28 ವರ್ಷಗಳ ಕಾಲ ಮಗನನ್ನು ಮನೆಯಲ್ಲಿ ಬಂಧಿಸಿದ್ದ ಸ್ವೀಡನ್ ತಾಯಿ
ಸ್ವೀಡನ್, ಡಿಸೆಂಬರ್ 2: 70 ವರ್ಷದ ಮಹಿಳೆಯೊಬ್ಬಳು 28 ವರ್ಷಗಳಿಂದ ತನ್ನ ಮಗನನ್ನು ಫ್ಲ್ಯಾಟ್ನಲ್ಲಿ ಬಂಧಿಸಿಟ್ಟಿದ್ದಾಳೆ. 41 ವರ್ಷದ ಮಗನನ್ನು ಸ್ವೀಡನ್ನ ಸ್ಟಾಕ್ಹೋಮ್ ಅಪಾರ್ಟ್ಮೆಂಟ್ನಲ್ಲಿ ಕಠಿಣ ಪರಿಸ್ಥಿತಿಯಲ್ಲಿ ಬಂಧಿಸಿದ್ದ ಆರೋಪದ ಮೇಲೆ ತಾಯಿಯನ್ನು ಬಂಧಿಸಲಾಗಿದೆ.
ತನ್ನ ಮಗನ ಸ್ವಾತಂತ್ರ್ಯ ಹರಣ ಮಾಡಿದ್ದಕ್ಕಾಗಿ ಮಹಿಳೆಯನ್ನು ಬಂಧಿಸಲಾಯಿತು. ಮಗನು ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಮತ್ತು ದೇಹದಾದ್ಯಂತ ಮೂಗೇಟುಗಳು ಇದ್ದವು ಎಂದು ವರದಿಯಾಗಿದ್ದು, ಅವನಿಗೆ ಹಲ್ಲುಗಳೂ ಇಲ್ಲದಂತಾಗಿರುವ ದೃಶ್ಯ ಕಂಡುಬಂದಿದೆ.
ಆರೋಗ್ಯ ಸಮಸ್ಯೆಗಳಿಂದಾಗಿ ಕೆಲವು ದಿನಗಳ ಹಿಂದೆ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಸಮಯದಲ್ಲಿ ಸಂಬಂಧಿಯೊಬ್ಬರು ಕೆಲವು ಕೆಲಸಕ್ಕಾಗಿ ಅಪಾರ್ಟ್ಮೆಂಟ್ ಗೆ ಹೋದಾಗ ಅವಳು ಅಡುಗೆ ಮನೆಯಲ್ಲಿ ವ್ಯಕ್ತಿಯನ್ನು ನೋಡಿದ್ದಾಳೆ. ಆ ವ್ಯಕ್ತಿಯನ್ನು ನೋಡಿ ಗಾಬರಿಯಾದಳು. ಅಪಾರ್ಟ್ಮೆಂಟ್ ಅನ್ನು ಶಾಶ್ವತವಾಗಿ ಸ್ವಚ್ಛಗೊಳಿಸಲಾಗಿಲ್ಲ ಎಂದು ತಿಳಿದುಬಂದಿದೆ. ಕೊಠಡಿ ಮೂತ್ರ ಮತ್ತು ಧೂಳಿನಿಂದ ಆವೃತವಾಗಿದ್ದು, ಭೀಕರವಾದ ವಾಸನೆಯಿಂದ ಕೂಡಿತ್ತು.

ಸಂಬಂಧಿಯ ಮಗನೊಂದಿಗೆ ಆ ಮಹಿಳೆ ಮಾತನಾಡಿದ್ದು, ವ್ಯಕ್ತಿಯ ಮೇಲೆ ದೈಹಿಕ ಹಿಂಸೆಯ ಚಿಹ್ನೆಗಳು ಕಂಡುಬಂದಿದ್ದಾವೆ. ಅಸೋಸಿಯೇಟೆಡ್ ಪ್ರೆಸ್ನ ವರದಿಗಳ ಪ್ರಕಾರ, ಈ ವ್ಯಕ್ತಿಯನ್ನು ಈಗ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ವರದಿಗಳ ಪ್ರಕಾರ, ತಾಯಿಯು 6 ಅಥವಾ 7 ನೇ ತರಗತಿಯಲ್ಲಿದ್ದಾಗ ಮಗನನ್ನು ಶಾಲೆಯಿಂದ ಹೊರಗೆ ಕರೆದೊಯ್ದರು. ಅಂದಿನಿಂದ ಅವಳು ತನ್ನ ಮಗನನ್ನು ತಮ್ಮ ಫ್ಲ್ಯಾಟ್ನಲ್ಲಿ ಬಂಧಿಸಿಟ್ಟಿದ್ದಾಳೆ. ಆದರೆ ಆ ಮಹಿಳೆ ಈ ಎಲ್ಲ ಆರೋಪಗಳನ್ನು ನಿರಾಕರಿಸುತ್ತಿದ್ದು, ಮತ್ತು ತನ್ನ ಮಗನಿಗೆ ಯಾವುದೇ ಹಾನಿ ಮಾಡಿಲ್ಲ ಎಂದು ಹೇಳುತ್ತಿದ್ದಾಳೆ.
ಈ ಕುರಿತು ಪೊಲೀಸರು ಫ್ಲ್ಯಾಟ್ಗೆ ಜನರ ಪ್ರವೇಶವನ್ನು ನಿರ್ಬಂಧಿಸಿದ್ದು, ಇದೀಗ ಈ ಪ್ರಕರಣವನ್ನು ಅಪರಾಧದ ದೃಶ್ಯವೆಂದು ಗುರುತಿಸಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications