ಪಾಕಿಸ್ತಾನ-ಅಫ್ಘಾನಿಸ್ತಾನ ಮಧ್ಯೆ 'ಉಗ್ರ' ಸಮರ
ಗುರುವಾರ ಸಂಭವಿಸಿದ ಭೀಕರ ಬಾಂಬ್ ಸ್ಪೋಟದ ನಂತರ ಪಾಕಿಸ್ತಾನ ಎಚ್ಚೆತ್ತುಕೊಂಡಿದೆ. ಉಗ್ರರ ಮೇಲೆ ಸಮರವನ್ನೇ ಸಾರಿರುವ ಪಾಕಿಸ್ತಾನ ಕನಿಷ್ಠ 29 ಉಗ್ರರನ್ನು ಕೊಂದಿದ್ದು 76 ಉಗ್ರರನ್ನು ತಕ್ಷಣ ತನಗೊಪ್ಪಿಸುವಂತೆ ಅಫ್ಘಾನಿಸ್ತಾನವನ್ನು ಕೇಳಿಕೊಂಡಿದೆ.
ಬೆಂಗಳೂರು, ಫೆಬ್ರವರಿ 17: ಗುರುವಾರ ಸಂಭವಿಸಿದ ಭೀಕರ ಬಾಂಬ್ ಸ್ಪೋಟದ ನಂತರ ಪಾಕಿಸ್ತಾನ ಸರಕಾರ ಎಚ್ಚೆತ್ತುಕೊಂಡಿದೆ. ಉಗ್ರರ ಮೇಲೆ ಸಮರವನ್ನೇ ಸಾರಿರುವ ಪಾಕಿಸ್ತಾನ ಕನಿಷ್ಠ 29 ಉಗ್ರರನ್ನು ಕೊಂದಿದ್ದು 76 ಉಗ್ರರನ್ನು ತಕ್ಷಣ ತನಗೊಪ್ಪಿಸುವಂತೆ ಅಫ್ಘಾನಿಸ್ತಾನಕ್ಕೆ ಬೇಡಿಕೆ ಸಲ್ಲಿಸಿದೆ.
ಗುರುವಾರ ಸಂಜೆ ಸಿಂಧ್ ಪ್ರಾಂತ್ಯದ ಸೂಫಿ ಮಸೀದಿಯೊಂದರಲ್ಲಿ ಐಸಿಲ್ (ಐಸಿಸ್) ಉಗ್ರರು ನಡೆಸಿದ ಭೀಕರ ಆತ್ಮಾಹುತಿ ಬಾಂಬ್ ಸ್ಪೋಟದಲ್ಲಿ 75 ಜನ ಸಾವನ್ನಪ್ಪಿದ್ದರು. 20ಕ್ಕೂ ಹೆಚ್ಚು ಮಕ್ಕಳು ಈ ಸ್ಪೋಟದಲ್ಲಿ ಅಸುನೀಗಿದ್ದು, ಸ್ಪೋಟದ ತೀವ್ರತೆಗೆ ಮಸೀದಿಯ ಗೋಡೆಗಳು ರಕ್ತಸಿಕ್ತವಾಗಿವೆ.[ಪಾಕಿಸ್ತಾನದಲ್ಲಿ ಮತ್ತೆ ಬಾಂಬ್ ಸ್ಫೋಟ: 100ಕ್ಕೂ ಹೆಚ್ಚು ಸಾವು]

2014ರ ನಂತರ ಪಾಕಿಸ್ತಾನದಲ್ಲಿ ಸಂಭವಿಸಿದ ಅತ್ಯಂತ ಭಯಾನಕ ಬಾಂಬ್ ಸ್ಪೋಟ ಇದಾಗಿದೆ. ಅಲ್ಲದೆ ಕಳೆದೊಂದು ವಾರದಲ್ಲಿ ಪಾಕಿಸ್ತಾನದಲ್ಲಿ ಬರೋಬ್ಬರಿ 6 ಬಾಂಬ್ ಸ್ಪೋಟಗಳು ಸಂಭವಿಸಿದ್ದು 99 ಜನ ಸಾವನ್ನಪ್ಪಿದ್ದಾರೆ.[ಅಣ್ಣನನ್ನೇ ವಿಷವುಣಿಸಿ ಕೊಂದ ಉತ್ತರ ಕೊರಿಯಾ ಸರ್ವಾಧಿಕಾರಿ?]
ಘಟನೆಯ ನಂತರ ಕುಪಿತಗೊಂಡಿರುವ ಪಾಕಿಸ್ತಾನ ಸರಕಾರ ದೊಡ್ಡ ಮಟ್ಟಕ್ಕೆ ಉಗ್ರ ನಿಗ್ರಹಕ್ಕೆ ಮುಂದಾಗಿದೆ. ಅಫ್ಘಾನಿಸ್ತಾನದ ಗಡಿಯಲ್ಲಿದ್ದ ಎರಡು ಪ್ರಮುಖ ರಸ್ತೆಗಳನ್ನು ಪಾಕಿಸ್ತಾನ ಬಂದ್ ಮಾಡಿದೆ. ಮಾತ್ರವಲ್ಲದೆ ಸಿಂಧ್ ಪ್ರಾಂತ್ಯದಲ್ಲಿ 18 ಹಾಗೂ ವಾಯುವ್ಯ ಪ್ರಾತ್ಯದಲ್ಲಿ 11 ಉಗ್ರರನ್ನು ಕೊಂದಿದೆ. ಮತ್ತು ಅಪ್ಘಾನಿಸ್ತಾನದಲ್ಲಿ ಅಡಗಿಕೊಂಡಿರುವ 76 ಉಗ್ರರನ್ನು ತನಗೊಪ್ಪಿಸುವಂತೆ ಅಫ್ಘಾನಿಸ್ತಾನ ಸರ್ಕಾರಕ್ಕೆ ಪಾಕಿಸ್ತಾನ ಕೇಳಿಕೊಂಡಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications