ನೊಬೆಲ್ ಶಾಂತಿ ಪ್ರಶಸ್ತಿ ಬೇಕೆ ಬೇಕು ಅಂತಾ ಹಠ ಹಿಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್! Donald Trump
ಡೊನಾಲ್ಡ್ ಟ್ರಂಪ್ ಅವರಿಗೆ ಈಗ ಕನಸಲ್ಲೂ, ಮನಸ್ಸಲ್ಲೂ ಬರೀ ಒಂದೇ ಆಲೋಚನೆ ಶುರುವಾಗಿದೆ... ಭಾರತ & ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ ಅಂತಾ ಬಿಲ್ಡಪ್ ಕೊಡುವ ಟ್ರಂಪ್ ಇದೇ ರೀತಿಯಾಗಿ ಇನ್ನೂ ಅನೇಕ ಯುದ್ಧಗಳು ನನ್ನಿಂದಾಗಿ ನಿಂತಿವೆ ಅಂತಾ ಓಳು ಬಿಡ್ತಿದ್ದಾರೆ ಅನ್ನೋ ಆರೋಪವೂ ಇದೆ. ಆದರೆ ಇದೆಲ್ಲಾ ನನ್ನ ವಿರೋಧಿಗಳು ಮಾಡುತ್ತಿರುವ ಕೆಲಸ ಅಂತಾ ಟ್ರಂಪ್ ತಿರುಗೇಟು ಕೊಟ್ಟು ಸುಮ್ಮನಾಗುತ್ತಿದ್ದಾರೆ. ಇಷ್ಟೆಲ್ಲಾ ಇದ್ದಾಗಲೇ ನೊಬೆಲ್ ಶಾಂತಿ ಪ್ರಶಸ್ತಿ ಬೇಕೆ ಬೇಕು ಅಂತಾ ಹಠ ಹಿಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಿಡಿದಿದ್ದೇ ಹಠ, ತಾನು ಮಾಡಿದ್ದೇ ಸರಿ ಅಂತಾನೂ ಡೊನಾಲ್ಡ್ ಟ್ರಂಪ್ ಆಗಾಗ ಹೇಳುತ್ತಾ ಇರುವುದು ವೈರಲ್ ಆಗುತ್ತದೆ. ಹೀಗೆ ಡೊನಾಲ್ಡ್ ಟ್ರಂಪ್ ಆಗಾಗ ವೈರಲ್ ಆಗಿ, ಸೋಷಿಯಲ್ ಮೀಡಿಯಾದಲ್ಲಿ ಕೂಡ ಹವಾ ಎಬ್ಬಿಸುತ್ತಾರೆ. ಮತ್ತೊಂದು ಕಡೆ ಟ್ರಂಪ್ ಹೀಗೆ ಮಾಡಿಕೊಳ್ಳುವ ಎಡವಟ್ಟುಗಳು ಅಮೆರಿಕದ ಭವಿಷ್ಯಕ್ಕೆ ಹಾನಿ ಮಾಡುತ್ತಿದೆ ಎಂಬ ಆರೋಪ ಕೂಡ ಕೇಳಿ ಬರುತ್ತಲೇ ಇದೆ. ಆದರೆ ಇದಕ್ಕೆಲ್ಲಾ ಕೇರ್ ಮಾಡದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಹಠ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಇಷ್ಟೆಲ್ಲದರ ನಡುವೆ ನೊಬೆಲ್ ಶಾಂತಿ ಪ್ರಶಸ್ತಿ ಬೇಕೆ ಬೇಕು ಅಂತಾ ಹಠ ಹಿಡಿದ್ದಾರೆ ಟ್ರಂಪ್!

ನೊಬೆಲ್ ಶಾಂತಿ ಪ್ರಶಸ್ತಿ ಬೇಕು...
ಹೌದು, ಇದೀಗ ಮತ್ತೊಮ್ಮೆ ಭಾರತ ಮತ್ತು ಪಾಕಿಸ್ತಾನ ಯುದ್ಧದ ಬಗ್ಗೆ ಮಾತನಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಬಾಂಬ್ ಸಿಡಿಸಿದ್ದಾರೆ. ಪದೇ, ಪದೇ ಭಾರತ & ಪಾಕಿಸ್ತಾನ ನಡುವೆ ನಡೆದ ಯುದ್ಧ ನಿಲ್ಲಿಸಿದ್ದು ನಾನೇ ಅಂತಾ ಹೇಳುವ ಡೊನಾಲ್ಡ್ ಟ್ರಂಪ್ ಈಗ ಮತ್ತೊಮ್ಮೆ ಅದನ್ನೇ ಹೇಳಿದ್ದಾರೆ. ಭಾರತ & ಪಾಕಿಸ್ತಾನ ಸೇನಾ ಸಂಘರ್ಷ ನಾನೇ ನಿಲ್ಲಿಸಿದ್ದು ಅಂತಾ ಹೇಳಿರುವ ಟ್ರಂಪ್, ಈವರೆಗೂ ಒಟ್ಟಾರೆ 7 ಯುದ್ಧಗಳನ್ನ ನಾನು ನಿಲ್ಲಿಸಿದ್ದೇನೆ. ಈ ಕಾರಣಕ್ಕೆ ನನಗೆ, ನೊಬೆಲ್ ಶಾಂತಿ ಪ್ರಶಸ್ತಿ ಸಿಗಲೇಬೇಕು ಎಂದಿದ್ದಾರೆ. ಹೀಗೆ ಟ್ರಂಪ್ ನೀಡಿರುವ ಹೇಳಿಕೆ ಭಾರಿ ಸಂಚಲನ ಸೃಷ್ಟಿಸಿದೆ. ಈ ಸಮಯದಲ್ಲೇ ಎಚ್1ಬಿ ವೀಸಾ ಬಗ್ಗೆ ಟ್ರಂಪ್ ಸರ್ಕಾರದಿಂದ ಮಹತ್ವದ ಮಾಹಿತಿ ಸಿಕ್ಕಿದೆ.
ವೀಸಾ ಇದ್ದವರಿಗೆ ಇಲ್ಲ ಟೆನ್ಷನ್!
ಹೌದು, ಈಗ ಟ್ರಂಪ್ ಆಡಳಿತದ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ ಎಚ್1ಬಿ ವೀಸಾ ಮೇಲೆ ಭರ್ಜರಿ 1,00,000 ಯುಎಸ್ ಡಾಲರ್ ಹೇರಿಕೆ ಮಾಡಿರುವುದು ಹೊಸ ವೀಸಾಗಳಿಗೆ ಮಾತ್ರ. ಆದರೆ ಈಗಾಗಲೇ ತೆಗೆದುಕೊಂಡ ವೀಸಾಗಳಿಗೆ ಇದು ಅನ್ವಯ ಆಗಲ್ಲ ಎಂದು ತಿಳಿಸಲಾಗಿದೆ. ಈ ಮೂಲಕ ಲಕ್ಷ ಲಕ್ಷ ಭಾರತೀಯರಿಗೆ ಈಗ ಭರ್ಜರಿ ಸುದ್ದಿ ಸಿಕ್ಕಂತೆ ಆಗಿದ್ದು, ಈಗಾಗಲೇ ಸುಮಾರು ಅರ್ಧ ಕೋಟಿಗೂ ಹೆಚ್ಚು ಭಾರತೀಯರು ಅಮೆರಿಕದಲ್ಲಿ ಜೀವನ ಕಂಡುಕೊಂಡಿದ್ದಾರೆ. ಹೀಗಾಗಿ ಟ್ರಂಪ್ ಸರ್ಕಾರದಿಂದ ಯಾವ ನಿರ್ಧಾರ ಕೈಗೊಳ್ಳಲಾಗುತ್ತದೆ? ಅನ್ನೋದು ಭಾರಿ ಕುತೂಹಲ ಕೆರಳಿಸಿತ್ತು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video











Click it and Unblock the Notifications