ಭಾರತೀಯನ ಮೇಲಿನ ಹಲ್ಲೆ ಸತ್ಯ ಬಿಚ್ಚಿಡುವ ವಿಡಿಯೋ
ವಾಷಿಂಗ್ಟನ್, ಫೆ. 13 : ಕೆಲ ದಿನಗಳ ಹಿಂದೆ ಗುಜರಾತ್ ಮೂಲದ ಸುರೇಶ್ ಭಾಯಿ ಪಟೇಲ್(57) ಎಂಬುವರ ಮೇಲೆ ಹಲ್ಲೆ ಮಾಡಿದ್ದ ಅಲಬಾಮಾ ಪೊಲೀಸ್ ಸಿಬ್ಬಂದಿಯನ್ನು ಬಂಧಿಸಲಾಗಿದ್ದು ಹಲ್ಲೆ ನಡೆಯುತ್ತಿರುವ ವಿಡಿಯೋವನ್ನು ಯೂಟ್ಯೂಬ್ ನಲ್ಲಿ ಹರಿಯಬಿಡಲಾಗಿದೆ.[ಚುಡಾಯಿಸಿದ್ದನ್ನು ಪ್ರಶ್ನಿಸಿದ ಮಣಿಪುರ ವಿದ್ಯಾರ್ಥಿಗೆ ಥಳಿತ]
ಅಮಾನುಷ ಹಲ್ಲೆಯ ವಿರುದ್ಧ ಭಾರತದಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಆಕ್ರೋಶಕ್ಕೆ ವ್ಯಕ್ತವಾಗಿತ್ತು. ಫೆಬ್ರವರಿ 6ರಂದು ವಾಕಿಂಗ್ ಹೋಗುತ್ತಿದ್ದ ಪಟೇಲ್ ಅವರನ್ನು ಪೊಲೀಸರು ತಡೆದು ಪ್ರಶ್ನಿಸಿದ್ದರು. ಆದರೆ ಇಂಗ್ಲಿಷ್ ಗೊತ್ತಿಲ್ಲದ ಪಟೇಲ್ ಉತ್ತರ ನೀಡಲು ತಡಬಡಾಯಿಸಿದ್ದರು. ಇದನ್ನೇ ಕಾರಣವಾಗಿಸಿಕೊಂಡ ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡಿದ್ದರು.

ಪಟೇಲ್ ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದ ಪೊಲೀಸ್ ಸಿಬ್ಬಂದಿ ಎರಿಕ್ ಪಾರ್ಕರ್ ಅವರನ್ನು ತನಿಖೆ ಆರಂಭ ಮಾಡುವಾಗಲೇ ಅಮಾನತಿನಲ್ಲಿಡಲಾಗಿದ್ದು ಬಳಿಕ ಅವರನ್ನು ನಂತರ ಎಫ್ ಬಿಐ ಬಂಧಿಸಿದೆ.
ಪೊಲೀಸರ ಹಲ್ಲೆಯಿಂದ ಜರ್ಜರಿತರಾದ ಪಟೇಲ್ ಪಾರ್ಶ್ವವಾಯು ಸೆಳೆತಕ್ಕೆ ಒಳಗಾಗಿದ್ದಾರೆ. ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪಟೇಲ್ ಅವರು ಅಮೆರಿಕದ ಶಾಶ್ವತ ನಿವಾಸಿ ಸ್ಥಾನಮಾನ ಹೊಂದಿದ್ದಾರೆ. ಮೊಮ್ಮಗಳನ್ನು ನೋಡಿಕೊಳ್ಳುವುದಕ್ಕೋಸ್ಕರ ಅಮೆರಿಕಕ್ಕೆ ತೆರಳಿದ್ದ ಅವರ ಮೇಲೆ ಹಲ್ಲೆ ನಡೆದಿತ್ತು.[ಮತ್ತೆ ಯುಎಸ್ ಪತ್ರಕರ್ತನ ರುಂಡ ಕತ್ತರಿಸಿದ ಉಗ್ರರು]
ಅಲಬಾಮಾ ಪೊಲೀಸರೇ ಚಿಕಿತ್ಸೆಯ ಸಂಪೂರ್ಣ ವೆಚ್ಚ ಭರಿಸಬೇಕು ಎಂದು ಪಟೇಲ್ ಹೆಂಡತಿ ಶಂಕುಂತಲಾ ಪಟೇಲ್ ಆಗ್ರಹಿಸಿದ್ದಾರೆ. ಘಟನೆ ಬಗ್ಗೆ ಕ್ಷಮೆ ಯಾಚಿಸಿರುವ ಪಟೇಲ್ ಮ್ಯಾಡಿಸನ್ ಸಿಟಿಪೊಲೀಸ್ ಮುಖ್ಯಸ್ಥ ಲ್ಯಾರಿ ಮುನ್ಸೇ, ಪಟೇಲ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸಿಕೊಡಲಾಗುವುದು ಎಂದು ತಿಳಿಸಿದ್ದಾರೆ.
ಅಮೆರಿಕ ಪೊಲೀಸರ ದೌರ್ಜನ್ಯ
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications