ಬಾಂಬ್ ಬೆದರಿಕೆ: ಮಾಸ್ಕೋದಿಂದ ಗೋವಾಕ್ಕೆ ಹೊರಟಿದ್ದ ವಿಮಾನ ಉಜ್ಬೇಕಿಸ್ತಾನಕ್ಕೆ
ಪಣಜಿ, ಜನವರಿ 21: ರಷ್ಯಾದ ರಾಜಧಾನಿ ಮಾಸ್ಕೋದಿಂದ 240 ಪ್ರಯಾಣಿಕರೊಂದಿಗೆ ಗೋವಾಕ್ಕೆ ಹೊರಟಿದ್ದ ಚಾರ್ಟರ್ಡ್ ವಿಮಾನವನ್ನು ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಉಜ್ಬೇಕಿಸ್ತಾನ್ಗೆ ತಿರುಗಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾರ್ಟರ್ಡ್ ವಿಮಾನವು ಗೋವಾದ ದಾಬೋಲಿಮ್ ವಿಮಾನ ನಿಲ್ದಾಣದಲ್ಲಿ ಮುಂಜಾನೆ 4:15 ಕ್ಕೆ ಇಳಿಯಬೇಕಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾಗೆ ತಿಳಿಸಿದ್ದಾರೆ.
ಅಜುರ್ ಏರ್ ಕಂಪೆನಿ ನಿರ್ವಹಿಸುತ್ತಿದ್ದ ಈ ವಿಮಾನ (AZV2463) ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವ ಮೊದಲು ಅದನ್ನು ತಿರುಗಿಸಲಾಯಿತು. ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂದು ಉಲ್ಲೇಖಿಸಿರುವ ಡಾಬೋಲಿಮ್ ವಿಮಾನ ನಿಲ್ದಾಣದ ನಿರ್ದೇಶಕರಿಂದ 12:30ಕ್ಕೆ ಇಮೇಲ್ ಬಂದ ನಂತರ ಅದನ್ನು ಬೇರೆಡೆಗೆ ತಿರುಗಿಸಲಾಗಿದೆ ಎಂದು ಅಧಿಕಾರಿ ಹೇಳಿದರು.

ಬಾಂಬ್ ಬೆದರಿಕೆಯ ನಂತರ ಮಾಸ್ಕೋದಿಂದ ಗೋವಾ ವಿಮಾನವು ಗುಜರಾತ್ನ ಜಾಮ್ನಗರ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಸುಮಾರು ಎರಡು ವಾರಗಳ ನಂತರ ಈ ಘಟನೆ ಸಂಭವಿಸಿದೆ. ಯುರೋಪ್, ಏಷ್ಯಾ, ಆಫ್ರಿಕಾ ಮತ್ತು ಮಧ್ಯ ಅಮೆರಿಕದ ಸ್ಥಳಗಳಿಗೆ ಸೇವೆಗಳನ್ನು ಒದಗಿಸುವ ರಷ್ಯಾದ ಚಾರ್ಟರ್ ಏರ್ನ ಅಜುರ್ ಏರ್ ವಿಮಾನವು 2 ಶಿಶುಗಳು ಮತ್ತು 7 ಸಿಬ್ಬಂದಿ ಸೇರಿದಂತೆ ಒಟ್ಟು 238 ಪ್ರಯಾಣಿಕರನ್ನು ಹೊಂದಿತ್ತು ಎಂದು ವಿಮಾನ ನಿಲ್ದಾಣದ ಮೂಲಗಳು ದೃಢಪಡಿಸಿವೆ.
ವಿಮಾನ ನಿಲ್ದಾಣದ ಮೂಲಗಳ ಪ್ರಕಾರ, ಈ ಚಾರ್ಟರ್ಡ್ ವಿಮಾನವು ರಷ್ಯಾದ ಪೆರ್ಮ್ ನಗರದ ನೈಋತ್ಯಕ್ಕೆ 16 ಕಿಲೋಮೀಟರ್ ದೂರದಲ್ಲಿರುವ ಬೊಲ್ಶೋಯ್ ಸವಿನೋದಲ್ಲಿರುವ ಪೆರ್ಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿತ್ತು ಎಂದು ತಿಳಿದು ಬಂದಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications