Air India flight: ಬಾಂಬ್ ಬೆದರಿಕೆ ಹಿನ್ನೆಲೆ- ಲಂಡನ್ನಲ್ಲಿ ಏರ್ ಇಂಡಿಯಾ ವಿಮಾನಕ್ಕೆ ಎಮರ್ಜನ್ಸಿ ಘೋಷಣೆ
Bomb Threat Air India: ಬಾಂಬ್ ಬೆದರಿಕೆ ಹಿನ್ನೆಲೆ ಏರ್ ಇಂಡಿಯಾ ಪ್ರಯಾಣಿಕರ ವಿಮಾನಕ್ಕೆ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ವಿಮಾನದಲ್ಲಿ ದೊಡ್ಡ ಮಟ್ಟದ ಸದ್ದು ಕೇಳಿಬಂದಿದೆ. ಏರ್ ಇಂಡಿಯಾ ವಿಮಾನವು ಮುಂಬೈನಿಂದ ಲಂಡನ್ಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.
ಇಂದು ಐದು ಏರ್ ಇಂಡಿಯಾ ವಿಮಾನಗಳು, ಎರಡು ವಿಸ್ತಾರಾ ವಿಮಾನಗಳು ಮತ್ತು ಎರಡು ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದವೆ ಎಂದು ವರದಿಯಾಗಿದೆ. ಈ ವಾರವಿಡೀ ವಿಮಾನಯಾನ ಸಂಸ್ಥೆಗಳಿಗೆ ಇದೇ ರೀತಿಯ ಕರೆಗಳು ಬರುತ್ತಲೇ ಇವೆ.

ಲಂಡನ್ ಬಳಿ ಇರುವ ವಿಮಾನಕ್ಕೆ ಸಾಮಾನ್ಯ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಲಾಗಿದೆ. ಸ್ಕ್ವಾಕಿಂಗ್ 7700 ಕೋಡ್ ಅನ್ನು ಬಳಸಿ ಎಮರ್ಜನ್ಸಿಯನ್ನು ಘೋಷಿಸಲಾಗಿದೆ. ಸಾಮಾನ್ಯ ತುರ್ತು ಪರಿಸ್ಥಿತಿಯನ್ನು ಘೋಷಿಸಲು ಪೈಲಟ್ಗಳು ಈ ಕೋಡ್ ಅನ್ನು ಬಳಸುತ್ತಾರೆ. ಆನ್ಲೈನ್ ಫ್ಲೈಟ್ ಟ್ರ್ಯಾಕಿಂಗ್ ವೆಬ್ಸೈಟ್ ಆಗಿರುವ ಫ್ಲೈಟ್ ರೆಡಾರ್ 24 ಈ ಕುರಿತ ಮಾಹಿತಿಯನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದೆ.
ಏರ್ ಇಂಡಿಯಾ ಕಂಪನಿಯಿಂದ ನಿರ್ವಹಿಸಲ್ಪಡುವ ಬೋಯಿಂಗ್ 777 ಮುಂಬೈನಿಂದ 7 ಗಂಟೆ 5 ನಿಮಿಷಕ್ಕೆ ಟೇಕ್ ಆಫ್ ಆಗಿತ್ತು. ಇದು ಪೂರ್ವ ಇಂಗ್ಲಿಂಡ್ ಅನ್ನು ತಲುಪುತ್ತಿದ್ದಂತೆ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು.
#AI129 from Mumbai to London is squawking 7700, indicating a general emergency. Reason currently unknown. https://t.co/vxipNBzfSO
— Flightradar24 (@flightradar24) October 17, 2024
More info on 'squawking 7700' here. https://t.co/CRoOOMhDKB pic.twitter.com/uadlHmvSEG
AI129 ಸಂಖ್ಯೆ ಹೊಂದಿರುವ ವಿಮಾನವು ತನ್ನ ನಿಗದಿತ ಲ್ಯಾಂಡಿಂಗ್ಗೆ ಒಂದು ಗಂಟೆ ಮೊದಲು ತುರ್ತು ಪರಿಸ್ಥಿತಿಯನ್ನು ಘೋಷಿಸಿತು. ಯನೈಟೈಡ್ ಕಿಂಗ್ಡಮ್ ಸಮಯದ ಪ್ರಕಾರ, ಮಧ್ಯಾಹ್ನ 12:05 ಕ್ಕೆ ಈ ವಿಮಾನವು ಲ್ಯಾಂಡಿಂಗ್ ಆಗಬೇಕಿತ್ತು. ಇತ್ತೀಚಿನ ಮಾಹಿತಿಯ ಪ್ರಕಾರ, ವಿಮಾನವು ಲಂಡನ್ ಹೀಥ್ರೂ ನಿಲ್ದಾನದಲ್ಲಿ ಸುರಕ್ಷಿತವಾಗಿ ಇಳಿಯಿತು.
ಈ ವಾರದಾದ್ಯಂತ ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಕರೆಗಳು ಬರುತ್ತಲೇ ಇವೆ. ಏರ್ ಇಂಡಿಯಾಗೆ ಬಂದಿರುವ ಬೆದರಿಕೆಗಳು ಸತತ ನಾಲ್ಕನೇ ದಿನವೂ ಮುಂದುವರೆದಿದೆ. ಈ ಅವಧಿಯಲ್ಲಿ ಕನಿಷ್ಠ 20 ವಿಮಾನಗಳಿಗೆ ಬೆದರಿಕೆ ಕರೆಗಳು ಬಂದಿವೆ. ಇಂದು ಐದು ಏರ್ ಇಂಡಿಯಾ ವಿಮಾನಗಳ ಜೊತೆಗೆ ಎರಡು ವಿಸ್ತಾರಾ ಮತ್ತು ಎರಡು ಇಂಡಿಗೋ ವಿಮಾನಗಳಿಗೂ ಸಹ ಬೆದರಿಕೆ ಕರೆಗಳು ಬಂದಿವೆ.
ಸುಮಾರು 147 ಪ್ರಯಾಣಿಕರನ್ನು ಹೊತ್ತು ಫ್ರಾಂಕ್ಫರ್ಟ್ನಿಂದ ಮುಂಬೈಗೆ ಹೊರಟಿದ್ದ ವಿಸ್ತಾರಾ ವಿಮಾನಕ್ಕೂ ಬಾಂಬ್ ಕರೆಗಳು ಬಂದಿತ್ತು. ಇದು ಮುಂಬೈಗೆ ಆಗಮಿಸಿದ ಬಳಿಕ ಭದ್ರತಾ ತಪಾಸಣೆಗೆ ಒಳಪಡಿಸಲಾಯಿತು.
ಇದೇ ರೀತಿ ಇಸ್ತಾನ್ಬುಲ್ನಿಂದ ಮುಂಬೈಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೂ ಬಾಂಬ್ ಬೆದರಿಕೆ ಬಂದಿತ್ತು. ವಿಮಾನಯಾನ ಅಧಿಕಾರಿಗಳು ಸಂಪೂರ್ಣ ಭದ್ರತಾ ತಪಾಸಣೆಗಾಗಿ ಈ ವಿಮಾನವನ್ನು ಬೇರೆಡೆಗೆ ತೆಗೆದುಕೊಂಡು ಹೋಗಿದ್ದರ ಬಗ್ಗೆ ವರದಿಯಾಗಿತ್ತು.
ಇಸ್ತಾನ್ಬುಲ್ನಿಂದ ಮುಂಬೈಗೆ ಬರುತ್ತಿದ್ದ ವಿಮಾನವು ಭದ್ರತಾ ಅಧಿಕಾರಿಗಳಿಂದ ಎಚ್ಚರಿಕೆಯನ್ನು ಸ್ವೀಕರಿಸಿತ್ತು. ವಿಮಾನವು ಲ್ಯಾಂಡ್ ಆದ ನಂತರ ವಿಮಾನವನ್ನು ಪ್ರತ್ಯೇಕವಾಗಿ ಬೇರೆಡೆಗೆ ಸಾಗಿಸಲಾಯಿತು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಇಳಿಸಲಾಯಿತು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಇಂಡಿಗೋ ಅಧಿಕಾರಿಗಳು ಹೆಚ್ಚಿನ ವಿವರಗಳನ್ನು ನೀಡಲು ನಿರಾಕರಿಸಿದ್ದಾರೆ.
ರಾಷ್ಟ್ರೀಯ ಮಾಧ್ಯಮಗಳ ವರದಿಯ ಪ್ರಕಾರ, ಕೇಂದ್ರ ಸರ್ಕಾರವು ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಸಫಲವಾಗಿದೆ. ಬಾಂಬ್ ಬೆದರಿಕೆಯಂತಹ ಘಟನೆಗಳ ಕುರಿತು ಕೇಂದ್ರ ಗೃಹ ಸಚಿವಾಲಯವು ನಾಗರಿಕ ವಿಮಾನಯಾನ ಸಚಿವಾಲಯದಿಂದ ವಿವರವಾದ ವರದಿಯನ್ನು ಕೇಳಿದೆ.
ಬಾಂಬ್ ಬೆದರಿಕೆಗಳ ಕುರಿತು ಮಾಹಿತಿ ನೀಡುವಂತೆ ವಿಮಾನಯಾನ ಸಂಸ್ಥೆಗಳಿಗೂ ಕೇಂದ್ರ ಗೃಹ ಸಚಿವಾಲಯ ತಿಳಿಸಿದೆ. ಮಾಹಿತಿಗಳ ಆಧಾರದ ಮೇಲೆ ನಾಗರಿಕ ವಿಮಾನಯಾನ ಸಚಿವಾಲಯವು ವರದಿಯನ್ನು ಸಂಗ್ರಹಿಸಲಿದೆ.
ಈ ಕುರಿತು ಹೇಳಿಕೆ ನೀಡಿರುವ ನಾಗರಿಕ ವಿಮಾನಯಾನ ಸಚಿವ ಕೆ. ರಾಮಮೋಹನ್ ನಾಯ್ಡು ಅವರು, 'ನಾವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಕಟ್ಟುನಿಟ್ಟಿನ ಭದ್ರತೆಯನ್ನು ಕಾಪಾಡಿಕಲು ನಾವು ಬದ್ಧರಾಗಿದ್ದೇವೆ. ಪ್ರಯಾಣಿಕರ ಸುರಕ್ಷತೆಯು ನಮ್ಮ ಪ್ರಮುಖ ಆದ್ಯತೆಯಾಗಿದೆ' ಎಂದು ಹೇಳಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications