ಈ ದೇಶದಲ್ಲಿ ಗಂಡು ಹೆಣ್ಣು ಒಟ್ಟಾಗಿ ಪಾರ್ಕ್ಗೆ ಹೋಗುವಂತಿಲ್ಲ
ಕಾಬೂಲ್ ಮಾರ್ಚ್ 28: ಅಫ್ಘಾನಿಸ್ತಾನದ ಅಮ್ಯೂಸ್ಮೆಂಟ್ ಪಾರ್ಕ್ಗಳಲ್ಲಿ ತಾಲಿಬಾನ್ಗಳು ಲಿಂಗ ಪ್ರತ್ಯೇಕತೆಯನ್ನು ಜಾರಿಗೊಳಿಸಿದ್ದಾರೆ ಎಂದು ಹೇಳಲಾಗಿದೆ. ಒಂದೇ ದಿನ ಅಮ್ಯೂಸ್ಮೆಂಟ್ ಪಾರ್ಕ್ಗಳಿಗೆ ಪುರುಷರು ಮತ್ತು ಮಹಿಳೆಯರು ಒಟ್ಟಿಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ.
ಪುರುಷರಿಗೆ ಬುಧವಾರದಿಂದ ಶನಿವಾರದವರೆಗೆ ಉದ್ಯಾನವನಗಳಿಗೆ ಭೇಟಿ ನೀಡಲು ಅವಕಾಶವಿರುತ್ತದೆ. ಆದರೆ ವಾರದ ಉಳಿದ ಭಾಗದಲ್ಲಿ ಮಹಿಳೆಯರು ಅಲ್ಲಿಗೆ ಹೋಗಬಹುದು ಎಂದು ಸುದ್ದಿ ಸಂಸ್ಥೆ ಸ್ಪುಟ್ನಿಕ್ ಹೇಳಿದೆ. "ಇಸ್ಲಾಮಿಕ್ ಎಮಿರೇಟ್ನ ಮುಜಾಹಿದ್ದೀನ್ಗಳು ಶಸ್ತ್ರಾಸ್ತ್ರಗಳು, ಮಿಲಿಟರಿ ಸಮವಸ್ತ್ರಗಳು ಮತ್ತು ವಾಹನಗಳೊಂದಿಗೆ ಅಮ್ಯೂಸ್ಮೆಂಟ್ ಪಾರ್ಕ್ಗಳಿಗೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ" ಎಂದು ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಟ್ವಿಟ್ಟರ್ನಲ್ಲಿ ತಿಳಿಸಿದ್ದಾರೆ. ಅವರು ಮನೋರಂಜನಾ ಉದ್ಯಾನವನಗಳ ಎಲ್ಲಾ ನಿಯಮಗಳು ಮತ್ತು ನಿಬಂಧನೆಗಳಿಗೆ ಬದ್ಧರಾಗಿರುತ್ತಾರೆ ಎಂದು ಅವರು ಹೇಳಿದರು.
ಕಾಬೂಲ್ನಲ್ಲಿ ತಾಲಿಬಾನಿಗಳು ಅಧಿಕಾರವನ್ನು ವಶಪಡಿಸಿಕೊಂಡು ಏಳು ತಿಂಗಳು ಕಳೆದಿವೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ತನ್ನ ಆಡಳಿತ ಆರಂಭಿಸಿ ಶಿಕ್ಷಣ ಪಡೆಯುವ ಮಹಿಳೆಯರ ಹಕ್ಕುಗಳ ಮೇಲೆ ಕಠಿಣ ನಿರ್ಬಂಧಗಳನ್ನು ಹೇರಿದೆ. ಆದರೆ ಕೆಲ ದಿನಗಳ ಹಿಂದೆ ತಾಲಿಬಾನ್ ಆಕ್ರಮಿತ ಕಾಬೂಲ್ನಲ್ಲಿ ಅಲ್ಲಿನ ಶಿಕ್ಷಣ ಅಧಿಕಾರಿಗಳು ಮಾಧ್ಯಮಿಕ ಶಾಲೆಗಳನ್ನು ಪುನರಾರಂಭಿಸುವುದಾಗಿ ಘೋಷಿಸಿದ್ದರು. ಈ ಘೋಷಣೆಯ ಬಳಿಕ ಅಫ್ಘಾನ್ ರಾಜಧಾನಿಯಲ್ಲಿ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗಿದ್ದಾರೆ. ಆದರೆ ಶಾಲೆಗಳಿಗೆ ವಿದ್ಯಾರ್ಥಿನಿಯರ ಪ್ರವೇಶವನ್ನು ಮತ್ತೆ ನಿರ್ಬಂಧಿಸಲಾಗಿದೆ.

ಕಳೆದ ಆಗಸ್ಟ್ನಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡಾಗ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಎಲ್ಲಾ ಶಾಲೆಗಳನ್ನು ಮುಚ್ಚಲಾಯಿತು. ಎರಡು ತಿಂಗಳ ನಂತರ ತರಗತಿಗಳನ್ನು ಪುನರಾರಂಭಿಸಿ ಹುಡುಗರಿಗೆ ಮತ್ತು ಕೆಲವು ಕಿರಿಯ ಹುಡುಗಿಯರಿಗೆ ಮಾತ್ರ ಶಾಲೆಗಳಿಗೆ ತೆರಳಲು ಅನುಮತಿಸಲಾಗಿತ್ತು. ಬಳಿಕ ವಿದ್ಯಾರ್ಥಿನಿಯರಿಗೆ ನಿಷೇಧವನ್ನು ಹೇರಲಾಗಿದೆ.
Recommended Video
ತಾಲಿಬಾನ್ ಮಹಿಳೆಯರ ಮೇಲೆ ಹಲವಾರು ನಿರ್ಬಂಧಗಳನ್ನು ಹೇರಿದೆ. ಅನೇಕ ಸರ್ಕಾರಿ ಉದ್ಯೋಗಗಳಿಂದ ಅವರನ್ನು ತೆಗೆದುಹಾಕಲಾಗಿದೆ. ಅವರು ಹಿಜಾಬ್ ಇಲ್ಲದೆ ಏಕಾಂಗಿಯಾಗಿ ಹೊರಬರುವಂತಿಲ್ಲ. ನಗರಗಳ ಹೊರಗೆ ಏಕಾಂಗಿಯಾಗಿ ಪ್ರಯಾಣಿಸುವುದನ್ನು ನಿಷೇಧಿಸಲಾಗಿದೆ. ಅವರ ಜೊತೆಗೆ ಅವರ ಮನೆಯ ಪುರುಷರು ಅವರೊಂದಿಗಿರಬೇಕು ಎನ್ನುವ ನಿಯಮ ತಂದಿದೆ. ಜೊತೆಗೆ ತಾಲಿಬಾನಿಗಳು ಮಹಿಳಾ ಹಕ್ಕುಗಳಿಗಾಗಿ ಪ್ರತಿಭಟಿಸಿದ ಹಲವಾರು ಕಾರ್ಯಕರ್ತರನ್ನೂ ಬಂಧಿಸಿದ್ದಾರೆ. ಹೀಗಾಗಿ ಆರಂಭದಲ್ಲಿ ತಾಲಿಬಾನಿಗಳ ಅಟ್ಟಹಾಸವನ್ನು ಕಂಡ ಅಫ್ಘಾನಿಸ್ತಾನಿಗಳ ಯಾವುದೇ ಮಹಿಳಾ ಬದಲಾವಣೆಯನ್ನು ಅಲ್ಲಿನ ಜನ ನಂಬಲು ಸಿದ್ಧರಿಲ್ಲ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications