ಪಾಕಿಸ್ತಾನವಾಯ್ತು, ಇನ್ನು ಪ್ಯಾಲೆಸ್ತೇನ್ ಗೂ ನೆರವು ನೀಡೋಲ್ಲ: ಟ್ರಂಪ್
ವಾಷಿಂಗ್ಟನ್ ಡಿಸಿ, ಜನವರಿ 03: ಪಾಕಿಸ್ತಾನಕ್ಕೆ ಅಮೆರಿಕ ನೀಡುತ್ತಿದ್ದ ಆರ್ಥಿಕ ನೆರವನ್ನು ನಿಲ್ಲಿಸುವ ನಿರ್ಧಾರಕ್ಕೆ ಬಂದೇ ಒಂದೇ ದಿನದಲ್ಲಿ ಇದೀಗ ಮತ್ತೊಂದು ಮಹತ್ವದ ನಿರ್ಧಾರಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂದಿದ್ದಾರೆ.
ಪ್ಯಾಲೆಸ್ತೇನ್ ಗೂ ಆರ್ಥಿಕ ನೆರವನ್ನು ನಿಲ್ಲಿಸಲು ಅವರು ಚಿಂತಿಸಿದ್ದಾರೆ. ಇಸ್ರೇಲ್ ನೊಂದಿಗೆ ಶಾಂತಿ ಕಾಯ್ದುಕೊಳ್ಳಲು ಪ್ಯಾಲೆಸ್ತೇನ್ ಸಿದ್ಧವಿಲ್ಲದ ಕಾರಣ ಅಮೆರಿಕ ಈ ನಿರ್ಧಾರ ಕೈಗೊಳ್ಳಲು ನಿರ್ಧರಿಸಿದೆ ಎಂದಿದ್ದಾರೆ.

"ಕೇವಲ ಪಾಕಿಸ್ತಾನಕ್ಕಷ್ಟೇ ಅಲ್ಲ, ನಾವು ಹಲವು ದೇಶಗಳಿಗೆ ಕೋಟಿ ಕೋಟಿ ಡಾಲರ್ ನೀಡಿ, ಹಿಂತಿರುಗಿ ಏನನ್ನೂ ಪಡೆದಿಲ್ಲ. ಉದಾಹರಣೆಗೆ ನಾವು ಪ್ಯಾಲೆಸ್ತೇನ್ ಗೆ ನೂರಾರು ದಶಕೋಟಿ ಡಾಲರ್ ಗಳನ್ನು ಪ್ರತಿವರ್ಷ ನೆರವಿನ ರೂಪದಲ್ಲಿ ನೀಡುತ್ತೇವಾದರೂ, ಪ್ಯಾಲೆಸ್ತೇನ್ ಕಡೆಯಿಂದ ನಮಗೆ ಯಾವುದೇ ಮೆಚ್ಚುಗೆಯಾಗಲೀ, ಗೌರವವಾಗಲಿ ಸಿಕ್ಕಿಲ್ಲ. ಅವರು ನಮ್ಮಿಂದ ಪಡೆದ ಸಾಲವನ್ನು ವಾಪಸ್ ಮಾಡುವ ಮನಸ್ಸನ್ನೂ ಮಾಡಿಲ್ಲ" ಎಂದು ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡುವ ಮೂಲಕ ತಮ್ಮ ಮುಂದಿನ ಗುರಿ ಪ್ಯಾಲೆಸ್ತೇನ್ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.
It's not only Pakistan that we pay billions of dollars to for nothing, but also many other countries, and others. As an example, we pay the Palestinians HUNDRED OF MILLIONS OF DOLLARS a year and get no appreciation or respect. They don’t even want to negotiate a long overdue...
— Donald J. Trump (@realDonaldTrump) January 2, 2018
'ಭಯೋತ್ಪಾದನೆಗೆ ಕುಮ್ಮಕ್ಕುನೀಡುವ, ಭಯೋತ್ಪಾದಕರನ್ನು ಸಲಹುವ ಪಾಕಿಸ್ತಾನಕ್ಕೆ ಇನ್ನು ಮೇಲೆ ಆರ್ಥಿಕ ನೆರವು ನೀಡುವುದಿಲ್ಲ' ಎಂದು ಹೊಸ ವರ್ಷದ ಮೊದಲ ದಿನವೇ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿದ್ದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications