ಅಮೆರಿಕದ ನೂತನ ಅಧ್ಯಕ್ಷ ಬೈಡನ್ ಗೆ ಶುಭ ಕೋರದ ರಷ್ಯಾ, ಚೀನಾ
ವಾಷಿಂಗ್ಟನ್, ನ 8: ವಿಶ್ವದ ಬಹುತೇಕ ಎಲ್ಲಾ ರಾಷ್ಟ್ರಗಳು ಸೂಪರ್ ಪವರ್ ದೇಶ ಅಮೆರಿಕಾದ ನೂತನ ಅಧ್ಯಕ್ಷ ಜೋ ಬೈಡನ್ ಗೆ ಶುಭ ಕೋರಿದರೂ, ಚೀನಾ ಮತ್ತು ರಷ್ಯಾದಿಂದ ಇದುವರೆಗೂ, ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.
ಪ್ಯಾರಿಸ್ ಹವಾಮಾನ ಬದಲಾವಣೆ ಅಗ್ರೀಮೆಂಟ್, ಕೊರೊನಾ ವೈರಸ್, ಅಮೆರಿಕ ಫಸ್ಟ್ ಎನ್ನುವ ಟ್ರಂಪ್ ಸರಕಾರದ ಕೈಗಾರಿಕಾ ನೀತಿ, ನ್ಯಾಟೋ ದೇಶಗಳ ಮೇಲೆ ದಾಳಿ, ವಿಶ್ವ ಆರೋಗ್ಯ ಸಂಸ್ಥೆ ಮುಂತಾದ ವಿಚಾರದಲ್ಲಿ, ಹೊಸ ಬದಲಾವಣೆಯ ನಿರೀಕ್ಷೆಯಲ್ಲಿ ಪಾಶ್ಚಿಮಾತ್ಯ ಮತ್ತು ಏಷ್ಯಾದ ರಾಷ್ಟ್ರಗಳಿವೆ.
ಭಾರತದ ಪ್ರಧಾನಿ ನರೇಂದ್ರ ಮೋದಿ, ತಮ್ಮ ಹಿಂದಿನ ಭೇಟಿಯ ವೇಳೆ ಬೈಡನ್ ಜೊತೆಗಿರುವ ಫೋಟೋ ಅನ್ನು ಟ್ವೀಟ್ ಮಾಡಿ ಎರಡು ದೇಶಗಳ ನಡುವಿನ ಸಂಬಂಧ ಇನ್ನಷ್ಟು ಬಲಗೊಳ್ಳಲಿ ಎಂದು ಆಶಿಸಿದ್ದಾರೆ.

ಜಪಾನ್, ತೈವಾನ್, ದಕ್ಷಿಣ ಕೊರಿಯಾ ದೇಶಗಳು ಬೈಡನ್ ಗೆ ಶುಭ ಕೋರಿದ್ದರೂ, ಚೀನಾದಿಂದ ಇದುವರೆಗೂ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. "ಬೈಡನ್ ಮತ್ತು ಕಮಲಾ ಹ್ಯಾರಿಸ್ ಗೆ ಅಭಿನಂದನೆಗಳು. ನಿಮ್ಮ ಅವಧಿಯಲ್ಲಿ ಅಮೆರಿಕಾ ಮತ್ತು ಜಪಾನ್ ನಡುವಿನ ಸಂಬಂಧ ಇನ್ನಷ್ಟು ವೃದ್ದಿಗೊಳ್ಳಲಿ"ಎಂದು ಜಪಾನ್ ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಟ್ರಂಪ್ ಅವಧಿಯಲ್ಲಿ ಚೀನಾದ ಜೊತೆಗಿನ ಸಂಬಂಧ ಹಾಳಾಗಿತ್ತು. ಚೀನಾ ಸರಕಾರದಿಂದ ಅಧಿಕೃತ ಹೇಳಿಕೆ ಹೊರಬೀಳದಿದ್ದರೂ, ಅಲ್ಲಿನ ಸಾಮಾಜಿಕ ತಾಣದಲ್ಲಿ ಬೈಡನ್ ಗೆ ಅಭಿನಂದನೆಯ ಮಹಾಪೂರವೇ ಹರಿದು ಬಂದಿದೆ.
ಟ್ರಂಪ್ ಗೆ ಆತ್ಮೀಯರಾಗಿದ್ದ ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರಿಂದಲೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಚುನಾವಣೆ ಇನ್ನೂ ಮುಗಿದಿಲ್ಲ ಎನ್ನುವ ಟ್ರಂಪ್ ಹೇಳಿಕೆಗೆ, ಅವರ ಬೆಂಬಲಿಗರಲ್ಲಿ ಒಬ್ಬರಾದ ಫಿಲಿಫೇನ್ಸ್ ದೇಶದ ಅಧ್ಯಕ್ಷರೂ ಬೆಂಬಲ ನೀಡದೇ, ಬೈಡನ್ ಗೆ ಅಭಿನಂದಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications