ಉಕ್ರೇನ್ ವಿರುದ್ಧ ರಷ್ಯಾ ಸೇನೆಯಿಂದ ಭಯಾನಕ ಬಾಂಬ್ ಬಳಕೆ?
ರಷ್ಯಾ ವಿರುದ್ಧ ಇದೀಗ ಗಂಭೀರ ಆರೋಪ ಕೇಳಿಬಂದಿದ್ದು, ಇಡೀ ಜಗತ್ತೇ ನಡುಗುವ ರೀತಿ ಸುದ್ದಿಯೊಂದು ಸ್ಫೋಟವಾಗಿದೆ. ಉಕ್ರೇನ್ ವಿರುದ್ಧ ಈಗಾಗಲೇ ರಷ್ಯಾ ಯುದ್ಧ ಆರಂಭಿಸಿ, ಘೋರ ದಾಳಿ ನಡೆಸುತ್ತಿರುವ ವಿಚಾರ ಇಡೀ ಜಗತ್ತಿಗೇ ಗೊತ್ತಿದೆ. ಹೀಗಿದ್ದಾಗ ಉಕ್ರೇನ್ ನಾಶ ಮಾಡಲು ರಷ್ಯಾ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದೆ ಎಂಬ ಆರೋಪ ಕೂಡ ಇದ್ದು. ಈ ಆರೋಪಕ್ಕೆ ಪೂರಕವಾಗಿ ಇದೀಗ, ಉಕ್ರೇನ್ ವಿರುದ್ಧ ರಷ್ಯಾ ಸೇನೆಯಿಂದ ಭಯಾನಕ ಬಾಂಬ್ ಬಳಕೆ ಆಗಿದೆಯಾ? ಎಂಬ ಪ್ರಶ್ನೆ ಮೂಡಿದೆ.
ಉಕ್ರೇನ್ಗೆ ಈಗ ರಷ್ಯಾ ಸೇನೆ ಕೊಡುತ್ತಿರುವ ಒಂದೊಂದು ಏಟು ಸದಾ ನೆನಪಿನಲ್ಲೇ ಉಳಿಯುವ ರೀತಿ ಇದ್ದು, ಭರ್ಜರಿಯಾಗಿ ದಾಳಿ ನಡೆಸುತ್ತಿದೆ ರಷ್ಯಾ ಸೇನೆ. ಹೀಗಿದ್ದಾಗ ರಷ್ಯಾ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಅದು ಏನು ಅಂದ್ರೆ ನ್ಯೂಕ್ಲಿಯರ್ ಅಸ್ತ್ರದ ರೀತಿಯಲ್ಲೇ ಕೆಲಸ ಮಾಡುವ, ಅಂದ್ರೆ ಪರಮಾಣು ಅಸ್ತ್ರದಂತೆ ಇರುವ ಭಯಾನಕ ಬಾಂಬ್ ಒಂದನ್ನ ರಷ್ಯಾ ಪ್ರಯೋಗ ಮಾಡಿದೆ ಎಂಬ ಆರೋಪ ಕೇಳಿಬಂದಿದೆ. ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಮಿಲಿಟರಿ ನಿಷೇಧಿತ ಬಾಂಬ್ ಪ್ರಯೋಗ ಮಾಡಿದೆ ಎಂಬ ಗಂಭೀರವಾದ ಆರೋಪ ಮಾಡಲಾಗಿದೆ. ಹಾಗಾದ್ರೆ ಯಾವುದು ಅಂತಹ ಭಯಾನಕ ಬಾಂಬ್? ಯಾಕೆ ಆ ಬಾಂಬ್ ಪ್ರಯೋಗ ಮಾಡಿದೆ ರಷ್ಯಾ ಸೇನೆ? ಮುಂದೆ ಓದಿ.

ಉಕ್ರೇನ್ ಕಥೆ ಮುಗಿಸಲು ರಷ್ಯಾ ಸ್ಕೆಚ್?
ಹೌದು, ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದು ವೈರಲ್ ಆಗುತ್ತಿದ್ದು ರಷ್ಯಾದ ವಿರುದ್ಧ ಗಂಭೀರ ಆರೋಪ ಮಾಡಲಾಗಿದೆ. 'ಥರ್ಮೋಬಾರಿಕ್' ಎಂದು ಕರೆಯಲ್ಪಡುವ, ರಷ್ಯಾದ ಒಡಿಎಬಿ-9000 (ODAB-9000) ಸೂಪರ್ ಬಾಂಬ್ ಒಂದನ್ನ ಉಕ್ರೇನ್ ವಿರುದ್ಧದ ಯುದ್ಧದಲ್ಲಿ ರಷ್ಯಾ ಮಿಲಿಟರಿ ಪ್ರಯೋಗ ಮಾಡಿದೆ ಎಂದು ಆರೋಪಿಸಲಾಗಿದೆ. ಆರೋಪ ಸಾಬೀತು ಮಾಡುವಂತೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಒಂದು ಕೂಡ ವೈರಲ್ ಆಗುತ್ತಿದ್ದು, ಪಾಶ್ಚಿಮಾತ್ಯ ದೇಶಗಳು ಇದೇ ವಿಡಿಯೋ ಮೂಲಕ ರಷ್ಯಾದ ವಿರುದ್ಧ ಆಕ್ರೋಶ ಹೊರ ಹಾಕುತ್ತಿವೆ.
ಹಲವು ಯುದ್ಧಗಳು ಶುರು ಗುರೂ!
ಒಟ್ನಲ್ಲಿ ಏನೋ ಮಾಡಲು ಹೋಗಿ ಏನೇನೋ ಆಗುತ್ತಿದೆ. ಜಾಗತಿಕ ಮಟ್ಟದಲ್ಲಿ ಮತ್ತೊಂದು ಮಹಾಯುದ್ಧ ಗ್ಯಾರಂಟಿ ಅನ್ನೋ ಆರೋಪಗಳು ಕೂಡ ಕೇಳಿಬರುತ್ತಿವೆ. ಒಂದು ಕಡೆ ಈಗ ರಷ್ಯಾ & ಉಕ್ರೇನ್ ನಡುವಿನ ಯುದ್ಧದಲ್ಲಿ ನಿಷೇಧಿತ ಬಾಂಬ್ ಬಳಕೆ ಮಾಡಲಾಗಿದೆ. ಹಾಗೇ ಇನ್ನೊಂದು ಕಡೆ ಇಸ್ರೇಲ್ ಸೇನೆಯ ವಿರುದ್ಧ, ಲೆಬನಾನ್, ಇರಾನ್ & ಸಿರಿಯಾ ಸೇರಿದಂತೆ ಗಾಜಾ ಪಟ್ಟಿ ಯುದ್ಧ ಮಾಡುತ್ತಿದೆ. ಇದು ಸಾಲದು ಎನ್ನುವಂತೆ ಉತ್ತರ ಕೊರಿಯಾ ಮತ್ತು ದಕ್ಷಿಣ ಕೊರಿಯಾ ಕೂಡ ಯುದ್ಧಕ್ಕೆ ಸಿದ್ಧವಾಗಿವೆ. ಹೀಗೆ ನಡೆಯುತ್ತಿದ್ದರೆ ಅತಿ ಶೀಘ್ರದಲ್ಲೇ 3ನೇ ಮಹಾಯುದ್ಧ ಗ್ಯಾರಂಟಿ ಎಂಬ ಭಯ ಹುಟ್ಟಿಕೊಂಡಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications