‘ಕೊರೊನಾ’ ನಡುವೆ ಮತ್ತೊಂದು ಸಾಂಕ್ರಾಮಿಕ ರೋಗದ ಭೀತಿ..?
ಪೀಡೆ ಕೊರೊನಾ ಭೂಮಿಗೆ ಬಂದು ಅಪ್ಪಳಿಸಿದ ಬಳಿಕ ಮಾನವರು ಅನುಭವಿಸಿದಷ್ಟೇ ತೊಂದರೆಗಳನ್ನ ಪ್ರಾಣಿ ಸಂಕುಲ ಕೂಡ ಅನುಭವಿಸಿದೆ. ಅದರಲ್ಲೂ ಡೆನ್ಮಾರ್ಕ್ ಮಿಂಕ್ ಉದ್ಯಮ ಅಕ್ಷರಶಃ ಬೀದಿಗೆ ಬಿದ್ದಿದೆ. ಮಿಂಕ್ ಎಂಬ ಪುಟಾಣಿ ಸ್ತನಿಗಳ ಮೂಲಕ ಕೊರೊನಾ ವೈರಸ್ ಸುಲಭವಾಗಿ ಹರಡುತ್ತದೆ ಎಂಬುದು ತಿಳಿಯುತ್ತಿದ್ದಂತೆ ಡೆನ್ಮಾರ್ಕ್ ಸರ್ಕಾರ ಕೋಟ್ಯಂತರ ಮಿಂಕ್ಗಳನ್ನ ಹತ್ಯೆ ಮಾಡಿತ್ತು. ಹೀಗೆ ಹತ್ಯೆ ಮಾಡಿ ಮಿಂಕ್ಗಳನ್ನ ಹೂತು ಹಾಕಿತ್ತು.
ಆದರೆ ಕಳೆದ ತಿಂಗಳು ಹೊಸ ಸಮಸ್ಯೆ ಶುರುವಾಗಿತ್ತು. ಕೊಲೆ ಮಾಡಿದ್ದ ಮಿಂಕ್ಗಳು ಭೂತದ ರೀತಿ ಸಮಾಧಿಯಿಂದ ಹೊರಬಂದು, ಮಾಲಿನ್ಯಕ್ಕೆ ಕಾರಣವಾಗಿದ್ದವು. ಕೆಟ್ಟ ವಾಸನೆ ಮಿಂಕ್ಗಳ ಸಮಾಧಿ ಸುತ್ತಲೂ ಹರಡಿತ್ತು. ಜನ ವಾಸನೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಈ ನಡುವೆಯೇ ಮತ್ತೊಂದು ಶಾಕ್ ನೀಡಿದ್ದಾರೆ ತಜ್ಞರು.
ಅಷ್ಟಕ್ಕೂ ಮಿಂಕ್ಗಳನ್ನ ಹೂತು ಹಾಕಿರುವ ಡೆನ್ಮಾರ್ಕ್ ಮಿಲಿಟರಿ ಪ್ರದೇಶದಿಂದ ಸುಮಾರು 200 ಮೀಟರ್ ದೂರದಲ್ಲಿ ಕುಡಿಯುವ ನೀರಿನ ಪೈಪ್ಲೈನ್ ಹಾದು ಹೋಗಿದ್ದು, ಅಲ್ಲಿಂದ ಸ್ವಲ್ಪ ದೂರದಲ್ಲಿ ಕೆರೆ ಕೂಡ ಇದೆ. ಹೀಗೆ ಮಿಂಕ್ಗಳ ದೇಹ ಕೊಳೆತು, ಕೆರೆಯ ನೀರು ಹಾಗೂ ಅಂತರ್ಜಲವೂ ಮಲಿನವಾಗುತ್ತಿದೆ.

‘ಕೊರೊನಾ’ ನಡುವೆ ಮತ್ತೊಂದು ರೋಗ..?
ಕೊರೊನಾ ಕಾರಣಕ್ಕೆ ಜಗತ್ತಿನಲ್ಲಿ ಯುರೋಪ್ ಹಾಗೂ ಅಮೆರಿಕ ಎದುರಿಸಿದಷ್ಟು ಸಂಕಷ್ಟವನ್ನು ಬೇರಾವುದೇ ದೇಶಗಳು ಕಂಡಿಲ್ಲ. ಕೊರೊನಾ ಹರಡುವ ಮುನ್ನ ಸುಖದ ಸುಪ್ಪತ್ತಿಗೆಯಲ್ಲಿ ತೇಲುತ್ತಿದ್ದ ರಾಷ್ಟ್ರಗಳು ಬಡತನದ ಬೇಗೆಯಲ್ಲಿ ನರಳುತ್ತಿವೆ. ಇದೇ ರೀತಿ ಡೆನ್ಮಾರ್ಕ್ ಜನರ ಬದುಕು ಬೀದಿಗೆ ಬಿದ್ದಿದೆ.
ಅದರಲ್ಲೂ ರೈತರ ಪಾಡು, ಅದರಲ್ಲೂ ಮಿಂಕ್ ಉದ್ಯಮ ನಡೆಸುತ್ತಿದ್ದ ಕೃಷಿಕರ ಪಾಡು ಶತ್ರುಗೂ ಬೇಡ ಎಂಬಂತಿದೆ. ಇಂತಹ ಹೊತ್ತಲ್ಲೇ ಕೊರೊನಾ ಕೂಡ ಪೂರ್ಣ ಮರೆಯಾಗಿಲ್ಲ, ಹಿಡಿತಕ್ಕೆ ಸಿಕ್ಕಿಲ್ಲ. ಇಷ್ಟೆಲ್ಲಾ ಕಷ್ಟಗಳು ಇರುವಾಗಲೇ ಮಿಂಕ್ಗಳ ಕೊಳೆತ ದೇಹದಿಂದ ಬೇರೆ ರೀತಿಯ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಸ್ಥಳೀಯರನ್ನ ಕಾಡುತ್ತಿದೆ.

17 ಮಿಲಿಯನ್ ಮಿಂಕ್ಗಳ ಹತ್ಯೆ
ಅಮೆರಿಕದಲ್ಲಿ ನಡೆದಿದ್ದ ಅಧ್ಯಯನದ ವರದಿ ಆಧಾರದಲ್ಲಿ ಮಿಂಕ್ ಪ್ರಾಣಿಗಳಿಂದ ಕೊರೊನಾ ಹರಡುವುದು ದೃಢವಾಗಿತ್ತು. ಈ ವರದಿ ತನ್ನ ಕೈಸೇರಿದ ತಕ್ಷಣ ತಡಮಾಡದ ಡೆನ್ಮಾರ್ಕ್ ಸರ್ಕಾರ ಸುಮಾರು 1 ಕೋಟಿ 70 ಲಕ್ಷ ಮಿಂಕ್ಗಳನ್ನ ಕೊಂದು ಹಾಕಿತ್ತು. ಆದರೆ ಸರ್ಕಾರದ ಕ್ರಮವೇ ಹೊಸ ಸಮಸ್ಯೆಗೆ ಕಾರಣವಾಗಿದೆ.
ಹೀಗೆ ಕೋಟ್ಯಂತರ ಮಿಂಕ್ಗಳನ್ನು ಹೂತು ಹಾಕಿದ ಪ್ರದೇಶದಲ್ಲಿ ಹೊಸ ಆತಂಕ ಎದುರಾಗಿದೆ. ಗುಂಡಿಯಲ್ಲಿ ಹೂತಿರುವ ಕೋಟ್ಯಂತರ ಮಿಂಕ್ ಸ್ತನಿಗಳು ಈಗ ಸಮಾಧಿಯಿಂದ ಹೊರಬರುತ್ತಿವೆ. ಮಿಂಕ್ಗಳ ದೇಹದಿಂದ ಬಿಡುಗಡೆಯಾಗುತ್ತಿರುವ ಗ್ಯಾಸ್ ಈ ಪ್ರಕ್ರಿಯೆಗೆ ಕಾರಣವಾಗಿದೆ ಎನ್ನಲಾಗಿದೆ.
ಡೆನ್ಮಾರ್ಕ್ ಶೀತ ವಲಯದ ಪ್ರದೇಶ, ಹೀಗಾಗಿ ಹೆಚ್ಚು ಚಳಿ ಇರುತ್ತದೆ. ಹೀಗೆ ಚಳಿ ಇರುವ ಪ್ರದೇಶಗಳಲ್ಲಿ ಪ್ರಾಣಿಗಳ ದೇಹ ಅಷ್ಟು ಬೇಗ ಕೊಳೆಯುವುದಿಲ್ಲ. ಈಗ ಆಗಿರುವುದೂ ಅದೇ. ಮಣ್ಣು ಮಾಡಿ ತಿಂಗಳಾದರೂ ಅರ್ಧಂಬರ್ಧ ಕೊಳೆತಿರುವ ಮಿಂಕ್ಗಳ ದೇಹವನ್ನು ಅದೇ ಮಿಂಕ್ಗಳ ದೇಹದಿಂದ ಬಿಡೆಗಡೆ ಆಗುತ್ತಿರುವ ಗ್ಯಾಸ್ ಹೊರಗೆ ತಳ್ಳುತ್ತಿದೆ.

ರೈತರ ಸ್ಥಿತಿ ಕಂಡು ಪ್ರಧಾನಿ ಕಣ್ಣೀರು
ಜಗತ್ತಿನಾದ್ಯಂತ ಅತಿಹೆಚ್ಚು ಮಿಂಕ್ ಸ್ತನಿಗಳನ್ನ ರಫ್ತು ಮಾಡುವ ದೇಶ ಡೆನ್ಮಾರ್ಕ್. ಅಷ್ಟಕ್ಕೂ ಈ ಮಿಂಕ್ಗಳ ಉಪಯೋಗ ಏನು ಎಂಬ ಪ್ರಶ್ನೆ ನಿಮ್ಮನ್ನು ಕಾಡಬಹುದು. ಮಿಂಕ್ಗಳ ತುಪ್ಪಳ ಅಂದರೆ ಅವುಗಳ ಚರ್ಮಕ್ಕೆ ಭಾರಿ ಬೇಡಿಕೆ ಇದೆ. ಈ ಚರ್ಮದಿಂದ ಕೋಟ್, ಬ್ಯಾಗ್ ಹೀಗೆ ವಿವಿಧ ರೀತಿ ವಸ್ತುಗಳನ್ನು ತಯಾರಿಸುತ್ತಾರೆ.
ಒಂದೊಂದು ಮಿಂಕ್ನ ಚರ್ಮಕ್ಕೂ ಲಕ್ಷಾಂತರ ರೂಪಾಯಿ ಬೆಲೆ ಇದೆ. ಡೆನ್ಮಾರ್ಕ್ನ ವಾತಾವರಣ ಮಿಂಕ್ ಸಾಕಾಣಿಕೆಗೆ ಉತ್ತಮ ಪರಿಸರ ಒದಗಿಸಿದೆ. ಹೀಗಾಗಿ ಅಲ್ಲಿ ಮಿಂಕ್ ಸಾಕಾಣಿಕೆ ಬಹುದೊಡ್ಡ ಉದ್ಯೋಗವನ್ನೂ ಒದಗಿಸಿಕೊಟ್ಟಿದೆ. ಆದರೆ ಕೊರೊನಾ ಕಾರಣಕ್ಕೆ ಮಿಂಕ್ಗಳ ಹತ್ಯೆ ಮಾಡಿದ್ದು, ಮಿಂಕ್ ಸಾಕಾಣಿಕೆ ಉದ್ಯಮದ ಬೆನ್ನೆಲುಬನ್ನೇ ಮುರಿದಿದೆ. ಇನ್ನು ವಾಸ್ತವ ಪರಿಶೀಲನೆಗೆ ಅಂತಾ ಮಿಂಕ್ ಸಾಕಾಣಿಕೆದಾರರ ಜಮೀನಿಗೆ ಭೇಟಿ ನೀಡಿದ್ದ ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್, ರೈತರ ಪರಿಸ್ಥಿತಿ ಕಂಡು ಕಣ್ಣೀರು ಹಾಕಿದ್ದರು.

ಲಕ್ಷ ಲಕ್ಷ ಕೋಟಿ ಉದ್ಯಮ
ಭಾರತದಲ್ಲಿ ಹೈನುಗಾರಿಕೆ ರೀತಿಯಲ್ಲೇ ಡೆನ್ಮಾರ್ಕ್ ಮಿಂಕ್ ಉದ್ಯಮವನ್ನು ಅವಲಂಬಿಸಿದೆ. ಯುರೋಪ್ನಲ್ಲಿ ಮಿಂಕ್ ಸಾಕಾಣಿಕೆ ಉದ್ಯಮ ಲಕ್ಷಾಂತರ ಕೋಟಿ ವಹಿವಾಟು ನಡೆಸುತ್ತದೆ. ಇದರಲ್ಲೂ ಡೆನ್ಮಾರ್ಕ್ನ ಪಾಲು ತುಸು ಹೆಚ್ಚಾಗಿದೆ. ಆದರೆ ಮಿಂಕ್ ಸಾಕಾಣಿಕೆ ಅಷ್ಟು ಸುಲಭದ ಮಾತಲ್ಲ. ಮಿಂಕ್ಗಳ ಕುರಿತು ತುಂಬಾ ಕೇರ್ ತೆಗೆದುಕೊಳ್ಳಬೇಕು. ಅದರಲ್ಲೂ ಚಳಿ ಹೆಚ್ಚಾಗಿರುವ ಡೆನ್ಮಾರ್ಕ್ ರೀತಿಯ ವಾತಾವರಣದಲ್ಲಿ ಬೆಚ್ಚನೆ ಗೂಡನ್ನು ನಿರ್ಮಿಸಬೇಕಾಗುತ್ತದೆ. ಹೀಗೆ ಒಬ್ಬೊಬ್ಬ ಡೆನ್ಮಾರ್ಕ್ ರೈತನೂ ಕೋಟ್ಯಂತರ ರೂಪಾಯಿ ಖರ್ಚು ಮಾಡಿ, ಈ ಮಿಂಕ್ಗಳನ್ನ ಸಾಕುತ್ತಾನೆ. ಆದರೆ ಈ ಪೀಡೆ ಕೊರೊನಾ ಡೆನ್ಮಾರ್ಕ್ನ ರೈತರ ಬದುಕನ್ನೂ ಬೀದಿಗೆ ತಳ್ಳಿದೆ.

ಅಮೆರಿಕ ರೈತರ ಪಾಡು ಭಿನ್ನವಾಗಿಲ್ಲ
ಇದು ಡೆನ್ಮಾರ್ಕ್ನ ರೈತರ ಬವಣೆ ಮಾತ್ರವಲ್ಲ. ಅಮೆರಿಕದಲ್ಲೂ ಮಿಂಕ್ ಸಾಕಾಣಿಕೆ ಉದ್ಯಮ ಬಹುದೊಡ್ಡ ಮಟ್ಟದಲ್ಲಿ ನಡೆಯುತ್ತದೆ. ಆದರೆ ಕೊರೊನಾ ಕಾರಣಕ್ಕೆ ಅಲ್ಲೂ ಕೋಟ್ಯಂತರ ಮಿಂಕ್ಗಳನ್ನ ಸಾಮೂಹಿಕವಾಗಿ ಹತ್ಯೆ ಮಾಡಿದ್ದಾರೆ. ಇದರಿಂದ ಅಮೆರಿಕದ ಮಿಂಕ್ ಸಾಕಾಣಿಕೆದಾರರು ಕೂಡ ಬೀದಿಗೆ ಬಿದ್ದಿದ್ದಾರೆ. ಕೋಟಿ, ಕೋಟಿ ದುಡಿಯುತ್ತಿದ್ದ ರೈತರು ದಿವಾಳಿಯಾಗಿ ದಿಕ್ಕೇ ಕಾಣದಂತಾಗಿದ್ದಾರೆ. ಆದರೆ ಮಿಂಕ್ಗಳ ಮುಖಾಂತರ ಮನುಷ್ಯನಿಗೆ ಕೊರೊನಾ ಹರಡುವುದು ದೃಢವಾಗುತ್ತಿದ್ದಂತೆ ಈ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿತ್ತು. ಇದು ಮಿಂಕ್ ಉದ್ಯಮದ ಜೊತೆಗೆ ಮಿಂಕ್ ಚರ್ಮ ಉತ್ಪನ್ನಗಳ ಉದ್ಯಮದ ಮೇಲೂ ಪ್ರಭಾವ ಬೀರಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications