ಜೈಲಿಂದ 15,000 ಕೈದಿಗಳು ಎಸ್ಕೇಪ್, Gen Z ಹೋರಾಟದ ಮಧ್ಯೆ ಓಡಿ ಹೋದ ಕಳ್ಳರು & ಕ್ರಿಮಿನಲ್ಸ್! Nepal Protest
ನೇಪಾಳ ಹೊತ್ತಿ ಉರಿಯುತ್ತಿದ್ದು, ಶ್ರೀರಾಮನ ಪತ್ನಿ ಸೀತಾಮಾತೆ ತವರು ಇದೀಗ ಹಿಂಸಾಚಾರದ ಬೆಂಕಿ ಹಿನ್ನೆಲೆ ನಲುಗಿ ಹೋಗಿದೆ. ಒಂದು ಕಡೆ ನೇಪಾಳ ಭ್ರಷ್ಟಾಚಾರದ ವಿರುದ್ಧ ಅಲ್ಲಿನ ಯುವತಿ & ಯುವಕರು ಹೋರಾಟ ಶುರು ಮಾಡಿದ ನಂತರ, ಪ್ರಧಾನಿ ಹಾಗೂ ರಾಷ್ಟ್ರಪತಿ ಕೂಡ ರಾಜೀನಾಮೆ ನೀಡಿದ್ದಾರೆ. ಈ ಘಟನೆ ನಂತರ ನೇಪಾಳ ತಣ್ಣಗೆ ಆಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ನೇಪಾಳ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿ ಹೋಗಿದ್ದು, ಪ್ರತಿಭಟನೆ ನಡೆಸುತ್ತಿದ್ದವರು ನೇಪಾಳ ಸಂಸತ್ ಕಟ್ಟಡಕ್ಕೆ ನುಗ್ಗಿ ಬೆಂಕಿ ಹಚ್ಚಿದ್ದರು. ಮತ್ತೊಂದು ಕಡೆ ನೇಪಾಳದ ಜೈಲಿಗೆ ಕೂಡ ನುಗ್ಗಿ ಅವಾಂತರ ಸೃಷ್ಟಿಸಿದ್ದಾರೆ.
ಅಂದಹಾಗೆ ನೇಪಾಳ ನೆಲದಲ್ಲಿ ಬೃಹತ್ ಹೋರಾಟ ಶುರು ಮಾಡಿದ್ದ Gen Z ತಲೆಮಾರಿನ ಯುವಕ & ಯುವತಿಯರು ಕಂಡ ಕಂಡ ಜಾಗದಲ್ಲಿ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದರು. ಅದರಲ್ಲೂ ಮಾಜಿ ಪ್ರಧಾನಿ ಹಾಗೂ ಮಾಜಿ ಸಚಿವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಹಾಲಿ ಜನಪ್ರತಿನಿಧಿಗಳ ಪಾಡು ಯಾರಿಗೂ ಬೇಡ ಎನ್ನುವಂತೆ ಆಗಿದೆ. ಇಂತಹ ಸಮಯದಲ್ಲೇ ಮತ್ತೊಂದು ಘೋರ ಘಟನೆ ಕೂಡ, ಇದೀಗ ನೇಪಾಳದಲ್ಲಿ ಸಂಭವಿಸಿದೆ. ಪ್ರತಿಭಟನೆಯ ನಡುವೆ ಸುಮಾರು 15,000 ಕೈದಿಗಳು ಎಸ್ಕೇಪ್ ಆಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

15,000 ಕೈದಿಗಳು ಜೈಲಿಂದ ಎಸ್ಕೇಪ್!
ಹೌದು, ನೇಪಾಳ ದೇಶದಲ್ಲಿ ಪ್ರತಿಭಟನೆ ಶುರು ಮಾಡಿದ್ದ ಹೋರಾಟಗಾರರು ಜೈಲುಗಳನ್ನು ಕೂಡ ಬಿಟ್ಟಿಲ್ಲ. ಹೀಗಿದ್ದಾಗ ನೇರವಾಗಿ ಜೈಲಿಗೆ ನುಗ್ಗಿ ಅಲ್ಲಿದ್ದ ಕೈದಿಗಳನ್ನು ಕೂಡ ರಿಲೀಸ್ ಮಾಡಿದ್ದಾರೆ. ಕಳ್ಳರು, ಕೊಲೆಗಾರರು, ಕ್ರಿಮಿನಲ್ ಹಿನ್ನೆಲೆ ಇರುವ ಸುಮಾರು 15,000 ಕೈದಿಗಳು ಇದೇ ಸಮಯವನ್ನ ಬಳಸಿಕೊಂಡು ಇದೀಗ ನೇಪಾಳದ ಜೈಲುಗಳಿಂದ ಎಸ್ಕೇಪ್ ಆಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ಓಡಿ ಹೋಗಿರುವ ಜೈಲು ಹಕ್ಕಿಗಳ ಹುಡುಕಾಟಕ್ಕೆ ಇದೀಗ ಅಲ್ಲಿನ ಸೇನೆ ಮುಂದಾಗಿದೆ.
ಹೆಲಿಕಾಪ್ಟರ್ ಹತ್ತಿಕೊಂಡು ಸಚಿವ ಎಸ್ಕೇಪ್!
ಹೌದು, ಇದೀಗ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಹಿಂಸಾಚಾರ ಪೀಡಿತ ನೇಪಾಳದ ಸಚಿವ ತನ್ನ ಕುಟುಂಬ ರಕ್ಷಣೆ ಮಾಡಿಕೊಳ್ಳಲು ನೇಪಾಳ ಸೇನೆಯ ಮೊರೆ ಹೋಗಿರುವುದು ಕಂಡು ಬಂದಿದೆ. ಇದೇ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹಲ್ಚಲ್ ಎಬ್ಬಿಸಿದೆ. ಅಂದಹಾಗೆ ನೇಪಾಳ ದೇಶದ ಕಠ್ಮಂಡು ನಗರದ ಹೋಟೆಲ್ ಮೇಲಿಂದ ಸಚಿವರೊಬ್ಬರ ಕುಟುಂಬವನ್ನು, ನೇಪಾಳ ಸೇನೆಗೆ ಸೇರಿರುವ ಹೆಲಿಕಾಪ್ಟರ್ ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡುತ್ತಿರುವ ದೃಶ್ಯ ಜಗತ್ತಿನ ಮೂಲೆ ಮೂಲೆಯಲ್ಲೂ ವೈರಲ್ ಆಗುತ್ತಿದೆ. ಹಾಗೇ ಭ್ರಷ್ಟ ರಾಜಕಾರಣಿಗಳಿಗೆ ಇದು ಎಚ್ಚರಿಕೆ ಗಂಟೆಯಾಗಬೇಕು ಎಂಬ ಅಭಿಪ್ರಾಯವನ್ನು ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಜನರು ವ್ಯಕ್ತಪಡಿಸುತ್ತಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications