ದಿಲ್ಲಿಯಲ್ಲಿ ಜಿ20 ಸಭೆ: ಅಲಂಕಾರಕ್ಕೆ ಶಿವಲಿಂಗ ಕಾರಂಜಿ ಸಾಲು! ಬಿಜೆಪಿ ವಿರುದ್ಧ ಎಎಪಿ ಆಕ್ರೋಶ
ದೆಹಲಿ, ಆಗಸ್ಟ್ 31: ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಶಿವಲಿಂಗಗಳಿಗೆ ಅಗೌರವ ತೋರಿದ್ದಾರೆ ಎಂದು ಎಎಪಿಯ ಹಿರಿಯ ನಾಯಕ ಸಂಜಯ್ ಸಿಂಗ್ ಆರೋಪಿಸಿದ್ದಾರೆ.
ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಗುರುವಾರ ದೆಹಲಿ ಲೆಫ್ಟಿನೆಂಟ್ ಗವರ್ನರ್ (ಎಲ್ಜಿ) ವಿಕೆ ಸಕ್ಸೇನಾ ಅವರು ಶಿವಲಿಂಗಗಳನ್ನು ಅಗೌರವಿಸಿದ ನಂತರ ಚಪ್ಪಾಳೆ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದು, ವಿಕೆ ಸಕ್ಸೇನಾ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸೆಪ್ಟೆಂಬರ್ 9-10 ರಂದು ದೆಹಲಿಯಲ್ಲಿ ಆಯೋಜಿಸಲಾಗಿರುವ ಮುಂಬರುವ ಜಿ-20 ಸಭೆಗಾಗಿ ಕಂಟೋನ್ಮೆಂಟ್ ಪ್ರದೇಶ ಮತ್ತು ರಾಷ್ಟ್ರ ರಾಜಧಾನಿಯ ಹಲವಾರು ಇತರ ಭಾಗಗಳಲ್ಲಿ ಅಳವಡಿಸಲಾಗಿರುವ 'ಶಿವಲಿಂಗ'ಗಳನ್ನು ಹೋಲುವ ಕಾರಂಜಿಗಳ ಬಗ್ಗೆ ವಿವಾದಗಳು ಭುಗಿಲೆದಿದೆ. ಇನ್ನೂ ಆಗಸ್ಟ್ 27, ಭಾನುವಾರದಂದು ದೆಹಲಿಯ ಎಲ್-ಜಿ ವಿನಯ್ ಕುಮಾರ್ ಸಕ್ಸೇನಾ ಅವರು ಸೌಂದರ್ಯೀಕರಣ ಕಾರ್ಯವನ್ನು ಕೈಗೊಂಡಿದ್ದಾರೆ ಮತ್ತು ಕೆಲಸಗಳು ಉತ್ತಮವಾಗಿವೆ ಎಂದು ಹೇಳಿದರು.
40 ದೇಶಗಳ ಮುಖ್ಯಸ್ಥರು ಈ ಮಾರ್ಗದಲ್ಲಿ ಪ್ರಯಾಣಿಸುತ್ತಾರೆ. ಈ ಪ್ರದೇಶವು ರೂಪಾಂತರಗೊಂಡಿರುವುದಕ್ಕೆ ನನಗೆ ಸಂತೋಷವಾಗಿದೆ. ಇಲ್ಲಿ ಕಾರಂಜಿಗಳನ್ನು ಸ್ಥಾಪಿಸಲಾಗಿದೆ. ನಾಯಕರ ಸಂಚಾರ ನಡೆಯುವ ದೆಹಲಿಯ 61 ರಸ್ತೆಗಳನ್ನು ಪರಿವರ್ತಿಸಲಾಗಿದೆ. ನೆಡುತೋಪು ಮಾಡಲಾಗಿದೆ. ರಸ್ತೆಗಳು ರಿಪೇರಿ ಮಾಡಲಾಗಿದೆ, ಫುಟ್ಪಾತ್ಗಳನ್ನು ಸ್ವಚ್ಛಗೊಳಿಸಲಾಗಿದೆ ಮತ್ತು ದುರಸ್ತಿ ಮಾಡಲಾಗಿದೆ. ಎಲ್ಲವೂ ಸರಿಯಾಗಿ ನಡೆಯುತ್ತಿದೆ ಎಂದು ದೆಹಲಿ ಎಲ್ಜಿ ವಿನಯ್ ಸಕ್ಸೇನಾ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.
ದೆಹಲಿಯ ಪ್ರಗತಿ ಮೈದಾನದಲ್ಲಿರುವ ಭಾರತ್ ಮಂಡಪಂ ಕನ್ವೆನ್ಷನ್ ಸೆಂಟರ್ ಸೆಪ್ಟೆಂಬರ್ 9-10 ರಂದು ಜಿ 20 ಶೃಂಗಸಭೆಯನ್ನು ಆಯೋಜಿಸಲಿದ್ದು, ಜಾಗತಿಕ ಕಾರ್ಯಕ್ರಮಕ್ಕೆ ದೆಹಲಿಯನ್ನು ಸಿದ್ಧಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications