ಶಿಂಜೊ ಅಬೆ ರಾಜಕೀಯ ನೀತಿಗಳಿಂದ ಕೋಪಗೊಂಡು ಹತ್ಯೆ ಮಾಡಿದ್ದೇನೆ ಎಂದ ಯಮಗಾಮಿ
ಜಪಾನ್ನ ಮಾಜಿ ಪ್ರಧಾನಿ ಮತ್ತು ಪ್ರಭಾವಿ ರಾಜಕಾರಣಿ ಶಿಂಜೊ ಅಬೆ ಅವರನ್ನು ಜುಲೈ 8 ರಂದು ನಾರಾ ನಗರದಲ್ಲಿ ರಾಜಕೀಯ ರ್ಯಾಲಿ ನಡೆಸುತ್ತಿದ್ದಾಗ ಗುಂಡಿಕ್ಕಿ ಕೊಲ್ಲಲಾಗಿದೆ. ಗುಂಡು ಹಾರಿಸಿದ ಟೆಟ್ಸುಯಾ ಯಮಗಾಮಿ ಎಂಬ ವ್ಯಕ್ತಿಯನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.
ಯಮಗಾಮಿ ಹ್ಯಾಂಡ್ಮೇಡ್ ಶಾಟ್ಗನ್ನಿಂದ ಶಿಂಜೊ ಅಬೆಗೆ ಗುಂಡು ಹಾರಿಸಿದ್ದರು ಎಂದು ಹೇಳಲಾಗಿದೆ. ಬುಲೆಟ್ ಮಾಜಿ ಪ್ರಧಾನಿಯ ಹೃದಯಕ್ಕೆ ತಾಗಿದೆ ಎಂದು ವರದಿಯಾಗಿದೆ. ಎದೆಗೆ ಗುಂಡು ತಗುಲಿದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು ಮತ್ತು ಕೆಲವೇ ಹೊತ್ತಿನಲ್ಲಿ ಅವರು ಸಾವನ್ನಪ್ಪಿದರು.
ರಾಜಕೀಯ ರ್ಯಾಲಿಯಲ್ಲಿ ಶಿಂಜೊ ಅಬೆಗೆ ಗುಂಡು ಹಾರಿಸಿದ ಕಾರಣವನ್ನು ಟೆಟ್ಸುಯಾ ಯಮಗಾಮಿ ಬಹಿರಂಗಪಡಿಸಿದ್ದಾನೆ ಎಂದು ಸ್ಥಳೀಯ ಪೊಲೀಸರು ಹೇಳಿದ್ದಾರೆ. ಜಪಾನ್ನ ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಯಮಗಾಮಿ ಶಿಂಜೊ ಅಬೆ ರಾಜಕೀಯ ನೀತಿಗಳ ಕುರಿತು ಅತೃಪ್ತನಾಗಿದ್ದ ಎಂದು ಪೊಲೀಸ್ ವಿಚಾರಣೆಯ ಸಮಯದಲ್ಲಿ ಹೇಳಿದ್ದಾನೆ.

ಮಾತ್ರವಲ್ಲದೆ, ತಾನು ದ್ವೇಷಿಸುತ್ತಿದ್ದ ಸಂಘಟೆಯ ಜೊತೆ ಮಾಜಿ ಪ್ರಧಾನಿ ಅಬೆ ಸಂಪರ್ಕ ಹೊಂದಿದ್ದರು ಎಂದು ಯಮಗಾಮಿ ನಂಬಿದ್ದ, ಇದರಿಂದ ಆಕ್ರೋಶಗೊಂಡು ಅಬೆ ಮೇಲೆ ಗುಂಡು ಹಾರಿಸಿದ್ದಾನೆ ಎಂದು ನಾರಾ ಸಿಟಿ ಪೊಲೀಸರು ಹೇಳಿದ್ದಾರೆ.
ಹೆಚ್ಚಿನ ವಿವರ ಬಹಿರಂಗಪಡಿಸದ ಪೊಲೀಸರು
ಕೊಲೆಗಾರ ಮತ್ತು ಮಾಜಿ ಪ್ರಧಾನಿಯನ್ನು ಕೊಲ್ಲಲು ಅವನ ಉದ್ದೇಶಗಳ ಬಗ್ಗೆ ಹೆಚ್ಚಿನ ಮಾಹಿತಿ ಬಹಿರಂಗಪಡಿಸದಿದ್ದರೂ, ಯಮಗಾಮಿ ಶಿಂಜೊ ಅಬೆ ಅವರ ರಾಜಕೀಯ ನಿಲುವಿನಿಂದ ಅಸಮಾಧಾನಗೊಂಡಿದ್ದ ಎಂದು ವರದಿಯಾಗಿದೆ. ಟೆಟ್ಸುಯಾ ಯಮಗಾಮಿ ವಿಚಾರಣೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನೂ ಬಹಿರಂಗಗೊಳ್ಳಬೇಕಿದೆ.

ಟೆಟ್ಸುಯಾ ಯಮಗಾಮಿ ಸಾರ್ವಜನಿಕ ರ್ಯಾಲಿಯಲ್ಲಿ ಜನಸಮೂಹವನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಶಿಂಜೊ ಅಬೆಗೆ ಗುಂಡು ಹಾರಿಸಿದ್ದಾನೆ. ಯಮಗಾಮಿ ಕೈಯಿಂದ ತಯಾರಿಸಿದ ಶಾಟ್ಗನ್ ಬಳಸಿ ಗುಂಡು ಹಾರಿಸಿದ್ದ ಮತ್ತು ಇತರ ಉಪಕರಣಗಳ ಜೊತೆಗೆ 3ಡಿ ಪ್ರಿಂಟರ್ ಅನ್ನು ಬಳಸಿದ್ದ ಎನ್ನಲಾಗಿದೆ.
ಶಿಂಜೊ ಅಬೆ ಎದೆಗೆ ಗುಂಡು ತಗುಲಿ ನೆಲದ ಮೇಲೆ ಕುಸಿದು ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ತೀವ್ರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
ದಾಳಿಕೋರನ ಬಗ್ಗೆ ಪೊಲೀಸರು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲವಾದರೂ, ಯಮಗಾಮಿ ಮಾಜಿ ಜಪಾನ್ ಮಾರಿಟೈಮ್ ಸೆಲ್ಫ್ ಡಿಫೆನ್ಸ್ ಫೋರ್ಸ್ ಸದಸ್ಯ ಎಂದು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ. ಆತ 2005 ರವರೆಗೆ ಜಪಾನ್ ಮಾರಿಟೈಮ್ ಸೆಲ್ಫ್ ಡಿಫೆನ್ಸ್ ಫೋರ್ಸ್ನಲ್ಲಿ ಮೂರು ವರ್ಷಗಳ ಕಾಳ ಕೆಲಸ ಮಾಡಿದ್ದ ಎಂದು ವರದಿಯಾಗಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿ, ಜಪಾನ್ನ ಮಾಜಿ ಪ್ರಧಾನಿ ಶಿಂಜೊ ಅಬೆ ನಿಧನಕ್ಕೆ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ, "ನನ್ನ ಆತ್ಮೀಯ ಸ್ನೇಹಿತರಲ್ಲೊಬ್ಬರಾದ ಶಿಂಜೋ ಅಬೆ ದುರಂತ ನಿಧನದಿಂದ ನಾನು ಆಘಾತಕ್ಕೊಳಗಾಗಿದ್ದೇನೆ ಮತ್ತು ದುಃಖಿತನಾಗಿದ್ದೇನೆ" ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications