ಚೀನಿ ಅಲ್ಲ ಎಂದರೆ ಬೆಂಕಿ ಹಚ್ಚಿ ಬಿಡುತ್ತಾರೆ ಎಚ್ಚರ!
ಹಾಂಗ್ ಕಾಂಗ್, ನವೆಂಬರ್.12: ಸರ್ಕಾರದ ವಿರುದ್ಧ ಹೋರಾಟದ ಕಿಚ್ಚು ದಿನೇ ದಿನೆ ಹೆಚ್ಚುತ್ತಲೇ ಇದೆ. ಹಾಂಗ್ ಕಾಂಗ್ ನಲ್ಲಿ ಪ್ರತಿಭಟನಾಕಾರರ ಕೋಪ ನೆತ್ತಿಗೇರುತ್ತಿದೆ. ಅದಕ್ಕೆ ತಕ್ಕಂದೆ ಹಿಂಸಾಚಾರವೂ ಮಿತಿ ಮೀರಿ ಹೋಗಿದೆ.
ನಿನ್ನೆಯಷ್ಟೇ ಪ್ರತಿಭಟನಾಕಾರರ ಮೇಲೆ ಪೊಲೀಸರೇ ಗುಂಡು ಹಾರಿಸಿದ್ದು ಸಾಕಷ್ಟು ಸುದ್ದಿಯಾಗಿತ್ತು. ಇಂದು ಅದಕ್ಕಿಂತ ಭಯಾನಕವಾದಂತಾ ಘಟನೆಯೊಂದು ಹಾಂಗ್ ಕಾಂಗ್ ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗುತ್ತಿದೆ.
ಹಾಂಗ್ ಕಾಂಗ್ ನ ಮಾ ಆನ್ ಶಾನ್ ಪ್ಲಾಜಾದಲ್ಲಿ ವ್ಯಕ್ತಿಯೊಬ್ಬನ ಮೇಲೆ ಪ್ರತಿಭಟನಾಕಾರರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಈ ದೃಶ್ಯ ಹೋಟೆಲ್ ನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಚೀನಿಗನಲ್ಲ ಎಂದು ಬೆಂಕಿ ಹಚ್ಚಿ ಬಿಟ್ಟರಲ್ಲ!
ಚೀನಿಗನಲ್ಲ ಎಂಬ ಒಂದೇ ಒಂದು ಕಾರಣಕ್ಕೆ ಇಲ್ಲಿ ವ್ಯಕ್ತಿಯೇ ಪ್ರಾಣ ಬಿಡುವಂತಾ ಸ್ಥಿತಿ ನಿರ್ಮಾಣವಾಗಿದೆ. ಹೋಟೆಲ್ ನಲ್ಲಿ ತಂಗಿದ್ದ ವ್ಯಕ್ತಿಯ ಚೀನಾದವನಲ್ಲ ಎಂಬ ಕಾರಣಕ್ಕೆ ಪ್ರತಿಭಟನಾಕಾರರು ವ್ಯಕ್ತಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ. ಇದರಿಂದ ವ್ಯಕ್ತಿಯ ದೇಹ ಬಹುಪಾಲು ಸುಟ್ಟಹೋಗಿದ್ದು, ವ್ಯಕ್ತಿ ಕೋಮಾ ಸ್ಥಿತಿಗೆ ಹೋಗಿದ್ದಾನೆ ಎನ್ನಲಾಗಿದೆ.

ಪ್ರತಿಭಟನೆ ನಡೆಸಿದ್ದಕ್ಕೆ ಖಾಕಿ ಕೊಟ್ಟಿತ್ತು ಗುಂಡೇಟು!
ಕಳೆದ ನವೆಂಬರ್.08ರಂದು ಪ್ರತಿಭಟನಾನಿರತ ವಿದ್ಯಾರ್ಥಿ ಚೌ ಎಂಬಾತ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದನು. ವಿದ್ಯಾರ್ಥಿ ಆತ್ಮಹತ್ಯೆಯಿಂದ ಕೆರಳಿದ ವಿದ್ಯಾರ್ಥಿ ಸಮೂಹ, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತ್ತು. ಈ ವೇಳೆ ಪ್ರತಿಭಟನಾನಿರತ ವಿದ್ಯಾರ್ಥಿ ಮೇಲೆ ಪೊಲೀಸರೇ ಗುಂಡಿನ ದಾಳಿ ನಡೆಸಿದ್ದರು.

ಹಸ್ತಾಂತರ ಕಾಯ್ದೆ ವಿರೋಧಿಸಿ ಮುಂದುವರಿದ ಹೋರಾಟ
ಹಾಂಗ್ ಕಾಂಗ್ ಸರ್ಕಾರದ ವಿರುದ್ಧ ಪ್ರಜೆಗಳೆಲ್ಲ ಬೀದಿಗೆ ಇಳಿದಿದ್ದಾರೆ. ಕ್ಯಾರಿ ಲ್ಯಾಮ್ಸ್ ಸರ್ಕಾರ ಜಾರಿಗೊಳಿಸಲು ಹೊರಟಿದ್ದ ಹಸ್ತಾಂತರ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ದಿನೇ ದಿನೆ ಹಿಂಸಾರೂಪಕ್ಕೆ ತಿರುಗುತ್ತಿದೆ.

ವಿಶ್ವಮಟ್ಟದಲ್ಲಿ ಡ್ರ್ಯಾಗನ್ ದೇಶಕ್ಕೆ ಇರಿಸು-ಮುರಿಸು!
ಹಾಂಗ್ ಕಾಂಗ್ ನ ದೈತ್ಯ ಪ್ರತಿಭಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗುತ್ತಿದೆ. ಇದು ಜಾಗತಿಕ ನಾಯಕತ್ವ ವಹಿಸಲು ಹೊರಟಿರುವ ಚೀನಾಗೆ ಇರಿಸು-ಮುರಿಸು ಉಂಟು ಮಾಡಿದೆ. ಪ್ರತಿಭಟನೆಯಿಂದ ಸಂಭವಿಸಿರುವ ಹಣಕಾಸು ಮತ್ತು ಮನೋವೈಜ್ಞಾನಿಕ ನಷ್ಟಗಳು ನಿರ್ಲಕ್ಷಿಸಲಾರದಷ್ಟು ಎಂದು ಹೇಳಲಾಗುತ್ತಿದೆ. ಈ ನಡುವೆ ಅಮೆರಿಕಾದೊಂದಿಗೆ ನಡೆದಿರುವ ವಾಣಿಜ್ಯ-ವ್ಯಾಪಾರ ಸಮರವು ರಗಳೆಯಾಗಿ ಪರಿಣಮಿಸಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications