ಮಂಗಳೂರು-ಕುವೈಟ್ ಪ್ರಯಾಣಿಕರೇ ಗಮನಿಸಿ

ಕರ್ನಾಟಕ ರಾಜ್ಯ ಮಾತ್ರವಲ್ಲದೆ ನೆರೆ ರಾಜ್ಯಗಳಾದ ಕೇರಳ, ಗೋವಾ ಕಡೆ ಹೋಗುತ್ತಿದ್ದ ಕುವೈಟಿಗಳಿಗೂ ಇದರಿಂದ ತೊಂದರೆಯಾಗಲಿದೆ. ಮುಂಬರುವ ವರ್ಷದಿಂದ ವಿಮಾನಯಾನ ಸೇವೆ ಸ್ಥಗಿತಗೊಳಿಸಲು ಏರ್ ಇಂಡಿಯಾ ನಿರ್ಧರಿಸಿದೆ. ಏಪ್ರಿಲ್ 1 ರಿಂದ ಬೇಸಿಗೆ ವೇಳಾಪಟ್ಟಿ ಬದಲಾವಣೆ ಕಾಣುತ್ತಿದ್ದು ಕುವೈಟ್-ಮಂಗಳೂರು-ಕೊಚ್ಚಿ ವಿಮಾನಯಾನ ಸೇವೆಯನ್ನು ಪಟ್ಟಿಯಿಂದ ಹೊರಗಿಡಲಾಗಿದೆ.
ವಿಮಾನಯಾನ ಸೇವೆ ಗುತ್ತಿಗೆ ಆಧಾರದ ಮೇಲೆ ನಡೆಯುತ್ತಿದ್ದು,. ಏರ್ ಇಂಡಿಯಾ ವಿಮಾನಗಳ ಕೊರತೆ ಅನುಭವಿಸುತ್ತಿರುವುದರಿಂದ ಈ ರೀತಿ ಪ್ರಯಾಣಿಕ ವಿರೋಧಿ ನಿಲುವು ತೆಗೆದುಕೊಳ್ಳಬೇಕಿದೆ ಎಂದು ಏರ್ ಇಂಡಿಯಾ ಅಧಿಕಾರಿಯೊಬ್ಬರು ಹೇಳಿದ್ದಾರೆ.
ವಾರಕ್ಕೆ ಮೂರು ಸಲ ಕೊಚ್ಚಿಯಿಂದ ಮಂಗಳೂರು ಮಾರ್ಗವಾಗಿ ಕುವೈಟ್ ಗೆ ವಿಮಾನ ಹಾರಾಟ ಕಾಣುತ್ತಿತ್ತು. ಈಗ ಈ ಸೇವೆ ನಿಂತರೆ ಕ್ಯಾಲಿಕಟ್ ನಿಂದ ಮಾತ್ರ ಕುವೈಟ್ ಕಡೆಗೆ ವಿಮಾನಯಾನ ಸಾಧ್ಯವಿದೆ.
ವಿಜಯ್ ಮಲ್ಯ ಒಡೆತನದ ಕಿಂಗ್ ಫಿಷರ್ ಇನ್ನೂ ಆರ್ಥಿಕ ಬಿಕ್ಕಟ್ಟಿನ ಪಂಜರದಿಂದ ಹೊರ ಬಂದಿಲ್ಲ. ಈ ನಡುವೆ ಏರ್ ಇಂಡಿಯಾ ವಿಮಾನಗಳು ಮತ್ತೆ ಮೇಲಕ್ಕೇರುವಂತೆ ಮಾಡಲು ಸರ್ಕಾರ ಸಹಾಯ ಹಸ್ತ ಚಾಚಿತ್ತು.
ಉನ್ನತ ಮಟ್ಟದ ಕಾರ್ಯದರ್ಶಿಗಲ ಸಭೆಯಲ್ಲಿ ಏರ್ ಇಂಡಿಯಾ ಪುನುರುತ್ಥಾನಕ್ಕೆ ಸುಮಾರು 30,000 ಕೋಟಿ ರು ನೀಡಲು ಮುಂದಾಗಿ ಎರಡು ಮೂರು ವರ್ಷಗಳೇ ಕಳೆದಿದೆ. ಈ ಬೇಲ್ ಔಟ್ ಯೋಜನೆಗೆ ಹಲವರ ವಿರೋಧ ವ್ಯಕ್ತವಾಗಿದೆ. ಏರ್ ಲೈನ್ ಗೆ ಸಹಾಯ ಹಸ್ತ ಚಾಚುವ ಮೂಲಕ ಖಾಸಗಿಯವರಿಗೆ ತನ್ನ ಷೇರುಗಳನ್ನು ಮಾರಾಟ ಮಾಡುವುದೇ ಸರ್ಕಾರದ ಉದ್ದೇಶ ಎನ್ನಲಾಗುತ್ತಿದೆ ಎಂಬ ಕೂಗಿದೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications