ಅಫ್ಘಾನಿಸ್ತಾನ; ಪೊಲೀಸ್ ಅಧಿಕಾರಿಯಾದ ಮಹಿಳೆ ಕಣ್ಣು ಕಿತ್ತ ದುಷ್ಕರ್ಮಿಗಳು
ಕಾಬುಲ್, ನವೆಂಬರ್ 10: ಪೊಲೀಸ್ ಅಧಿಕಾರಿಯಾಗಿ ಈಚೆಗಷ್ಟೇ ನಿಯೋಜನೆಗೊಂಡು ಕರ್ತವ್ಯ ನಿರ್ವಹಿಸುತ್ತಿದ್ದ 33 ವರ್ಷದ ಮಹಿಳೆ ಮೇಲೆ ದಾಳಿ ನಡೆಸಿ ಗುಂಡು ಹಾರಿಸಿ, ಆಕೆಯನ್ನು ಅಂಧೆಯನ್ನಾಗಿ ಮಾಡಿರುವ ಘಟನೆ ಕಾಬುಲ್ ನಲ್ಲಿ ನಡೆದಿದೆ.
ಖತೇರಾ ಎಂಬ ಮಹಿಳೆ ಮೂರು ತಿಂಗಳ ಹಿಂದೆ ಅಫ್ಘಾನಿಸ್ತಾನದ ಪೊಲೀಸ್ ಠಾಣೆಯ ಅಪರಾಧ ವಿಭಾಗದಲ್ಲಿ ಅಧಿಕಾರಿಯಾಗಿ ನಿಯೋಜನೆಗೊಂಡಿದ್ದರು. ಈಚೆಗೆ ತಮ್ಮ ಕೆಲಸ ಮುಗಿಸಿ ವಾಪಸ್ ಬರುವಾಗ ಬೈಕ್ ನಲ್ಲಿ ಬಂದ ಮೂರು ವ್ಯಕ್ತಿಗಳು ದಾಳಿ ನಡೆಸಿದ್ದಾರೆ. ಆಕೆಯ ಮೇಲೆ ಗುಂಡು ಹಾರಿಸಿ, ಕಣ್ಣಿಗೆ ಚೂರಿಯಿಂದ ಇರಿದಿದ್ದಾರೆ. ಇದರಿಂದ ಖತೇರಾ ಕಣ್ಣುಗಳನ್ನು ಕಳೆದುಕೊಂಡಿದ್ದಾರೆ.
ಈ ಘಟನೆಯ ಹೊಣೆಯನ್ನು ಸ್ಥಳೀಯ ಆಡಳಿತ ಮಂಡಳಿ ತಾಲಿಬಾನ್ ಉಗ್ರಗಾಮಿ ಸಂಘಟನೆ ಮೇಲೆ ಹೊರಿಸಿದೆ. ಆದರೆ ಇದನ್ನು ನಿರಾಕರಿಸಿರುವ ಸಂಘಟನೆ, ಈ ದಾಳಿಕೋರರು ಆ ಮಹಿಳೆಯ ತಂದೆ ಕಡೆಯವರೇ ಆಗಿದ್ದಾರೆ. ಮನೆಯಿಂದ ಹೊರಗೆ ಹೋಗಿ ದುಡಿಯುವುದನ್ನು ಆಕೆಯ ತಂದೆ ವಿರೋಧಿಸಿದ್ದರು. ಅವರೇ ಈ ಕೃತ್ಯಕ್ಕೆ ಕಾರಣ ಎಂದಿದೆ.

ಆದರೆ, "ಕಾರಣ ಏನಾದರೂ ಇರಬಹುದು. ಇವರು ನನ್ನ ಕಣ್ಣನ್ನಷ್ಟೇ ಅಲ್ಲ, ನನ್ನ ಜೀವಮಾನದ ಕನಸುಗಳನ್ನೂ, ನಾನು ಏನನ್ನು ಸಾಧಿಸಬೇಕು ಎಂದುಕೊಂಡು ಹೋರಾಟ ಮಾಡಿದ್ದೆನೋ, ಆ ಶ್ರಮವನ್ನೂ ಕಸಿದುಕೊಂಡಿದ್ದಾರೆ. ನನ್ನ ಕಾಲಿನ ಮೇಲೆ ನಾನು ನಿಂತುಕೊಳ್ಳಬೇಕು ಎಂದು ಕನಸು ಕಂಡಿದ್ದೆ. ಆದರೆ ಕೆಲಸಕ್ಕೆ ಸೇರಿ, ಸೇವೆ ಸಲ್ಲಿಸುತ್ತಿದ್ದ ಕೆಲವೇ ತಿಂಗಳಲ್ಲಿ ಹೀಗೆ ಆಗಿರುವುದು ದುಃಖವಾಗಿದೆ" ಎಂದು ಖತೇರಾ ಹೇಳಿಕೊಂಡಿದ್ದಾರೆ.
ಈ ನಡುವೆ ಈ ಕೃತ್ಯದ ಕುರಿತು ಮಾನವ ಹಕ್ಕುಗಳ ಕಾರ್ಯಕರ್ತರೊಬ್ಬರು ಪ್ರತಿಕ್ರಿಯಿಸಿದ್ದು, "ಮಹಿಳೆಯರು ಉದ್ಯೋಗಕ್ಕೆ ಹೋಗುವುದನ್ನು ತಡೆಯಲು ಈ ರೀತಿ ದಾಳಿ ನಡೆಸಲಾಗಿದೆ. ಅದರಲ್ಲೂ ಸಾರ್ವಜನಿಕ ವಲಯದಲ್ಲಿ ಮಹಿಳೆ ಕಾಣಿಸಿಕೊಳ್ಳುವುದರ ವಿರುದ್ಧ ಹೀಗೆ ಮಾಡುತ್ತಿದ್ದಾರೆ. ಖತೇರಾ ಈಗ ಕೇಳಿಬಂದಿರುವ ಒಂದು ಹೆಸರು ಅಷ್ಟೆ. ಈ ಪ್ರಕರಣದಲ್ಲಿ, ಖತೇರಾ ಪೊಲೀಸ್ ಅಧಿಕಾರಿಯಾಗಿದ್ದು ತಾಲಿಬಾನ್ ಕೋಪವನ್ನು ಮತ್ತಷ್ಟು ಹೆಚ್ಚಿಸಿದೆ ಎಂದಿದ್ದಾರೆ.
ಈ ನಡುವೆ, "ನಾನು ಚೇತರಿಸಿಕೊಂಡಿದ್ದೇ ಆದರೆ ಮತ್ತೆ ಪೊಲೀಸ್ ಆಗಿ ಬರುತ್ತೇನೆ ಎಂದು ಖತೇರಾ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications