ಟ್ರಂಪ್ ಐತಿಹಾಸಿಕ ನಿರ್ಧಾರ: 7 ಮುಸ್ಲಿಂ ರಾಷ್ಟ್ರಗಳಿಗೆ ವೀಸಾ ರದ್ದು
ಅಮೆರಿಕಾದಲ್ಲಿ ಸುರಕ್ಷತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಏಳು ರಾಷ್ಟ್ರಗಳ ನಾಗರಿಕರಿಗೆ ಅಮೆರಿಕ ವೀಸಾವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.
ವಾಷಿಂಗ್ಟನ್, ಜ 29: ಅಮೆರಿಕಾದಲ್ಲಿ ಸುರಕ್ಷತೆ ಮತ್ತು ಭದ್ರತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಏಳು ರಾಷ್ಟ್ರಗಳ ನಾಗರೀಕರಿಗೆ ಅಮೆರಿಕ ವೀಸಾವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.
ಉಗ್ರ ಚಟುವಟಿಕೆಯಿಂದ ತತ್ತರಿಸಿ ಹೋಗಿರುವ ಏಳು ಮುಸ್ಲಿಂ ರಾಷ್ಟ್ರಗಳ ನಾಗರೀಕರಿಗೆ ಮುಂದಿನ ಮೂರು ತಿಂಗಳು ಅಮೆರಿಕ ವೀಸಾ ನಿರ್ಬಂಧಿಸುವ ಕಡತಕ್ಕೆ ಟ್ರಂಪ್ ಸಹಿಹಾಕಿದ್ದಾರೆ.
ಮೂರು ತಿಂಗಳ ನಂತರ ಪರಿಸ್ಥಿತಿಯನ್ನು ಅವಲೋಕಿಸಿ ನಿರ್ಬಂಧವನ್ನು ಸಡಿಲಿಸುವ ಬಗ್ಗೆ ನಿರ್ಧರಿಸಲಾಗುವುದು ಎಂದು ಶ್ವೇತಭವನದ ಪ್ರಕಟಣೆ ತಿಳಿಸಿದೆ.

2016ರಲ್ಲಿ 75 ಸಾವಿರಕ್ಕೂ ಹೆಚ್ಚು ನಿರಾಶ್ರಿತರು ಅಮೆರಿಕಕ್ಕೆ ಪ್ರವೇಶಿಸಿದ್ದು, ಇದರಲ್ಲಿ ಅರ್ಥಕ್ಕಿಂತ ಹೆಚ್ಚು ಮುಸ್ಲಿಮರಾಗಿದ್ದಾರೆ. ದೇಶದ ಭದ್ರತೆಗೆ ಧಕ್ಕೆ ಉಂಟು ಮಾಡುವ ಯಾವುದೇ ವ್ಯಕ್ತಿಗಳನ್ನು ದೇಶ ಪ್ರವೇಶಿಸಲು ಬಿಡುವುದಿಲ್ಲ ಎಂದು ಟ್ರಂಪ್ ಹೇಳಿದ್ದಾರೆ.
ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ, ಉಗ್ರ ಚಟುವಟಿಕೆಗಳನ್ನು ಹತ್ತಿಕ್ಕುವ ಸಲುವಾಗಿ, ಮುಂದಿನ ದಿನಗಳಲ್ಲಿ ಮುಸ್ಲಿಂ ಪ್ರಾಭಲ್ಯವಿರುವ ದೇಶಗಳಿಗೂ ಅಮೆರಿಕಾ ವೀಸಾ ಸಿಗುವುದು ತ್ರಾಸದಾಯಕವಾಗಬಹುದು.
ಅಮೆರಿಕ ನಿರ್ಬಂಧ ಹೇರಿರುವ ಏಳು ರಾಷ್ಟ್ರಗಳೆಂದರೆ, ಸಿರಿಯಾ, ಇರಾನ್, ಸುಡಾನ್, ಲಿಬಿಯಾ, ಸೋಮಾಲಿಯಾ, ಯೆಮನ್ ಮತ್ತು ಇರಾಕ್. ಈ ಏಳು ರಾಷ್ಟ್ರಗಳ ಒಟ್ಟು ಜನಸಂಖ್ಯೆ 134 ಮಿಲಿಯನ್.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications