Ukraine: ರಷ್ಯಾ ಸೇನಾ ದಾಳಿಯಲ್ಲಿ 3 ಉಕ್ರೇನ್ ನಾಗರಿಕರ ಸಾವು ಆರೋಪ
ರಷ್ಯಾ ಸೇನೆಯಿಂದ ಉಕ್ರೇನ್ ವಿರುದ್ಧ ಭಾರಿ ದೊಡ್ಡ ಮಟ್ಟದಲ್ಲಿ ದಾಳಿ ಶುರುವಾಗಿದ್ದು, ಮತ್ತೆ ಮತ್ತೆ ನಾಗರಿಕರು ವಾಸ ಇರುವ ಜಾಗಗಳನ್ನೇ ಗುರಿಯಾಗಿಸಿ ರಷ್ಯಾ ದಾಳಿ ಮಾಡುತ್ತಿದೆ ಎನ್ನುವ ಆರೋಪವನ್ನ ಉಕ್ರೇನ್ ಮಾಡುತ್ತಿದೆ. ಕಳೆದ 4 ದಿನಗಳಿಂದ ತನ್ನ ದಾಳಿಯನ್ನು ಮತ್ತಷ್ಟು ಘೋರ ರೀತಿಯಲ್ಲಿ ಮುಂದುವರಿಸಿರುವ ರಷ್ಯಾ ಮಿಲಿಟರಿ, ಉಕ್ರೇನ್ ಸೇನೆಗೆ ಸುಧಾರಿಸಿಕೊಳ್ಳಲು ಕೂಡ ಸಮಯ ಕೊಡುತ್ತಿಲ್ಲ. ಆ ರೇಂಜ್ಗೆ ದಾಳಿ ನಡೆಯುತ್ತಿರುವ ಕಾರಣ ಭಯದ ವಾತಾವರಣ ಕೂಡ ಶುರುವಾಗಿದ್ದು, ಚಳಿಗಾಲದ ನಡುವೆ ಉಕ್ರೇನ್ ನಿವಾಸಿಗಳಿಗೆ ಮತ್ತಷ್ಟು ಸಮಸ್ಯೆ ಎದುರಾಗಿದೆ.
ಉಕ್ರೇನ್ ರಾಜಧಾನಿ ಕೀವ್ ಸುತ್ತಮುತ್ತಲ ಪ್ರದೇಶದ ಮೇಲೆ ರಷ್ಯಾ ಡ್ರೋನ್ & ಕ್ಷಿಪಣಿ ದಾಳಿಯನ್ನು ನಡೆಸಿದೆ. ಈ ರೀತಿ ರಷ್ಯಾ ನಡೆಸಿದ ದಿಢೀರ್ ದಾಳಿಯ ಪರಿಣಾಮವಾಗಿ, ಕನಿಷ್ಠ 3 ಜನ ಮೃತಪಟ್ಟು ಹತ್ತಾರು ಮಂದಿ ಗಾಯಗೊಂಡಿದ್ದಾರೆ ಎಂದು ಉಕ್ರೇನ್ ಅಧಿಕಾರಿಗಳು ಆರೋಪಿಸಿದ್ದಾರೆ. ಹೀಗೆ, ರಷ್ಯಾ ಮತ್ತು ಉಕ್ರೇನ್ ತಿಕ್ಕಾಟ ಇನ್ನಷ್ಟು ಜೋರಾಗಿದೆ.

ಅಮೆರಿಕ ನೇತೃತ್ವದಲ್ಲಿ ಒಂದು ಕಡೆ, ಶಾಂತಿ ಮಾತುಕತೆ ನಡೆಯುತ್ತಿದ್ದರೆ ಇನ್ನೊಂದು ಕಡೆ ಈ ರೀತಿಯ ಬೇಡದ ಜಗಳ ಕೂಡ ಹೆಚ್ಚು ಹೆಚ್ಚಾಗುತ್ತಿದೆ. ಮುಂದಿನ ವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ಚರ್ಚೆಗಾಗಿ ಅಮೆರಿಕದ ನಿಯೋಗ ಮಾಸ್ಕೋ ಕಡೆಗೆ ಪ್ರಯಾಣ ಬೆಳೆಸುವ ನಿರೀಕ್ಷೆ ಇದ್ದು, ಟ್ರಂಪ್ ಈ ಬಗ್ಗೆ ಮುಂಜಾಗ್ರತೆ ವಹಿಸಿದ್ದಾರೆ.
ಯುದ್ಧ ನಿಲ್ಲಿಸಲು ರಷ್ಯಾ ಒಪ್ಪಿಗೆ?
ಉಕ್ರೇನ್ ವಿರುದ್ಧ ಕಳೆದ 4 ವರ್ಷಗಳಿಂದ ಬಡಿದಾಡುತ್ತಿರುವ ರಷ್ಯಾಗೆ ಈಗ ಯುದ್ಧ ಸಾಕಾಗಿದೆ ಅಂತಾ ಕಾಣುತ್ತದೆ. ಇದೇ ಕಾರಣಕ್ಕೆ ಈಗಾಗಲೇ ಅಮೆರಿಕ ಸೂಚಿಸಿರುವ ಶಾಂತಿ ಮಾತುಕತೆಗಾಗಿ ರಷ್ಯಾ ಸಿದ್ಧವಾಗಿದೆ. ಆದರೆ ಉಕ್ರೇನ್ ಮಾತ್ರ ತನ್ನ ಹಠ ಮುಂದುವರಿಸಿದ ಕಾರಣಕ್ಕೆ, ರಷ್ಯಾ ಸೇನೆ ಈಗ ನಿರಂತರವಾಗಿ ದಾಳಿ ಮಾಡುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ. ಮತ್ತೊಂದು ಕಡೆ ಈ ದಾಳಿಗೆ ಪ್ರತಿಯಾಗಿ ಉಕ್ರೇನ್ ಕೂಡ ಅಟ್ಯಾಕ್ ಮಾಡಲು ಚಿಂತನೆ ನಡೆಸುತ್ತಿದೆ.
ಉಕ್ರೇನ್ ರಾಜಧಾನಿ ವಶಕ್ಕೆ ರಷ್ಯಾ ಸಿದ್ಧತೆ?
ಇಷ್ಟೆಲ್ಲದರ ನಡುವೆ ರಷ್ಯಾ ಸ್ಕೆಚ್ ನೇರವಾಗಿ ಉಕ್ರೇನ್ ರಾಜಧಾನಿ ಕೀವ್ ಆಗಿದೆ ಎಂಬ ಆರೋಪ ಕೂಡ ಕೇಳಿ ಬರುತ್ತಿದೆ. ಹೇಗೆದಂರೆ ಚಳಿಗಾಲದ ಸಮಯದಲ್ಲಿ ಉಕ್ರೇನ್ ಸೇನೆಯ ಜಾಲವನ್ನು ಹಿಂದೆ ಹಾಕಿ ಕೀವ್ ಪ್ರದೇಶವನ್ನ ಮುತ್ತಿಗೆ ಹಾಕಲು ರಷ್ಯಾ ಸಿದ್ಧತೆ ನಡೆಸಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆ ಉಕ್ರೇನ್ ಸೇನೆ ಕೂಡ ಈಗ ಒಂದಷ್ಟು ಹೆದರಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications