ಪಾಕಿಸ್ತಾನದ ಹೆಗಲ ಮೇಲೆ ಅಮೇರಿಕಾದ ಬಂದೂಕು! ಪಾಕ್ಗೆ ಉಭಯ ಸಂಕಟ
ಅಮೇರಿಕಾ: ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಪಾಕಿಸ್ತಾನದ ಹೆಗಲ ಮೇಲೆ ಬಂದೂಕು ಇರಿಸಿದ್ದಾರೆ. ಭಾರತದ ವಿರುದ್ಧ ನಡೆದ ಯುದ್ಧ ಸೇರಿದಂತೆ ಹಲವು ಸಂಕಷ್ಟದ ಸಂದರ್ಭದಲ್ಲಿ ಅಮೇರಿಕಾ - ಚೀನಾದ ಬಳಿ ಸಹಾಯ ಪಡೆದುಕೊಳ್ಳುತ್ತಿರುವ ಪಾಕಿಸ್ತಾನಕ್ಕೆ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸ ಒತ್ತಡವು ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಅಮೇರಿಕಾದ ಸಹಾಯದಿಂದ ಭಾರೀ ಲಾಭವನ್ನು ಪಡೆದುಕೊಳ್ಳಬಹುದು ಎನ್ನುವ ಲೆಕ್ಕಾಚಾರದಲ್ಲಿದ್ದ ಪಾಕಿಸ್ತಾನಕ್ಕೆ ಇದೀಗ ಮುಸ್ಲಿಂ ರಾಷ್ಟ್ರಗಳನ್ನು ಎದುರು ಹಾಕಿಕೊಳ್ಳುವ ಆತಂಕ ಶುರುವಾಗಿದೆ. ಏನಿದು ಪಾಕಿಸ್ತಾನಕ್ಕೆ ಅಮೇರಿಕಾ ಕೊಟ್ಟಿರುವ ಟಾಸ್ಕ್ ಎನ್ನುವ ವಿವರ ನೋಡೋಣ.
ಕಳೆದ ಕೆಲವು ದಿನಗಳಿಂದ ಭಾರತ ಮತ್ತು ಅಮೇರಿಕಾದ ನಡುವಿನ ಸಂಬಂಧ ಹೇಳಿಕೊಳ್ಳುವಂತೆ ಇಲ್ಲ. ಭಾರತದ ಮೇಲೆ ನಿರಂತರವಾಗಿ ಕತ್ತಿ ಮಸಿಯುತ್ತಿರುವ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತಕ್ಕೆ ಒಂದಿಲ್ಲೊಂದು ಸಂಕಷ್ಟವನ್ನು ತಂದೊಡ್ಡುತ್ತಲ್ಲೇ ಇದ್ದಾರೆ. ಟ್ರಂಪ್ ಭಾರತದ ವಿವಿಧ ವಸ್ತುಗಳ ಮೇಲೆ ಈಗಾಗಲೇ ದುಬಾರಿ ಸುಂಕವನ್ನು ವಿಧಿಸಿದ್ದು, ಭಾರತ ಇನ್ನೂ ಚೇತರಿಸಿಕೊಳ್ಳುತ್ತಿದೆ. ಅಲ್ಲದೇ ಅಕ್ಕಿಯ ಮೇಲೂ ಟ್ರಂಪ್ ಕಣ್ಣು ಬಿದ್ದಾಗಿದೆ. ಭಾರತದ ವಿರುದ್ಧ ಕುತಂತ್ರ ರೂಪಿಸುವಲ್ಲಿ ಅಥವಾ ಸೇಡು ತೀರಿಸಿಕೊಳ್ಳಲು ಪಾಕಿಸ್ತಾನವನ್ನು ಅಮೇರಿಕಾ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ.

ಇತ್ತೀಚಿನ ಬೆಳವಣಿಗೆಯಲ್ಲಿ ಅಮೇರಿಕಾ ಕೊಟ್ಟಿರುವ ಹೊಸ ಟಾಸ್ಕ್ನಿಂದ ಪಾಕಿಸ್ತಾನ ಸಂಕಷ್ಟಕ್ಕೆ ಸಿಲುಕಿದೆ. ಗಾಜಾದ ಸಹಜ ಸ್ಥಿತಿಗೆ ಸ್ಥಾಪಿಸಲಾಗಿರುವ ವಿಭಾಗಕ್ಕೆ ಸೇನೆ ಕಳುಹಿಸುವಂತೆ ಅಮೇರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಒತ್ತಡ ರೂಪಿಸುತ್ತಿದ್ದು, ಪಾಕ್ ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಏನು ಮಾಡುವುದು ಎಂದು ತೋಚದಂತಾಗಿದೆ.
ಪಾಕಿಸ್ತಾನ ತನ್ನ ಕಾಲ ಮೇಲೆ ತಾನೇ ಕಲ್ಲು ಹಾಕಿಕೊಂಡಿದೆ. ಟ್ರಂಪ್ ಅವರು ಈ ಒತ್ತಡಕ್ಕೆ ಮುಖ್ಯ ಕಾರಣ ಈಚೆಗೆ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ ಅವರು, "ಶಾಂತಿಪಾಲನೆಗಾಗಿ ಸೇನೆ ಕಳುಹಿಸುವುದನ್ನು ಪರಿಗಣಿಸಲಾಗುವುದು" ಎಂದಿದ್ದರು. ಇದನ್ನೇ ಟ್ರಂಪ್ ಈಗ ಉಪಯೋಗಿಸಿಕೊಳ್ಳಲು ಮುಂದಾಗಿದ್ದಾರೆ.
ಇದೀಗ ಗಾಜಾಗೆ ಪಾಕಿಸ್ತಾನದ ಸೇನೆಯನ್ನು ಕಳುಹಿಸಿದರೆ ಪಾಕಿಸ್ತಾನದಲ್ಲಿ ದೇಶೀಯ ಭದ್ರತೆಗೆ ಕೊರತೆ ಎದುರಾಗುವ ಸಾಧ್ಯತೆ ಇದೆ. ಅಲ್ಲದೇ ಕೆಲವು ಮುಸ್ಲಿಂ ರಾಷ್ಟ್ರಗಳು ಅಮೇರಿಕಾದ ವಿರುದ್ಧವಾಗಿದ್ದು ಆ ರಾಷ್ಟ್ರಗಳ ಮುನಿಸಿಗೆ ತುತ್ತಾಗಬೇಕಾಗುತ್ತದೆ. ಅಮೇರಿಕಾದ ಅಧ್ಯಕ್ಷರಿಗೆ ಇದೆಲ್ಲಾ ಆಗಲ್ಲ ಎಂದು ಹೇಳಿದರೆ, ಅಮೇರಿಕಾದಿಂದ ಸಿಗುತ್ತಿರುವ ಆರ್ಥಿಕ ಸಹಾಯ ಕೈತಪ್ಪುವ ಸಾಧ್ಯತೆಯೂ ಇದೆ. ಹೀಗಾಗಿ, ಮುನೀರ್ ಅಮೇರಿಕಾಗೆ ದೌಡಾಯಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮುಸ್ಲಿಂ ರಾಷ್ಟ್ರಗಳಿಗೆ ಮನವಿ: ಟ್ರಂಪ್ ಅವರ 20 ಅಂಶಗಳ ಗಾಜಾ ಯೋಜನೆಯಡಿ ಎರಡು ವರ್ಷಗಳ ಕಾಲ ಇಸ್ರೇಲ್ ಮಿಲಿಟರಿ ಬಾಂಬ್ ದಾಳಿಯಿಂದ ನಾಶವಾದ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿ ಪುನರ್ ನಿರ್ಮಾಣ ಹಾಗೂ ಆರ್ಥಿಕ ಚೇತರಿಕೆಗಾಗಿ ಪರಿವರ್ತನೆಗಾಗಿ ಮುಸ್ಲಿಂ ರಾಷ್ಟ್ರಗಳಿಗೆ ಮನವಿ ಮಾಡಲಾಗುತ್ತಿದೆ. ಆದರೆ ಈ ವಿಚಾರದಲ್ಲಿ ಪರ - ವಿರೋಧ ಅಭಿಪ್ರಾಯವೂ ಇದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications