ಜೈಲಿಂದ 15,000 ಕೈದಿಗಳು ಎಸ್ಕೇಪ್, Gen Z ಹೋರಾಟದ ಮಧ್ಯೆ ಓಡಿ ಹೋದ ಕಳ್ಳರು & ಕ್ರಿಮಿನಲ್ಸ್! Nepal Protest
ನೇಪಾಳ ಹೊತ್ತಿ ಉರಿಯುತ್ತಿದ್ದು, ಶ್ರೀರಾಮನ ಪತ್ನಿ ಸೀತಾಮಾತೆ ತವರು ಇದೀಗ ಹಿಂಸಾಚಾರದ ಬೆಂಕಿ ಹಿನ್ನೆಲೆ ನಲುಗಿ ಹೋಗಿದೆ. ಒಂದು ಕಡೆ ನೇಪಾಳ ಭ್ರಷ್ಟಾಚಾರದ ವಿರುದ್ಧ ಅಲ್ಲಿನ ಯುವತಿ & ಯುವಕರು ಹೋರಾಟ ಶುರು ಮಾಡಿದ ನಂತರ, ಪ್ರಧಾನಿ ಹಾಗೂ ರಾಷ್ಟ್ರಪತಿ ಕೂಡ ರಾಜೀನಾಮೆ ನೀಡಿದ್ದಾರೆ. ಈ ಘಟನೆ ನಂತರ ನೇಪಾಳ ತಣ್ಣಗೆ ಆಗಬಹುದು ಎನ್ನುವ ನಿರೀಕ್ಷೆ ಇತ್ತು. ಆದರೆ ನೇಪಾಳ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿ ಹೋಗಿದ್ದು, ಪ್ರತಿಭಟನೆ ನಡೆಸುತ್ತಿದ್ದವರು ನೇಪಾಳ ಸಂಸತ್ ಕಟ್ಟಡಕ್ಕೆ ನುಗ್ಗಿ ಬೆಂಕಿ ಹಚ್ಚಿದ್ದರು. ಮತ್ತೊಂದು ಕಡೆ ನೇಪಾಳದ ಜೈಲಿಗೆ ಕೂಡ ನುಗ್ಗಿ ಅವಾಂತರ ಸೃಷ್ಟಿಸಿದ್ದಾರೆ.
ಅಂದಹಾಗೆ ನೇಪಾಳ ನೆಲದಲ್ಲಿ ಬೃಹತ್ ಹೋರಾಟ ಶುರು ಮಾಡಿದ್ದ Gen Z ತಲೆಮಾರಿನ ಯುವಕ & ಯುವತಿಯರು ಕಂಡ ಕಂಡ ಜಾಗದಲ್ಲಿ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದರು. ಅದರಲ್ಲೂ ಮಾಜಿ ಪ್ರಧಾನಿ ಹಾಗೂ ಮಾಜಿ ಸಚಿವರ ಮನೆಗೆ ಬೆಂಕಿ ಹಚ್ಚಿದ್ದಾರೆ. ಇನ್ನು ಹಾಲಿ ಜನಪ್ರತಿನಿಧಿಗಳ ಪಾಡು ಯಾರಿಗೂ ಬೇಡ ಎನ್ನುವಂತೆ ಆಗಿದೆ. ಇಂತಹ ಸಮಯದಲ್ಲೇ ಮತ್ತೊಂದು ಘೋರ ಘಟನೆ ಕೂಡ, ಇದೀಗ ನೇಪಾಳದಲ್ಲಿ ಸಂಭವಿಸಿದೆ. ಪ್ರತಿಭಟನೆಯ ನಡುವೆ ಸುಮಾರು 15,000 ಕೈದಿಗಳು ಎಸ್ಕೇಪ್ ಆಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

15,000 ಕೈದಿಗಳು ಜೈಲಿಂದ ಎಸ್ಕೇಪ್!
ಹೌದು, ನೇಪಾಳ ದೇಶದಲ್ಲಿ ಪ್ರತಿಭಟನೆ ಶುರು ಮಾಡಿದ್ದ ಹೋರಾಟಗಾರರು ಜೈಲುಗಳನ್ನು ಕೂಡ ಬಿಟ್ಟಿಲ್ಲ. ಹೀಗಿದ್ದಾಗ ನೇರವಾಗಿ ಜೈಲಿಗೆ ನುಗ್ಗಿ ಅಲ್ಲಿದ್ದ ಕೈದಿಗಳನ್ನು ಕೂಡ ರಿಲೀಸ್ ಮಾಡಿದ್ದಾರೆ. ಕಳ್ಳರು, ಕೊಲೆಗಾರರು, ಕ್ರಿಮಿನಲ್ ಹಿನ್ನೆಲೆ ಇರುವ ಸುಮಾರು 15,000 ಕೈದಿಗಳು ಇದೇ ಸಮಯವನ್ನ ಬಳಸಿಕೊಂಡು ಇದೀಗ ನೇಪಾಳದ ಜೈಲುಗಳಿಂದ ಎಸ್ಕೇಪ್ ಆಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದೇ ಕಾರಣಕ್ಕೆ ಓಡಿ ಹೋಗಿರುವ ಜೈಲು ಹಕ್ಕಿಗಳ ಹುಡುಕಾಟಕ್ಕೆ ಇದೀಗ ಅಲ್ಲಿನ ಸೇನೆ ಮುಂದಾಗಿದೆ.
ಹೆಲಿಕಾಪ್ಟರ್ ಹತ್ತಿಕೊಂಡು ಸಚಿವ ಎಸ್ಕೇಪ್!
ಹೌದು, ಇದೀಗ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಹಿಂಸಾಚಾರ ಪೀಡಿತ ನೇಪಾಳದ ಸಚಿವ ತನ್ನ ಕುಟುಂಬ ರಕ್ಷಣೆ ಮಾಡಿಕೊಳ್ಳಲು ನೇಪಾಳ ಸೇನೆಯ ಮೊರೆ ಹೋಗಿರುವುದು ಕಂಡು ಬಂದಿದೆ. ಇದೇ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಹಲ್ಚಲ್ ಎಬ್ಬಿಸಿದೆ. ಅಂದಹಾಗೆ ನೇಪಾಳ ದೇಶದ ಕಠ್ಮಂಡು ನಗರದ ಹೋಟೆಲ್ ಮೇಲಿಂದ ಸಚಿವರೊಬ್ಬರ ಕುಟುಂಬವನ್ನು, ನೇಪಾಳ ಸೇನೆಗೆ ಸೇರಿರುವ ಹೆಲಿಕಾಪ್ಟರ್ ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡುತ್ತಿರುವ ದೃಶ್ಯ ಜಗತ್ತಿನ ಮೂಲೆ ಮೂಲೆಯಲ್ಲೂ ವೈರಲ್ ಆಗುತ್ತಿದೆ. ಹಾಗೇ ಭ್ರಷ್ಟ ರಾಜಕಾರಣಿಗಳಿಗೆ ಇದು ಎಚ್ಚರಿಕೆ ಗಂಟೆಯಾಗಬೇಕು ಎಂಬ ಅಭಿಪ್ರಾಯವನ್ನು ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಜನರು ವ್ಯಕ್ತಪಡಿಸುತ್ತಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion












Click it and Unblock the Notifications