇಲ್ಲಿ ವ್ಯಕ್ತಿಯೇ ಪ್ರಾಣ ಬಿಡುವಂತಾ ಸ್ಥಿತಿ ನಿರ್ಮಾಣವಾಗಿದೆ. ಹೋಟೆಲ್ ನಲ್ಲಿ ತಂಗಿದ್ದ ವ್ಯಕ್ತಿಯ ಚೀನಾದವನಲ್ಲ ಎಂಬ ಕಾರಣಕ್ಕೆ ಪ್ರತಿಭಟನಾಕಾರರು ವ್ಯಕ್ತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ವ್ಯಕ್ತಿಯ ದೇಹ ಬಹುಪಾಲು ಸುಟ್ಟಹೋಗಿದ್ದು, ವ್ಯಕ್ತಿ ಕೋಮಾ ಸ್ಥಿತಿಗೆ ಹೋಗಿದ್ದಾನೆ ಎನ್ನಲಾಗಿದೆ.

ಪ್ರತಿಭಟನೆ ನಡೆಸಿದ್ದಕ್ಕೆ ಖಾಕಿ ಕೊಟ್ಟಿತ್ತು ಗುಂಡೇಟು!
ಕಳೆದ ನವೆಂಬರ್.08ರಂದು ಪ್ರತಿಭಟನಾನಿರತ ವಿದ್ಯಾರ್ಥಿ ಚೌ ಎಂಬಾತ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದನು. ವಿದ್ಯಾರ್ಥಿ ಆತ್ಮಹತ್ಯೆಯಿಂದ ಕೆರಳಿದ ವಿದ್ಯಾರ್ಥಿ ಸಮೂಹ, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿ ಮೇಲೆ ಪೊಲೀಸರೇ ಗುಂಡಿನ ದಾಳಿ ನಡೆಸಿದ್ದರು.

ಹಸ್ತಾಂತರ ಕಾಯ್ದೆ ವಿರೋಧಿಸಿ ಮುಂದುವರಿದ ಹೋರಾಟ
ಹಾಂಗ್ ಕಾಂಗ್ ಸರ್ಕಾರದ ವಿರುದ್ಧ ಪ್ರಜೆಗಳೆಲ್ಲ ಬೀದಿಗೆ ಇಳಿದಿದ್ದಾರೆ. ಕ್ಯಾರಿ ಲ್ಯಾಮ್ಸ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಹಸ್ತಾಂತರ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ದಿನೇ ದಿನೆ ಹಿಂಸಾರೂಪಕ್ಕೆ ತಿರುಗುತ್ತಿದೆ.

ವಿಶ್ವಮಟ್ಟದಲ್ಲಿ ಡ್ರ್ಯಾಗನ್ ದೇಶಕ್ಕೆ ಇರಿಸು-ಮುರಿಸು!
ಹಾಂಗ್ ಕಾಂಗ್ ನ ದೈತ್ಯ ಪ್ರತಿಭಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ಇದು ಜಾಗತಿಕ ನಾಯಕತ್ವ ವಹಿಸಲು ಹೊರಟಿರುವ ಚೀನಾಗೆ ಇರಿಸು-ಮುರಿಸು ಉಂಟು ಮಾಡಿದೆ. ಪ್ರತಿಭಟನೆಯಿಂದ ಸಂಭವಿಸಿರುವ ಹಣಕಾಸು ಮತ್ತು ಮನೋವೈಜ್ಞಾನಿಕ ನಷ್ಟಗಳು ನಿರ್ಲಕ್ಷಿಸಲಾರದಷ್ಟು ಎಂದು ಹೇಳಲಾಗುತ್ತಿದೆ. ಈ ನಡುವೆ ಅಮೆರಿಕಾದೊಂದಿಗೆ ನಡೆದಿರುವ ವಾಣಿಜ್ಯ-ವ್ಯಾಪಾರ ಸಮರವು ರಗಳೆಯಾಗಿ ಪರಿಣಮಿಸಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications