‘ಮಿಂಕ್’ ಭೂತದ ಭೀತಿ, ರೈತರ ಪರಿಸ್ಥಿತಿ ಕಂಡು ಪ್ರಧಾನಿ ಕಣ್ಣೀರು
ಕೊರೊನಾ ವೈರಸ್ ದಾಳಿಯಿಂದ ಮಾನವರು ಮಾತ್ರ ಸಂಕಷ್ಟಕ್ಕೆ ತುತ್ತಾಗಿಲ್ಲ, ಪ್ರಾಣಿಗಳು ಕೂಡ ಕೊರೊನಾ ಕೂಪದಲ್ಲಿ ನರಳುತ್ತಿವೆ. ಅದರಲ್ಲೂ ಸ್ತನಿಗಳ ಪಾಡು ದೇವರಿಗೆ ಪ್ರೀತಿ ಎಂಬಂತಾಗಿದೆ. ಇದೇ ರೀತಿ ಡೆನ್ಮಾರ್ಕ್ ಸರ್ಕಾರ ತನ್ನ ದೇಶದಲ್ಲಿ ಕೋಟ್ಯಂತರ ಮಿಂಕ್ಗಳನ್ನ ಹತ್ಯೆ ಮಾಡಿತ್ತು. ಅಮೆರಿಕದಲ್ಲಿ ನಡೆದಿದ್ದ ಅಧ್ಯಯನದ ವರದಿ ಆಧಾರದಲ್ಲಿ ಮಿಂಕ್ ಪ್ರಾಣಿಗಳಿಂದ ಕೊರೊನಾ ವೈರಸ್ ಹರಡುವುದು ದೃಢವಾಗಿತ್ತು. ಈ ವರದಿ ತನ್ನ ಕೈಸೇರಿದ ತಕ್ಷಣ ತಡಮಾಡದ ಡೆನ್ಮಾರ್ಕ್ ಸರ್ಕಾರ ಸುಮಾರು 1 ಕೋಟಿ 70 ಲಕ್ಷ ಮಿಂಕ್ಗಳನ್ನ ಕೊಂದು ಹಾಕಿತ್ತು. ಆದರೆ ಸರ್ಕಾರದ ಕ್ರಮವೇ ಹೊಸ ಸಮಸ್ಯೆಗೆ ಕಾರಣವಾಗಿದೆ.
ಹೀಗೆ ಕೋಟ್ಯಂತರ ಮಿಂಕ್ಗಳನ್ನು ಹೂತು ಹಾಕಿದ ಪ್ರದೇಶದಲ್ಲಿ ಹೊಸ ಆತಂಕ ಎದುರಾಗಿದೆ. ಗುಂಡಿಯಲ್ಲಿ ಹೂತಿರುವ ಕೋಟ್ಯಂತರ ಮಿಂಕ್ ಸ್ತನಿಗಳು ಈಗ ಸಮಾಧಿಯಿಂದ ಹೊರಬರುತ್ತಿವೆ. ಮಿಂಕ್ಗಳ ದೇಹದಿಂದ ಬಿಡುಗಡೆಯಾಗುತ್ತಿರುವ ಗ್ಯಾಸ್ ಈ ಪ್ರಕ್ರಿಯೆಗೆ ಕಾರಣವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. ಡೆನ್ಮಾರ್ಕ್ ಶೀತ ವಲಯದಲ್ಲಿ ಬರುವ ಪ್ರದೇಶ, ಹೀಗಾಗಿ ಅಲ್ಲಿ ಅತಿಹೆಚ್ಚು ಚಳಿ ಇರುತ್ತದೆ.
ಹೀಗೆ ಚಳಿ ಇರುವ ಪ್ರದೇಶಗಳಲ್ಲಿ ಪ್ರಾಣಿಗಳ ದೇಹ ಅಷ್ಟು ಬೇಗ ಕೊಳೆಯುವುದಿಲ್ಲ. ಈಗ ಆಗಿರುವುದೂ ಅದೇ. ಮಣ್ಣು ಮಾಡಿ ತಿಂಗಳಾದರೂ ಅರ್ಧಂಬರ್ಧ ಕೊಳೆತಿರುವ ಮಿಂಕ್ಗಳ ದೇಹವನ್ನು ಅದೇ ಮಿಂಕ್ಗಳ ದೇಹದಿಂದ ಬಿಡೆಗಡೆ ಆಗುತ್ತಿರುವ ಗ್ಯಾಸ್ ಹೊರಗೆ ತಳ್ಳುತ್ತಿದೆ. ಹೀಗೆ ಮಿಂಕ್ಗಳ ಕೊಳೆತ ದೇಹ ಭೂಮಿ ಮೇಲೆ ಹರಡುತ್ತಿರುವುದು ಹೊಸ ರೋಗದ ಆತಂಕ ಸೃಷ್ಟಿಸಿದೆ.

ರೈತರ ಸ್ಥಿತಿ ಕಂಡು ಪ್ರಧಾನಿ ಕಣ್ಣೀರು
ಜಗತ್ತಿನಾದ್ಯಂತ ಅತಿಹೆಚ್ಚು ಮಿಂಕ್ ಸ್ತನಿಗಳನ್ನ ರಫ್ತು ಮಾಡುವ ದೇಶ ಡೆನ್ಮಾರ್ಕ್. ಅಷ್ಟಕ್ಕೂ ಈ ಮಿಂಕ್ಗಳ ಉಪಯೋಗ ಏನು ಎಂಬ ಪ್ರಶ್ನೆ ನಿಮ್ಮನ್ನು ಕಾಡಬಹುದು. ಮಿಂಕ್ಗಳ ತುಪ್ಪಳ ಅಂದರೆ ಅವುಗಳ ಚರ್ಮಕ್ಕೆ ಭಾರಿ ಬೇಡಿಕೆ ಇದೆ. ಈ ಚರ್ಮದಿಂದ ಕೋಟ್, ಬ್ಯಾಗ್ ಹೀಗೆ ವಿವಿಧ ರೀತಿ ವಸ್ತುಗಳನ್ನು ತಯಾರಿಸುತ್ತಾರೆ. ಒಂದೊಂದು ಮಿಂಕ್ನ ಚರ್ಮಕ್ಕೂ ಲಕ್ಷಾಂತರ ರೂಪಾಯಿ ಬೆಲೆ ಇದೆ.

ಮಿಂಕ್ ಸಾಕಾಣಿಕೆ ಬಹುದೊಡ್ಡ ಉದ್ಯೋಗ ಒದಗಿಸಿದೆ
ಡೆನ್ಮಾರ್ಕ್ನ ವಾತಾವರಣ ಮಿಂಕ್ ಸಾಕಾಣಿಕೆಗೆ ಉತ್ತಮ ಪರಿಸರ ಒದಗಿಸಿದೆ. ಹೀಗಾಗಿ ಅಲ್ಲಿ ಮಿಂಕ್ ಸಾಕಾಣಿಕೆ ಬಹುದೊಡ್ಡ ಉದ್ಯೋಗವನ್ನೂ ಒದಗಿಸಿಕೊಟ್ಟಿದೆ. ಆದರೆ ಕೊರೊನಾ ಕಾರಣಕ್ಕೆ ಮಿಂಕ್ಗಳ ಹತ್ಯೆ ಮಾಡಿದ್ದು, ಮಿಂಕ್ ಸಾಕಾಣಿಕೆ ಉದ್ಯಮದ ಬೆನ್ನೆಲುಬನ್ನೇ ಮುರಿದಿದೆ. ಇನ್ನು ವಾಸ್ತವ ಪರಿಶೀಲನೆಗೆ ಅಂತಾ ಮಿಂಕ್ ಸಾಕಾಣಿಕೆದಾರರ ಜಮೀನಿಗೆ ಭೇಟಿ ನೀಡಿದ್ದ ಡೆನ್ಮಾರ್ಕ್ ಪ್ರಧಾನಿ ಮೆಟ್ಟೆ ಫ್ರೆಡೆರಿಕ್ಸೆನ್, ರೈತರ ಸದ್ಯದ ಸ್ಥಿತಿ ಕಂಡು ಕಣ್ಣೀರು ಹಾಕಿದ್ದರು.

ಲಕ್ಷ ಲಕ್ಷ ಕೋಟಿ ಉದ್ಯಮ
ಭಾರತದಲ್ಲಿ ಹೈನುಗಾರಿಕೆ ರೀತಿಯಲ್ಲೇ ಡೆನ್ಮಾರ್ಕ್ ಮಿಂಕ್ ಉದ್ಯಮವನ್ನು ಅವಲಂಬಿಸಿದೆ. ಯುರೋಪ್ನಲ್ಲಿ ಮಿಂಕ್ ಸಾಕಾಣಿಕೆ ಉದ್ಯಮ ಲಕ್ಷಾಂತರ ಕೋಟಿ ವಹಿವಾಟು ನಡೆಸುತ್ತದೆ. ಇದರಲ್ಲೂ ಡೆನ್ಮಾರ್ಕ್ನ ಪಾಲು ತುಸು ಹೆಚ್ಚಾಗಿದೆ. ಆದರೆ ಮಿಂಕ್ ಸಾಕಾಣಿಕೆ ಅಷ್ಟು ಸುಲಭದ ಮಾತಲ್ಲ. ಮಿಂಕ್ಗಳ ಕುರಿತು ತುಂಬಾ ಕೇರ್ ತೆಗೆದುಕೊಳ್ಳಬೇಕು. ಅದರಲ್ಲೂ ಚಳಿ ಹೆಚ್ಚಾಗಿರುವ ಡೆನ್ಮಾರ್ಕ್ ರೀತಿಯ ವಾತಾವರಣದಲ್ಲಿ ಬೆಚ್ಚನೆ ಗೂಡನ್ನು ನಿರ್ಮಿಸಬೇಕಾಗುತ್ತದೆ. ಹೀಗೆ ಒಬ್ಬೊಬ್ಬ ಡೆನ್ಮಾರ್ಕ್ ರೈತನೂ ಕೋಟ್ಯಂತರ ರೂಪಾಯಿ ಖರ್ಚು ಮಾಡಿ, ಈ ಮಿಂಕ್ಗಳನ್ನ ಸಾಕುತ್ತಾನೆ. ಆದರೆ ಈ ಪೀಡೆ ಕೊರೊನಾ ಡೆನ್ಮಾರ್ಕ್ನ ರೈತರ ಬದುಕನ್ನೂ ಬೀದಿಗೆ ತಳ್ಳಿದೆ.

ಅಮೆರಿಕ ರೈತರ ಪಾಡು ಭಿನ್ನವಾಗಿಲ್ಲ
ಇದು ಡೆನ್ಮಾರ್ಕ್ನ ರೈತರ ಬವಣೆ ಮಾತ್ರವಲ್ಲ. ಅಮೆರಿಕದಲ್ಲೂ ಮಿಂಕ್ ಸಾಕಾಣಿಕೆ ಉದ್ಯಮ ಬಹುದೊಡ್ಡ ಮಟ್ಟದಲ್ಲಿ ನಡೆಯುತ್ತದೆ. ಆದರೆ ಕೊರೊನಾ ಕಾರಣಕ್ಕೆ ಅಲ್ಲೂ ಕೋಟ್ಯಂತರ ಮಿಂಕ್ಗಳನ್ನ ಸಾಮೂಹಿಕವಾಗಿ ಹತ್ಯೆ ಮಾಡಿದ್ದಾರೆ. ಇದರಿಂದ ಅಮೆರಿಕದ ಮಿಂಕ್ ಸಾಕಾಣಿಕೆದಾರರು ಕೂಡ ಬೀದಿಗೆ ಬಿದ್ದಿದ್ದಾರೆ. ಕೋಟಿ, ಕೋಟಿ ದುಡಿಯುತ್ತಿದ್ದ ರೈತರು ದಿವಾಳಿಯಾಗಿ ದಿಕ್ಕೇ ಕಾಣದಂತಾಗಿದ್ದಾರೆ. ಆದರೆ ಮಿಂಕ್ಗಳ ಮುಖಾಂತರ ಮನುಷ್ಯನಿಗೆ ಕೊರೊನಾ ಹರಡುವುದು ದೃಢವಾಗುತ್ತಿದ್ದಂತೆ ಈ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿತ್ತು. ಇದು ಮಿಂಕ್ ಉದ್ಯಮದ ಜೊತೆಗೆ ಮಿಂಕ್ ಚರ್ಮ ಉತ್ಪನ್ನಗಳ ಉದ್ಯಮದ ಮೇಲೂ ಪ್ರಭಾವ ಬೀರಿದೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications