ದ್ವೀಪವೊಂದರಲ್ಲಿ ಆಲಿಬಾಬ ಸಂಸ್ಥಾಪಕ ಜಾಕ್ ಮಾ ಪ್ರತ್ಯಕ್ಷ
ಬೀಜಿಂಗ್, ಫೆ 11: ಚೀನಾದ ಕಮ್ಯೂನಿಸ್ಟ್ ಸರಕಾರದ ಕೆಂಗಣ್ಣಿಗೆ ಗುರಿಯಾಗಿರುವ, ಆಲಿಬಾಬ ಗ್ರೂಪ್ ಆಫ್ ಕಂಪೆನಿಯ ಸಂಸ್ಥಾಪಕ ಜಾಕ್ ಮಾ, ದೇಶದ ದ್ವೀಪವೊಂದರಲ್ಲಿದ್ದಾರೆಂದು ವರದಿಯಾಗಿದೆ.
ಕಳೆದ ಐದು ತಿಂಗಳಿನಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳದ ಜಾಕ್ ಮಾ, ದಕ್ಷಿಣ ಚೀನಾ ಸಮುದ್ರದ ಹೈನಾನ್ ದ್ವೀಪವೊಂದರ ಐಷಾರಾಮಿ ರೆಸಾರ್ಟಿನಲ್ಲಿದ್ದಾರೆಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ.
ಹೈನಾನ್ ದ್ವೀಪದ ಪಂಚತಾರಾ ಸನ್ ವಾಲಿ ಗಾಲ್ಫ್ ರೆಸಾರ್ಟ್ ನಲ್ಲಿ ಜಾಕ್ ಮಾ ಗಾಲ್ಫ್ ಆಡುತ್ತಿರುವುದನ್ನು ಹೆಸರು ಹೇಳಲು ಇಚ್ಚಿಸದವರೊಬ್ಬರು ನೋಡಿದ್ದಾರೆ ಎಂದು ಬ್ಲೂಮ್ ಬರ್ಗ್ ವರದಿ ಮಾಡಿದೆ.

ಚೀನಾ ಸರಕಾರದ ವಾಣಿಜ್ಯ ನೀತಿಯನ್ನು ಖಂಡಿಸಿ ಜಾಕ್ ಮಾ ಹೇಳಿಕೆ ನೀಡಿದ ನಂತರ ಇವರು ನಾಪತ್ತೆಯಾಗಿದ್ದರು. ಹಲವು ಉದ್ಯಮಿಗಳಿಗೆ ಪ್ರೇರಣೆಯಾಗಿದ್ದ ಜಾಕ್ ಮಾ ಅವರ ನಾಪತ್ತೆ ವಿಚಾರ ವಿಶ್ವಮಟ್ಟದಲ್ಲಿ ಭಾರೀ ಸುದ್ದಿಯಾಗಿತ್ತು.
ತಮ್ಮ ಸರಕಾರದ ವಿರುದ್ದ ಧ್ವನಿ ಎತ್ತಿದ್ದಕ್ಕೆ ಚೀನಾ ಸರಕಾರವೇ ಜಾಕ್ ಮಾ ಮೇಲೆ ದ್ವೇಷ ಸಾಧಿಸುತ್ತಿದೆ ಎನ್ನುವ ಆರೋಪ ಕೇಳಿಬರುತ್ತಿತ್ತು. ಇದಾದ ನಂತರ ಕಳೆದ ಜನವರಿ ಇಪ್ಪತ್ತರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಕರಿಗೆ ಶುಭಾಶಯ ಕೋರಿದ್ದರು.
ಚೀನಾ ಸರಕಾರ ಜಾಕ್ ಮಾ ವಿರುದ್ದ ದ್ವೇಷ ಸಾಧಿಸುತ್ತಿದೆ ಎನ್ನುವುದಕ್ಕೆ ಇನ್ನೊಂದು ಉದಾಹರಣೆಯೆಂದರೆ, ಚೀನಾದ ಸರ್ಕಾರಿ ಮಾಧ್ಯಮವು ಪ್ರಕಟಿಸಿರುವ ದೇಶದ ಪ್ರಮುಖ ಉದ್ಯಮಶೀಲರ ಪಟ್ಟಿಯಿಂದ ಜಾಕ್ ಮಾ ಅವರ ಹೆಸರನ್ನು ಕೈಬಿಟ್ಟಿರುವುದು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications