ಥೈಲ್ಯಾಂಡ್ ಗುಹೆಯಿಂದ ವಾಪಸಾದ ವೀರ ಮಕ್ಕಳು ಈಗ ಹೇಗಿದ್ದಾರೆ ನೋಡಿ
ಬೆಂಗಳೂರು, ಜು.14: ಥೈಲ್ಯಾಂಡ್ನ ಗುಹೆಯೊಂದರಲ್ಲಿ ಎರಡು ವಾರಗಳಿಂದ ಸಿಲುಕಿದ್ದ ಕೋಚ್ ಸೇರಿ 13 ಮಂದಿಯನ್ನು ರಕ್ಷಿಸಲಾಗಿದೆ. ಆದರೆ ಅವರೆಲ್ಲ ಈಗ ಹೇಗಿದ್ದಾರೆ ಎನ್ನುವುದನ್ನು ಈ ಚಿತ್ರದ ಮೂಲಕ
ನೋಡಬಹುದಾಗಿದೆ.
ಫುಟ್ಬಾಲ್ ತಂಡವೊಂದರ 11-16 ವಯಸ್ಸಿನ ಬಾಲಕರು ಮತ್ತು ಅವರ 25 ವರ್ಷದ ಕೋಚ್ ಪ್ರವಾಸಕ್ಕೆಂದು ತೆರಳಿದ್ದಾಗ ಇಲ್ಲಿನ ಬೃಹತ್ ಗುಹೆಯೊಳಗೆ ತೆರಳಿದ್ದರು. ಆದರೆ, ವಿಪರೀತ ಮಳೆಯಿಂದಾಗಿ ಉಂಟಾದ ಪ್ರವಾಹದಲ್ಲಿ ಅವರು ಸಿಲುಕಿದ್ದರು. ನೀರಿನ ಮಟ್ಟ ಅಪಾಯಕಾರಿ ಪ್ರಮಾಣದಲ್ಲಿ ಇರುವುದರಿಂದ ಅವರನ್ನು ಅಲ್ಲಿಂದ ಹೊರಕ್ಕೆ ಕರೆತರಲು ಸಾಕಷ್ಟು ಹರಸಾಹಸಪಟ್ಟಿದ್ದರು, ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.
ಇನ್ನು ವೆಸ್ಟ್ಲ್ಯಾಂಡ್ನಲ್ಲೊಂದು ಮಣ್ಣಿನ ಹಬ್ಬ ಅದು ಹೇಗಿದೆ ಅಂತೀರಾ ಮುಂದೆ ಓದಿ, ಮಕ್ಕಳಿಗೆ ಮಣ್ಣೆಂದರೆ ಸಾಕು ಅದೇನೋ ಪ್ರೀತಿ ಅದರೊಂದಿಗೇ ಸ್ನೇಹ ಮಾಡಿಕೊಂಡು ಒಬ್ಬೊಬ್ಬರೆ ಮಾತನಾಡುತ್ತಾ ಆಟವಾಡುತ್ತಾ ಕುಳಿತುಬಿಡುತ್ತಾರೆ.
ಮಕ್ಕಳು ನಡೆಯಬೇಕು ಎಂದೇನೂ ಇಲ್ಲ ಅಂಬೆಗಾಲಿನಲ್ಲಿಯೇ ತೆವಳುತ್ತಾ ಹೋಗಿ ಕೂರುವುದು ಮಣ್ಣಿನಲ್ಲಿಯೇ, ರಸ್ತೆಯಲ್ಲಿ ನಡೆಯುವ ಹಾಗಿಲ್ಲ, ಅಮ್ಮನ ಕೈಗಳಿಂದ ತನ್ನ ಕೈ ಕಳಚಿಕೊಂಡು ಓಡುವುದು ಮಣ್ಣಿನಲ್ಲಿ ಆಟವಾಡಲು ಈ ಮಕ್ಕಳ ಮಣ್ಣಿನಾಟ ನೋಡಿದ್ರೆ ಎಲ್ಲರಿಗೂ ತಮ್ಮ ಬಾಲ್ಯ ನೆನಪಾಗುತ್ತದೆ.
ಕೆಸರು ಆಟ, ಕೆಸರು ಓಟ ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲ ದೇಶ ವಿದೇಶದಲ್ಲೂ ಚಾಲ್ತಿಯಲ್ಲಿದೆ, ವೆಸ್ಟ್ಲ್ಯಾಂಡ್ನಲ್ಲಿ ಪ್ರತಿ ವರ್ಷ ಹೀಗೊಂದು ಹಬ್ಬವನ್ನು ಆಚರಿಸಲಾಗುತ್ತದೆ ಅದಕ್ಕೆ ಮಡ್ ಡೇ ಅಂತಾ ಹೇಳ್ತಾರೆ. ಮಕ್ಕಳು ಮಣ್ಣಿನಲ್ಲಿ ಎಷ್ಟು ಆಡ್ತಾರೆ ಜತೆಗೆ ಎಷ್ಟು ಮಣ್ಣನ್ನು ಮೈಗೆಲ್ಲಾ ಹಚ್ಚಿಕೊಳ್ತಾರೆ ಎನ್ನೋದೆ ಆ ದಿನದ ವಿಶೇಷ. ಅದರಲ್ಲಿ ಸ್ಪರ್ಧೆ ಕೂಡ ನಡೆಯುತ್ತೆ, ಬಹುಮಾನ ಕೂಡ ಕೊಡ್ತಾರೆ.
ಕೆಸರಿನಿಂದ ತುಂಬಿದ ಪೂಲ್ ಒಂದನ್ನು ನಿರ್ಮಿಸಿ ಅದರೊಳಗೆ ಮಕ್ಕಳನ್ನು ಬಿಡ್ತಾರೆ, ಈ ಆಟದಲ್ಲಿ ಮೂರು ವರ್ಷದ ಚಾರ್ಲ್ಸ್ ಡೇವಿಸ್ಕಿಬಾ ಹಾಗೂ ಮಾಲಿ ಕೋಫಾಲ್ ವಿಜೇತರಾಗಿ ಈ ವರ್ಷದ ಮಣ್ಣಿನ ರಾಜ, ರಾಣಿಯಾಗಿದ್ದಾರೆ. ನಂತರ ಅಲ್ಲಿಯ ಅಗ್ನಿಶಾಮಕ ಸಿಬ್ಬಂದಿಗಳು ಮಕ್ಕಳಿಗೆ ನೀರು ಸಿಂಪಡಿಸಿ ಅವರ ಮೈಲ್ಲಿರುವ ಮಣ್ಣನ್ನು ತೆಗೆಯಲು ಸಹಾಯ ಮಾಡಿದ್ದಾರೆ.

ಥೈಲ್ಯಾಂಡ್ ಗುಹೆಯಲ್ಲಿ ಸಿಲುಕಿದ್ದ ಮಕ್ಕಳು ಇವರೇ
17 ದಿನಗಳ ನಿರಂತರ ಕಾರ್ಯಾಚರಣೆ ಮೂಲಕ ಥೈಲ್ಯಾಂಡ್ ಥಮ್ ಲುವಾಂಗ್ ಗುಹೆಯಲ್ಲಿ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಹೆಯಲ್ಲಿ ಒಟ್ಟು 19 ಮಂದಿ ಡೈವರ್ (ಮುಳುಗು ತಜ್ಞರು) ಹೋಗಿದ್ದು, ಹಂತ ಹಂತವಾಗಿ 12 ಜನ ಮಕ್ಕಳು ಹಾಗೂ ಒಬ್ಬ ಕೋಚ್ ಅನ್ನು ಹೊರತರುವಲ್ಲಿ ಯಶಸ್ವಿಯಾಗಿದ್ದಾರೆ.ಈ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ವೆಸ್ಟ್ಲ್ಯಾಂಡ್ನಲ್ಲೊಂದು ಮಣ್ಣಿನ ಹಬ್ಬ, ಮಕ್ಕಳ ನಲಿದಾಟ
ವೆಸ್ಟ್ ಲ್ಯಾಂಡ್ನ ನನ್ಕಿನ್ ಮಿಲ್ಸ್ ಪಾರ್ಕ್ನಲ್ಲಿ ಪ್ರತಿ ವರ್ಷ ಮಣ್ಣಿನ ದಿನವನ್ನು ಆಚರಿಸಲಾಗುತ್ತದೆ. ಅದು ಮಕ್ಕಳಿಗಾಗಿಯೇ ಹಮ್ಮಿಕೊಳ್ಳಲಾಗುತ್ತದೆ, ಮಣ್ಣಿನಲ್ಲಿ ಯಾರು ಹೆಚ್ಚು ಆಟವಾಡ್ತಾರೋ ಅಂತವರಿಗೆ ಬಹುಮಾನವನ್ನು ಕೂಡ ನೀಡಲಾಗುತ್ತದೆ, ಈ ದಿನದಲ್ಲಿ ಚಾರ್ಲ್ಸ್ ಡೆವಿಸ್ಕಿಬಾ, ಹಾಗೂ ಮಾಲಿ ಕೋಫಲ್ ಮಡ್ ಡೇ ರಾಜ ರಾಣಿಯಾದರು.

ಭಾರತ-ರಷ್ಯಾ ವಿದೇಶಿ ವಿನಿಮಯದಲ್ಲಿ ಭಾರತದ ಫ್ಲ್ಯಾಗ್ನೊಂದಿಗೆ ಮೆಕ್ಸಿಕೊ ಮಹಿಳೆ
ರಷ್ಯಾ ಹಾಗೂ ಭಾರತ ವಿದೇಶಿ ವಿನಿಮಯ ಕಾರ್ಯಕ್ರಮದಲ್ಲಿ ಮೆಕ್ಸಿಕೊ ಮಹಿಳೆಯೊಬ್ಬಳು ರಷ್ಯಾ ಮತ್ತು ಭಾರತದ ಫ್ಲ್ಯಾಗ್ನೊಂದಿಗೆ ಕಾಣಿಸಿಕೊಂಡಿದ್ದು ಹೀಗೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಜಗನ್ನಾಥ ದೇವಾಲಯಕ್ಕೆ ಭೇಟಿ
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಹಮದಾಬಾದ್ನಲ್ಲಿರುವ ಜಗನ್ನಾಥ ದೇವಸ್ಥಾನಕ್ಕೆ ಭೇಟಿ ನೀಡಿ ಜಗನ್ನಾಥ ದೇವರ 141ನೇ ರಥಯಾತ್ರೆಯಲ್ಲಿ ಪಾಲ್ಗೊಂಡರು.

ವಿಶ್ವ ಅಥ್ಲೆಟಿಕ್ಸ್ನಲ್ಲಿ ಚಿನ್ನದ ಪದಕ ತಂದುಕೊಟ್ಟ ಹಿಮಾ ದಾಸ್
ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತ ಪರ ಮೊದಲ ಚಿನ್ನದ ಪದಕ ಗೆದ್ದ ಹಿಮಾ ದಾಸ್ ಇತಿಹಾಸ ಸೃಷ್ಟಿಸಿದ್ದಾರೆ. ಫಿನ್ ಲ್ಯಾಂಡ್ ನಲ್ಲಿ ನಡೆದ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ ಹಿಮದಾಸ್ ಚಿನ್ನದ ಪದಕ ಗೆದ್ದು ದೇಶದ ಗೌರವ ಹೆಚ್ಚಿಸಿದ್ದರು. 18 ನೇ ವರ್ಷದ ಹಿಮಾ ದಾಸ್ 400 ಮೀಟರ್ ಓಟವನ್ನು 51.46 ಸೆಕೆಂಡ್ ಗಳಲ್ಲಿ ಸ್ಪರ್ಧೆಯನ್ನು ಪೂರ್ಣಗೊಳಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications