ಇಸ್ರೇಲ್ ಪಡೆಗಳ ಗುಂಡೇಟಿಗೆ ಅಲ್ ಜಜಿರಾ ಪತ್ರಕರ್ತೆ ಶಿರೀನ್ ಅಬು ಅಕ್ಲೆಹ್ ಸಾವು
ಜೆರುಸಲೆಂ, ಮೇ 11: ಇಸ್ರೇಲಿ ಪಡೆಗಳ ಆಕ್ರಮಿತ ಪಶ್ಚಿಮ ದಂಡೆಯಲ್ಲಿ ಅಲ್ ಜಜೀರಾದ ಪತ್ರಕರ್ತೆ ಶಿರೀನ್ ಅಬು ಅಕ್ಲೆಹ್ ಅವರನ್ನು ಗುಂಡಿಕ್ಕಿ ಕೊಂದು ಹಾಕಲಾಗಿದೆ ಎಂದು ಪ್ಯಾಲೇಸ್ತಿನಿಯನ್ ಆರೋಗ್ಯ ಸಚಿವಾಲಯ ಹೇಳಿದೆ.
ಜೆನಿನ್ ನಗರದಲ್ಲಿ ಬುಧವಾರ ಇಸ್ರೇಲಿ ದಾಳಿಗಳ ಬಗ್ಗೆ ವರದಿ ಮಾಡುತ್ತಿರುವ ಸಂದರ್ಭದಲ್ಲಿ ಗುಂಡಿನ ದಾಳಿ ನಡೆಸಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆಸ್ಪತ್ರೆಯಲ್ಲಿ ಆಕೆ ಮೃತಪಟ್ಟಿದ್ದಾಳೆ ಎಂದು ಸಚಿವಾಲಯ ತಿಳಿಸಿದೆ.
ಗುಂಡಿನ ದಾಳಿಯಲ್ಲಿ ಮತ್ತೊಬ್ಬ ಅಲ್ ಜಜೀರಾ ಪತ್ರಕರ್ತ ಅಲಿ ಸಮೌದಿ ಬೆನ್ನಿಗೆ ಗುಂಡು ತಗುಲಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ಗುಂಡು ಹಾರಿಸಿದ ಸಂದರ್ಭದಲ್ಲಿ ಯಾವುದೇ ಪ್ಯಾಲೇಸ್ಟಿನಿಯನ್ ಹೋರಾಟಗಾರರು ಇರಲಿಲ್ಲ ಎಂದು ಹೇಳಿದರು.

ಗುಂಡಿನ ದಾಳಿ ಬಗ್ಗೆ ಪತ್ರಕರ್ತನ ಮಾತು:
"ನಾವು ಇಸ್ರೇಲಿ ಸೇನಾ ಕಾರ್ಯಾಚರಣೆಯನ್ನು ಚಿತ್ರೀಕರಿಸಲು ಹೋಗುತ್ತಿದ್ದೆವು. ಇದ್ದಕ್ಕಿದ್ದಂತೆ ಅವರು ನಮ್ಮನ್ನು ಬಿಡಲು ಅಥವಾ ಚಿತ್ರೀಕರಣವನ್ನು ನಿಲ್ಲಿಸಲು ಕೇಳದೆ ಗುಂಡು ಹಾರಿಸಿದರು" ಎಂದು ಸಮೌದಿ ಹೇಳಿದರು. "ಮೊದಲ ಗುಂಡು ನನಗೆ ತಗುಲಿತು ಮತ್ತು ಎರಡನೆಯ ಬುಲೆಟ್ ಶಿರೀನ್ಗೆ ತಗುಲಿತು. ಈ ವೇಳೆ ಘಟನಾ ಸ್ಥಳದಲ್ಲಿ ಯಾವುದೇ ಪ್ಯಾಲೇಸ್ಟಿನಿಯನ್ ಮಿಲಿಟರಿ ಪ್ರತಿರೋಧವಿರಲಿಲ್ಲ" ಎಂದರು.
ಪತ್ರಕರ್ತರನ್ನು ಗುರಿಯಾಗಿಸಿಕೊಂಡು ದಾಳಿ:
ಶಿರೀನ್ ಅಬು ಅಕ್ಲೆಹ್ ಮೇಲೆ ಗುಂಡು ಹಾರಿಸಿದಾಗ ಅವರ ಪಕ್ಕದಲ್ಲಿದ್ದ ಪ್ಯಾಲೆಸ್ತೀನ್ ಪತ್ರಕರ್ತೆ ಶತಾ ಹನಯ್ಶಾ ಅವರು ಅಲ್ ಜಜೀರಾಗೆ ಪ್ಯಾಲೆಸ್ತೀನ್ ಹೋರಾಟಗಾರರು ಮತ್ತು ಇಸ್ರೇಲಿ ಸೇನೆಯ ನಡುವೆ ಯಾವುದೇ ಘರ್ಷಣೆ ನಡೆದಿಲ್ಲ ಎಂದು ಹೇಳಿದರು. ಅಲ್ಲದೇ ಪತ್ರಕರ್ತರ ಗುಂಪನ್ನು ಗುರಿಯಾಗಿಸಲಾಗಿದೆ ಎಂದು ದೂಷಿಸಿದರು.
Recommended Video
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications