ಭಾರತ ವಿರುದ್ಧ ಜಿಹಾದ್, ಯೆಮೆನ್ ಉಗ್ರ ಸಂಘಟನೆ ಅಲ್ ಖೈದಾ ಕರೆ
ನವದೆಹಲಿ, ಮೇ 5: ಕೊರೊನಾ ವಿರುದ್ಧ ಹೋರಾಟ ನಡೆಸಿರುವ ಭಾರತದ ವಿರುದ್ಧ ಮುಸ್ಲಿಮರು ಜಿಹಾದ್ ನಡೆಸಬೇಕಿದೆ ಎಂದು ಅರಬ್ ಪ್ರಸ್ಥಭೂಮಿ(AQAP)ಭೂಮಿಯ ಯೆಮನ್ ಅಲ್ ಖೈದಾ ಉಗ್ರ ಸಂಘಟನೆ ಕರೆ ನೀಡಿದೆ. ಈ ಹಿಂದೆ ಕಾಶ್ಮೀರದಲ್ಲಿರುವ ಉಗ್ರರಿಗೆ ಭಾರತದ ವಿರುದ್ಧ ಸಮರ ಸಾರುವಂತೆ ಉಗ್ರ ಸಂಘಟನೆಯ ಮುಖ್ಯಸ್ಥ ಅಯ್ಮಾನ್ ಅಲ್ ಜವಾಹಿರಿ ಕರೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಜಾಗತಿಕವಾಗಿ ನಿಷೇಧಕ್ಕೊಳಗಾಗಿರುವ ಯೆಮನ್ ನ ಅಲ್ ಖೈದಾ ಸಂಘಟನೆ ಪ್ರಕಾರ, ಮುಸ್ಲಿಮರ ವಿರುದ್ಧ ನಡೆದಿರುವ ಜಾಗತಿಕ ಸಮರದಲ್ಲಿ ಭಾರತವೂ ಕೈಜೋಡಿಸಿದೆ. ಭಾರತವನ್ನು ಇಸ್ಲಾಮೋಫೋಬಿಕ್ ಎಂದು ಕುವೈಟ್ ಸರ್ಕಾರ, ಅರಬ್ ಸಂಘಟನೆಗಳು, ಇಸ್ಲಾಮಿಕ್ ಕೋ ಆಪರೇಷನ್ ಆರ್ಗನೈಜೇಷನ್(ಒಐಸಿ) ಪರಿಗಣಿಸಿದೆ ಎಂದು ಅಲ್ ಖೈದಾ ಹೇಳಿದೆ.
ನಾಗರಿಕ ತಿದ್ದುಪಡಿ ಕಾಯ್ದೆ ಗೊಂದಲ, ತಬ್ಲಿಘಿ ಸಂಘಟನೆ ಮೇಲೆ ಆರೋಪ ಎಲ್ಲವೂ ಭಾರತವನ್ನು ಜಾಗತಿಕವಾಗಿ ಮುಸ್ಲಿಂ ದ್ವೇಷಿ ಎಂದು ತೋರಿಸಲು ಪಾಕಿಸ್ತಾನ ಹೂಡಿರುವ ತಂತ್ರವಾಗಿದೆ. ಇದಕ್ಕೆ ಪೂರಕವಾಗಿ ಅರಬ್ ಸಂಘಟನೆಗಳು ಭಾರತದ ವಿರುದ್ಧ ತಿರುಗಿ ಬಿದ್ದಿರುವುದನ್ನು ಕಾಣಬಹುದು.

ಅಮೆರಿಕದ ಟ್ವಿನ್ ಟವರ್ ಮೇಲೆ ಸೆಪ್ಟೆಂಬರ್ 11ರಂದು ದಾಳಿ ನಡೆಸಿದ ಅಲ್ ಖೈದಾ ಉಗ್ರ ಸಂಘಟನೆಯ ಪರಿವರ್ತಿತ ಗುಂಪಾಗಿ AQAP ಗುರುತಿಸಿಕೊಂಡಿದೆ. ಆದ್ರೆ, ಅಲ್ ಖೈದಾ ಸ್ಥಾಪಕ ಒಸಾಮಾ ಬಿನ್ ಲಾಡೆನ್ ಆಶಯದಂತೆ ನಡೆಯುತ್ತಿದ್ದು, ಈಜಿಪ್ಟಿನ ಡಾಕ್ಟರ್ ಆಯ್ಮಾನ್ ಅಲ್ ಜವಾಹಿರಿ ಸದ್ಯ ಯೆಮನ್ ಹಾಗೂ ಸೌದಿ ಅರೇಬಿಯಾದಿಂದ ಉಗ್ರ ಸಂಘಟನೆಗಳನ್ನು ಪ್ರೇರಿಸುತ್ತಿದ್ದಾನೆ. ಎಲ್ಲರೂ ಒಂದಾಗಿ ಶಸ್ತ್ರಾಸ್ತ್ರ ಹಿಡಿದು ಜಿಹಾದ್ ಮಾಡಲು ಮುಂದಾಗಿ ಎಂದು ಕರೆ ನೀಡಿದ್ದಾನೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ












Click it and Unblock the Notifications