ಒಂದೇ ಬಾಂಬ್.. 35 ಮಂದಿಯ ಜೀವ ಹಾರಿಹೋಯ್ತು..
ಇಸ್ರೇಲ್ & ಹಮಾಸ್ ಯುದ್ಧದಲ್ಲಿ ಸಾಮಾನ್ಯ ಜನರ ಪ್ರಾಣಪಕ್ಷಿ ಹಾರಿಹೋಗುವುದು ಮತ್ತೆ ಮುಂದುವರಿದಿದೆ. ಕಳೆದ ಕೆಲ ದಿನಗಳಿಂದ ಇಬ್ಬರ ನಡುವೆ ಭೀಕರ ಯುದ್ಧ ನಡೆಯುತ್ತಿದೆ. ಅದ್ರಲ್ಲೂ ಹಮಾಸ್ ಸಂಘಟನೆ ಪೂರ್ತಿ ನಾಶ ಆಗುವವರೆಗೂ ನಾವು ಯುದ್ಧ ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಸೇನೆಯು ಹೇಳುತ್ತಿದೆ. ಈ ಸಮಯದಲ್ಲೇ ಇಸ್ರೇಲ್ ಸೇನೆ ಹಾಕಿದ ಬಾಂಬ್ ಈಗ ನಿರಾಶ್ರಿತರ ಶಿಬಿರದ ಮೇಲೆ ಬಿದ್ದುಬಿಟ್ಟಿದೆ.
ಅಂದಹಾಗೆ ಇಸ್ರೇಲ್ ಸೇನೆ & ಹಮಾಸ್ ನಡುವೆ ನಡೆಯುತ್ತಿರುವ ತಿಕ್ಕಾಟದಲ್ಲಿ ಈಗ ಗಾಜಾ ಪಟ್ಟಿ ಪ್ರದೇಶ ಅಕ್ಷಶಃ ನರಕವಾಗಿ ಬದಲಾಗಿ ಹೋಗಿದೆ. ಅದರಲ್ಲೂ ಗಾಜಾ ಪಟ್ಟಿಯ ದಕ್ಷಿಣ ಪ್ರದೇಶ ರಫಾದ ನಿರಾಶ್ರಿತರ ಟೆಂಟ್ಗಳ ಮೇಲೆ ಇಸ್ರೇಲ್ ಸೇನೆ ವಾಯುದಾಳಿಯ ನಡೆಸಿದ್ದು, 35 ಜನ ಮೃತಪಟ್ಟಿದ್ದಾರೆ ಅಂತ ಪ್ಯಾಲೆಸ್ಟೀನ್ ಆರೋಗ್ಯ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಈ ಮೂಲಕ ಇಬ್ಬರ ನಡುವಿನ ತಿಕ್ಕಾಟ ಮತ್ತೊಂದು ಹಂತಕ್ಕೆ ಹೋಗಿದ್ದು, ಸಾಲು ಸಾಲು ಸಾವು ವರದಿಯಾಗಿವೆ. ಹಾಗೇ ಜೀವ ಬಿಡುತ್ತಿರುವ ನಿರಾಶ್ರಿತರಲ್ಲಿ ಮಕ್ಕಳು ಹಾಗೂ ಮಹಿಳೆಯರೆ ಹೆಚ್ಚಾಗಿದ್ದಾರೆ.

ಯುದ್ಧ ನಿಲ್ಲಿಸಲು ಹೇಳಿತ್ತು ಕೋರ್ಟ್
ಗಾಜಾ ಪಟ್ಟಿ ಪ್ರದೇಶದ ರಫಾ ಭಾಗದಲ್ಲಿ ಕಳೆದ 3 ವಾರದಿಂದ ತಿಕ್ಕಾಟ ತೀವ್ರವಾಗಿದೆ ಈ ಹಿನ್ನೆಲೆ ಇಸ್ರೇಲ್ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ ಯುದ್ಧವನ್ನ ತಕ್ಷಣ ನಿಲ್ಲಿಸಬೇಕು ಎಂಬ ಒತ್ತಾಯ ಕೇಳಿಬಂದಿತ್ತು. ಪ್ಯಾಲೆಸ್ತೀನ್ನ ಪ್ರಜೆಗಳನ್ನ ಇಸ್ರೇಲ್ ಸೇನೆ ಬಲವಂತಾಗಿ ಸ್ಥಳಾಂತರ ಮಾಡುತ್ತಿದೆ, ಹೀಗಾಗಿ ಲಕ್ಷಾಂತರ ಜನಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇಂಟರ್ನ್ಯಾಷನಲ್ ಕೋರ್ಟ್ ಇಸ್ರೇಲ್ಗೆ ಆಘಾತ ನೀಡಿದ್ದು, ಅಲ್ಲಿ ನಡೆಯುತ್ತಿರುವ ಕಾರ್ಚಾರಣೆ ನಿಲ್ಲಿಸಿ ಎಂದಿತ್ತು ಅಂತಾರಾಷ್ಟ್ರೀಯ ನ್ಯಾಯಾಲಯ.
ಟೆಂಟ್ ಒಳಗೆ ಸುಟ್ಟು ಹೋದ ಜೀವಗಳು?
ಆದರೆ ಹೀಗೆ ರಫಾ ಪ್ರದೇಶದಲ್ಲಿ ಯುದ್ಧ ನಿಲ್ಲಿಸಿ ಎಂದು ಇಸ್ರೇಲ್ ಸೇನೆಗೆ ಅಂತಾರಾಷ್ಟ್ರೀಯ ನ್ಯಾಯಾಲಯ ಆದೇಶ ನೀಡಿದ 2 ದಿನಗಳಲ್ಲಿ ಇಸ್ರೇಲ್ ಭೀಕರ ದಾಳಿ ನಡೆಸಿದೆ. ಹೀಗಾಗಿ, ಘಟನೆ ಹಿನ್ನೆಲೆಯಲ್ಲಿ ಪರಿಸ್ಥಿತಿ ಮತ್ತಷ್ಟು ಸೂಕ್ಷ್ಮವಾಗಿದೆ. ಇದೀಗ ಇಸ್ರೇಲ್ ಸೇನೆ ನಿರಾಶ್ರಿತ ಶಿಬಿರದ ಮೇಲೆ ದಾಳಿ ನಡೆಸಿದ ನಂತರ, ಹೊತ್ತಿ ಉರಿಯುತ್ತಿರುವ ಅವಶೇಷಗಳ ಅಡಿಯಲ್ಲೂ ಜನ ಸಿಲುಕಿ ನರಳುತ್ತಿದ್ದಾರೆ ಎಂದು ಆರೋಪ ಮಾಡಲಾಗಿದೆ.
ಇಸ್ರೇಲ್ ಸೇನೆಯಿಂದ ಮಹಾ ಎಡವಟ್ಟು?
ಒಟ್ನಲ್ಲಿ ಇಸ್ರೇಲ್ & ಹಮಾಸ್ ನಡುವೆ ನಡೆಯುತ್ತಿರುವ ಕಾಳಗ ವಿನಾಶಕಾರಿ ಹಂತಕ್ಕೆ ಬಂದಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧದ ಹಿನ್ನೆಲೆ, ಇಸ್ರೇಲ್ನ ವಿರುದ್ಧ ಭಾರಿ ಆಕ್ರೋಶ ಕೂಡ ವ್ಯಕ್ತವಾಗಿತ್ತು. ಈ ನಡುವೆ ಅಂತಾರಾಷ್ಟ್ರೀಯ ನ್ಯಾಯಾಲಯ ಯುದ್ಧದ ವಿಚಾರದಲ್ಲಿ ಎಂಟ್ರಿ ಕೊಟ್ಟಿದ್ದು ಒಂದಷ್ಟು ಆಶಾಭಾವ ಸೃಷ್ಟಿ ಮಾಡಿತ್ತು. ಆದರೆ ಈಗ ನೋಡಿದರೆ ದೊಡ್ಡದಾದ ಎಡವಟ್ಟು ಮಾಡಿದೆ ಇಸ್ರೇಲ್ ಸೇನೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications