Breaking: ಧಾರ್ಮಿಕ ಶಾಲೆ ಮೇಲೆ ತಾಲಿಬಾನ್ ಬಾಂಬ್ ದಾಳಿ; 10 ಮಂದಿ ಸಾವು
ಕಾಬೂಲ್, ನವೆಂಬರ್ 30: ಅಫ್ಘಾನಿಸ್ತಾನದಲ್ಲಿ ಉಗ್ರರ ಕ್ರೌರ್ಯ ಮುಂದುವರಿದಿದೆ. ಧಾರ್ಮಿಕ ಶಾಲೆಯ ಮೇಲೆ ನಡೆಸಿದ ಬಾಂಬ್ ದಾಳಿಯು ಮುಗ್ಧ ಮಕ್ಕಳ ಪ್ರಾಣವನ್ನೇ ಬಲಿ ತೆಗೆದುಕೊಂಡಿರುವ ಘಟನೆ ಬುಧವಾರ ವರದಿಯಾಗಿದೆ.
ನವೆಂಬರ್ 30ರಂದು ಉತ್ತರ ಅಫ್ಘಾನಿಸ್ತಾನದ ಧಾರ್ಮಿಕ ಶಾಲೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಈ ಬಾಂಬ್ ದಾಳಿಯಲ್ಲಿ ಕನಿಷ್ಠ 10 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ತಾಲಿಬಾನ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಉತ್ತರ ಸಮಂಗನ್ ಪ್ರಾಂತ್ಯದ ರಾಜಧಾನಿ ಅಯ್ಬಕ್ನಲ್ಲಿ ನಡೆದ ಸ್ಫೋಟದಲ್ಲಿ ಹಲವಾರು ಮಂದಿ ಗಾಯಗೊಂಡಿದ್ದಾರೆ ಎಂದು ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫಿ ಟಾಕೋರ್ ಹೇಳಿದ್ದಾರೆ. ಇನ್ನು ಈ ಬಾಂಬ್ ದಾಳಿಯ ಹೊಣೆಯನ್ನು ಯಾವುದೇ ಉಗ್ರಗಾಮಿ ಸಂಘಟನೆಗಳು ಹೊತ್ತುಕೊಂಡಿಲ್ಲ ಎಂದು ತಿಳಿದು ಬಂದಿದೆ.

ಅಕ್ಟೋಬರ್ ತಿಂಗಳಿನಲ್ಲಿ ಆತ್ಮಾಹುತಿ ಬಾಂಬ್ ದಾಳಿ:
ಕಳೆದ ವಾರ ಅಫ್ಘಾನಿಸ್ತಾನ ರಾಜಧಾನಿಯ ಶೈಕ್ಷಣಿಕ ಕೇಂದ್ರದಲ್ಲಿ ನಡೆಸಿದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 53ಕ್ಕೆ ಏರಿಕೆಯಾಗಿದೆ ಎಂದು ವಿಶ್ವಸಂಸ್ಥೆ ಮಾಹಿತಿ ನೀಡಿತ್ತು. "53 ಮಂದಿ ಮೃತರಲ್ಲಿ ಕನಿಷ್ಠ 46 ಹುಡುಗಿಯರು ಮತ್ತು ಮಹಿಳೆಯರಿದ್ದಾರೆ," ಎಂದು ಅಫ್ಘಾನಿಸ್ತಾನದ ವಿಶ್ವಸಂಸ್ಥೆಯ ಮಿಷನ್ ಟ್ವಿಟ್ಟರ್ನಲ್ಲಿ ತಿಳಿಸಿದೆ. ಕಾಬೂಲ್ ನಗರದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಇನ್ನೂ 110 ಜನರು ಗಾಯಗೊಂಡಿದ್ದಾರೆ. ಶುಕ್ರವಾರ ಕಾಬೂಲ್ನ ಪಕ್ಕದಲ್ಲಿರುವ ಸ್ಟಡಿ ಹಾಲ್ನಲ್ಲಿ ಆತ್ಮಾಹುತಿ ಬಾಂಬರ್ ಒಬ್ಬರು ಮಹಿಳೆಯ ಪಕ್ಕದಲ್ಲಿ ತನ್ನನ್ನು ತಾನು ಸ್ಫೋಟಿಸಿಕೊಂಡ ಘಟನೆ ನಡೆಯಿತು. ಈ ವೇಳೆ ವಿಶ್ವವಿದ್ಯಾನಿಲಯದಲ್ಲಿ ಪ್ರವೇಶ ಪರೀಕ್ಷೆಗಾಗಿ ನೂರಾರು ವಿದ್ಯಾರ್ಥಿಗಳು ಕುಳಿತಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications