Just in: ಪಾಕಿಸ್ತಾನದಲ್ಲಿ ಇಳಿದ ಭಾರತದ ವಿಮಾನ, ಕಾರಣ ನಿಗೂಢ!
ಇಸ್ಲಮಾಬಾದ್, ಆಗಸ್ಟ್ 16: 12 ಪ್ರಯಾಣಿಕರೊಂದಿಗೆ ಭಾರತದಿಂದ ಹೊರಟಿದ್ದ ಚಾರ್ಟರ್ ವಿಮಾನವೊಂದು ಸೋಮವಾರ ಪಾಕಿಸ್ತಾನದ ಕರಾಚಿಯ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ವರದಿಗಳ ಪ್ರಕಾರ, ವಿಮಾನವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟಿದ್ದ 12 ಪ್ರಯಾಣಿಕರಿದ್ದ ವಿಮಾನವೂ ಕರಾಚಿ ವಿಮಾನ ನಿಲ್ದಾಣದಲ್ಲಿ ಇಳಿದಿದೆ.
ಪಾಕಿಸ್ತಾನದ ಕರಾಚಿಯಲ್ಲಿ ಇಳಿದ ಸ್ವಲ್ಪ ಸಮಯದ ನಂತರ, ವಿಶೇಷ ವಿಮಾನವು ವಾಪಸ್ ಹೊರಟಿದೆ. ಆದರೆ, ಈ ವಿಮಾನ ಕರಾಚಿ ವಿಮಾನ ನಿಲ್ದಾಣದಲ್ಲಿ ಏಕೆ ಇಳಿದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ನಾಗರಿಕ ವಿಮಾನಯಾನ ಪ್ರಾಧಿಕಾರ (ಸಿಎಎ) ಈ ಘಟನೆಯನ್ನು ದೃಢಪಡಿಸಿದೆ. ಅಂತರರಾಷ್ಟ್ರೀಯ ಚಾರ್ಟರ್ ವಿಮಾನವು ಭಾರತದಿಂದ ಹೊರಟಿದೆ ಅಷ್ಟೆ. ಅದಕ್ಕೆ ದೇಶದೊಂದಿಗೆ ಬೇರೆ ಯಾವುದೇ ಸಂಬಂಧವು ಇಲ್ಲ ಎಂದಿದೆ.
ತಾಂತ್ರಿಕ ಸಮಸ್ಯೆಗಳಿಂದಾಗಿ ಕಳೆದ ತಿಂಗಳು ಭಾರತದ ಎರಡು ವಿಮಾನಗಳು ಕರಾಚಿಗೆ ಬಂದಿಳಿದಿದ್ದವು.
ಪೈಲೆಟ್ ತಾಂತ್ರಿಕ ತೊಂದರೆ ಪತ್ತೆ ಹಚ್ಚಿದ ಹಿನ್ನೆಲೆಯಲ್ಲಿ ಶಾರ್ಜಾ- ಹೈದರಾಬಾದ್ ನಡುವಿನ ಇಂಡಿಗೋ ವಿಮಾನವನ್ನು ಮುಂಜಾಗ್ರತಾ ಕ್ರಮವಾಗಿ ಕರಾಚಿಯಲ್ಲಿ ಇಳಿಸಲಾಗಿತ್ತು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಜುಲೈ 17 ರಂದು ಪ್ರಕಟಣೆ ಮೂಲಕ ಇಂಡಿಗೋ ಮಾಹಿತಿ ನೀಡಿತ್ತು.
ಭಾರತದ ಕಡಿಮೆ ಪ್ರಯಾಣದರದ ವಿಮಾನವಾದ ಇಂಡಿಗೋ ಕರಾಚಿಯಿಂದ ಹೈದರಾಬಾದ್ಗೆ ಆಗಮಿಸುತ್ತಿತ್ತು. ಸದ್ಯ ಕರಾಚಿಯಲ್ಲಿರುವ ಪ್ರಯಾಣಿಕರನ್ನು ಕರೆತರಲು ಮತ್ತೊಂದು ವಿಮಾನವನ್ನು ಕಳಿಸಲಾಗಿದೆ ಎಂದು ಸಂಸ್ಥೆ ತಿಳಿಸಿತ್ತು.
ಈ ಹಿಂದೆ, ಸ್ಪೈಸ್ಜೆಟ್ನ ದೆಹಲಿ-ದುಬೈ ವಿಮಾನದಲ್ಲಿಯೂ ತಾಂತ್ರಿಕ ತೊಂದರೆ ಕಾರಣದಿಂದಾಗಿ ಜುಲೈ 5 ರಂದು ಕರಾಚಿ ಜಿನ್ನಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತ್ತು.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications