US-Iran ceasefire: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಶೇ. 20ರಷ್ಟು ದಾಖಲೆಯ ಕುಸಿತ
ನವದೆಹಲಿ / ವಾಷಿಂಗ್ಟನ್: ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಹಾಗೂ ಐತಿಹಾಸಿಕ ಬೆಳವಣಿಗೆಯೊಂದು ನಡೆದಿದೆ. ಅಮೆರಿಕ ಹಾಗೂ ಇರಾನ್ ನಡುವೆ ದಿಢೀರ್ ಕದನ ವಿರಾಮ ಘೋಷಣೆಯಾದ ಹಿನ್ನೆಲೆಯಲ್ಲಿ, ಕಚ್ಚಾ ತೈಲ ಬೆಲೆಯಲ್ಲಿ ಬರೋಬ್ಬರಿ ಶೇಕಡಾ 20ರಷ್ಟು ಭಾರೀ ಕುಸಿತ ಉಂಟಾಗಿದೆ. ಮಂಗಳವಾರದ ವಹಿವಾಟಿನ ಆರಂಭದಲ್ಲಿ ಪ್ರತಿ ಬ್ಯಾರೆಲ್ಗೆ 117.63 ಡಾಲರ್ನಷ್ಟಿದ್ದ ತೈಲ ಬೆಲೆ, ಕದನ ವಿರಾಮದ ಘೋಷಣೆಯಾಗುತ್ತಿದ್ದಂತೆ ಕೇವಲ ಕೆಲವೇ ಗಂಟೆಗಳಲ್ಲಿ 91.05 ಡಾಲರ್ಗೆ ತೀವ್ರವಾಗಿ ಕುಸಿದಿದೆ. ಒಂದೇ ದಿನ ಪ್ರತಿ ಬ್ಯಾರೆಲ್ ಬೆಲೆಯಲ್ಲಿ 26 ಡಾಲರ್ ಕಡಿಮೆಯಾಗಿದ್ದು, ಇದು ಏಪ್ರಿಲ್ 2020ರಲ್ಲಿ ಕೋವಿಡ್-19 ಮಹಾಮಾರಿಯಿಂದ ಜಾಗತಿಕ ಬೇಡಿಕೆ ಸಂಪೂರ್ಣವಾಗಿ ಕುಸಿದಾಗ ಸಂಭವಿಸಿದ ಅತಿದೊಡ್ಡ ಕುಸಿತದ ನಂತರದ ಮತ್ತೊಂದು ಅತಿ ದೊಡ್ಡ ಪತನವಾಗಿದೆ.
ಕಳೆದ 40 ದಿನಗಳಿಂದ ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿದ್ದ ತೀವ್ರ ಸಂಘರ್ಷದಿಂದಾಗಿ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆ ಅಕ್ಷರಶಃ ನಡುಗಿ ಹೋಗಿತ್ತು. ಯುದ್ಧದ ಭೀತಿಯಿಂದ ತೈಲ ಬೆಲೆ ಗಗನಕ್ಕೇರಿತ್ತು. ಆದರೆ ಮಂಗಳವಾರದ ಶಾಂತಿ ಒಪ್ಪಂದದ ಘೋಷಣೆಯು ಮಾರುಕಟ್ಟೆಯನ್ನು ಆವರಿಸಿದ್ದ ಈ 'ವಾರ್ ಪ್ರೀಮಿಯಂ' (ಯುದ್ಧದ ಆತಂಕದಿಂದ ಹೆಚ್ಚಾಗಿದ್ದ ಬೆಲೆ) ಅನ್ನು ಕ್ಷಣಾರ್ಧದಲ್ಲಿ ಇಲ್ಲವಾಗಿಸಿದೆ. ಈ ಬೆಳವಣಿಗೆಯಿಂದ ಜಾಗತಿಕ ತೈಲ ಪೂರೈಕೆ ವ್ಯವಸ್ಥೆಗೆ ಎದುರಾಗಿದ್ದ ಬಹುದೊಡ್ಡ ಕಂಟಕ ದೂರವಾಗಿದೆ.

ಈ ದಿಢೀರ್ ಕುಸಿತದ ಪ್ರಮುಖ ಕೇಂದ್ರಬಿಂದು ಹಾರ್ಮುಜ್ ಜಲಸಂಧಿ (Strait of Hormuz). ಇದು ಪ್ರಪಂಚದ ಅತಿ ಪ್ರಮುಖ ತೈಲ ಸಾಗಾಣಿಕಾ ಮಾರ್ಗವಾಗಿದ್ದು, ಜಾಗತಿಕ ಮಟ್ಟದಲ್ಲಿ ವ್ಯಾಪಾರವಾಗುವ ಕಚ್ಚಾ ತೈಲದ ಐದನೇ ಒಂದು ಭಾಗ ಅಂದರೆ ಶೇ. 20ರಷ್ಟು ತೈಲ ಇದೇ ಕಿರಿದಾದ ಜಲಮಾರ್ಗದ ಮೂಲಕವೇ ಪ್ರತಿದಿನ ಸಾಗಣೆಯಾಗುತ್ತದೆ. ಕಳೆದ 40 ದಿನಗಳಿಂದ ನಡೆಯುತ್ತಿದ್ದ ಸಂಘರ್ಷದ ವೇಳೆ, ಈ ಜಲಸಂಧಿಯನ್ನು ಮುಚ್ಚುವ ಅಥವಾ ತೈಲ ಸಾಗಣೆಗೆ ನಿರ್ಬಂಧ ಹೇರುವ ಬೆದರಿಕೆಯನ್ನು ಇರಾನ್ ಒಡ್ಡುತ್ತಲೇ ಇತ್ತು. ಈ ಬೆದರಿಕೆಗಳು ಜಾಗತಿಕ ತೈಲ ಪೂರೈಕೆ ಸಂಪೂರ್ಣವಾಗಿ ಸ್ಥಗಿತಗೊಳ್ಳುವ ಆತಂಕವನ್ನು ಸೃಷ್ಟಿಸಿ, ತೈಲ ಬೆಲೆಗಳ ಗಣನೀಯ ಏರಿಕೆಗೆ ಕಾರಣವಾಗಿದ್ದವು.
ಇರಾನ್ನ ಈ ಎಚ್ಚರಿಕೆಗಳಿಂದ ಇಡೀ ವಿಶ್ವದ ಇಂಧನ ಮಾರುಕಟ್ಟೆಗಳಲ್ಲಿ ತುರ್ತು ಪರಿಸ್ಥಿತಿಯ ವಾತಾವರಣ ನಿರ್ಮಾಣವಾಗಿತ್ತು. ಎಲ್ಲಾ ಪ್ರಮುಖ ದೇಶಗಳ ಆರ್ಥಿಕತೆಗಳು ತೈಲದ ಕೊರತೆಯ ಭೀತಿಯನ್ನು ಎದುರಿಸುತ್ತಿದ್ದವು. ತೈಲ ಬೆಲೆಗಳ ತೀವ್ರ ಏರಿಕೆಯಿಂದಾಗಿ ಸಾರಿಗೆ, ಕೈಗಾರಿಕೆ ಹಾಗೂ ಉತ್ಪಾದನಾ ವಲಯಗಳಲ್ಲಿ ವೆಚ್ಚ ಅಧಿಕವಾಗುವ ಅಪಾಯ ಎದುರಾಗಿತ್ತು. ಆದರೆ, ಈಗ ಯುಎಸ್-ಇರಾನ್ ಕದನ ವಿರಾಮದ ಘೋಷಣೆಯು ಈ ಎಲ್ಲಾ ಆತಂಕಗಳಿಗೆ ತೆರೆ ಎಳೆದಿದೆ.
ಜಾಗತಿಕ ಮಾರುಕಟ್ಟೆಯಲ್ಲಿನ ಈ ದಿಢೀರ್ ಬೆಳವಣಿಗೆ, ವಿಶೇಷವಾಗಿ ತಮ್ಮ ಇಂಧನ ಅಗತ್ಯಗಳಿಗಾಗಿ ಶೇಕಡಾ 80ಕ್ಕೂ ಹೆಚ್ಚು ಆಮದನ್ನೇ ಅವಲಂಬಿಸಿರುವ ಭಾರತದಂತಹ ದೇಶಗಳಿಗೆ ಬಹುದೊಡ್ಡ ರಿಲೀಫ್ ನೀಡಲಿದೆ. ಕಚ್ಚಾ ತೈಲದ ಬೆಲೆ ಅಗ್ಗವಾಗುವುದರಿಂದ ದೇಶದ ಆಮದು ವೆಚ್ಚ ಗಣನೀಯವಾಗಿ ತಗ್ಗಲಿದ್ದು, ವಿತ್ತೀಯ ಕೊರತೆಯನ್ನು ಸರಿದೂಗಿಸಲು ಇದು ನೆರವಾಗಲಿದೆ. ಜೊತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕೂಡ ಇಳಿಕೆಯಾಗುವ ಸಾಧ್ಯತೆಯಿದೆ.
-
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Jowar Price: ಕರ್ನಾಟಕದ ಮಾರುಕಟ್ಟೆಗಳಲ್ಲಿ ಜೋಳದ ದರ ಏರಿಳಿತ; ಇಲ್ಲಿದೆ ಜಿಲ್ಲಾವಾರು ಬೆಲೆ ಪಟ್ಟಿ -
Karnataka Rain: ಬೆಂಗಳೂರು ಸೇರಿ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ: ಐಎಂಡಿ ವರದಿ -
Zomato: ಬೆಂಗಳೂರು Vs ಚೆನ್ನೈ ಸಾಂಬಾರ್ ಎಂದ ಝೊಮ್ಯಾಟೊ; ನಮಗೆ ಸ್ವಿಗ್ಗಿ ಸಾಕು ಎಂದ ನೆಟ್ಟಿಗರು -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
SSLC ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡಿಂಗ್: ಸರ್ಕಾರದ ದಿಢೀರ್ ನಿರ್ಧಾರಕ್ಕೆ ಖಾಸಗಿ ಶಾಲೆಗಳ ತೀವ್ರ ವಿರೋಧ -
ರಾಜ್ಯದಲ್ಲಿ ತೃತೀಯ ಭಾಷೆ 'ಆಟಕ್ಕುಂಟು ಲೆಕ್ಕಕ್ಕಿಲ್ಲ', ಆದರೆ ಕೇಂದ್ರದಿಂದ ಕಡ್ಡಾಯದ ಹೊಸ ಆದೇಶ : ರಾಜೀವ ಹೆಗಡೆ ಬರಹ -
RCB Vs CSK ಮ್ಯಾಚ್ ನೋಡಲು ಬರೋಬ್ಬರಿ 1.46 ಲಕ್ಷ ಕಳೆದುಕೊಂಡ ಕಳೆದುಕೊಂಡ ಟೆಕ್ಕಿ, ಐಪಿಎಲ್ ಅಭಿಮಾನಿಗಳೇ ಹುಷಾರ್ -
April 6 Horoscope: ಈ ರಾಶಿಗಳಿಗೆ ಲಾಭ, ಕೆಲವರಿಗೆ ಎಚ್ಚರಿಕೆ ಸೂಚನೆ














Click it and Unblock the Notifications