ಹಿಲರಿ ಅಧ್ಯಕ್ಷರಾದರೆ ಮೂರನೇ ವಿಶ್ವಯುದ್ಧ ಗ್ಯಾರಂಟಿ!
ವಾಷಿಂಗ್ಟನ್, ಅಕ್ಟೋಬರ್, 26: ಅಮೆರಿಕ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಹಿಲರಿ ಕ್ಲಿಂಟನ್ ಅವರು ಅನುಸರಿಸುತ್ತಿರುವ ಭವಿಷ್ಯದಲ್ಲಿ ಮೂರನೇ ಪ್ರಪಂಚ ಯುದ್ಧಕ್ಕೆ ದಾರಿಮಾಡಿಕೊಡುತ್ತದೆ ಎಂದು ರಿಪಬ್ಲಿಕನ್ ಪಕ್ಷದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ.
ಹಿಲರಿ ತಮ್ಮ ವಿದೇಶಾಂಗ ನೀತಿಯ ಭಾಗವಾಗಿ ಸಿರಿಯಾದಲ್ಲಿ ಕೈಗೊಳ್ಳುಲು ಉದ್ದೇಶಿಸಿರುವ ಕ್ರಮಗಳು ಸಾಕಾರವಾದರೆ ಮೂರನೇ ಪ್ರಪಂಚ ಯುದ್ಧ ಖಂಡಿತ ನಡೆಯುತ್ತದೆ ಎಂದು ದೂರಿದ್ದಾರೆ.

ಭಯೋತ್ಪಾದನೆಯನ್ನು ಪೋಷಿಸಿ ಬೆಳೆಸುತ್ತಿರುವ ಐಸಿಸ್ ನಂತಹ ಉಗ್ರ ಸಂಘಟನೆಗಳನ್ನು ಬುಡ ಸಮೇತ ಕಿತ್ತುಹಾಕಬೇಕು ಆದರೆ, ಹಿಲರಿ ಅವರು ಕೇವಲ ಸಿರಿಯಾ ದೇಶದ ಅಧ್ಯಕ್ಷರನ್ನು ಕೆಳಗಿಳಿಸುವ ಕುರಿತು ಯೋಚನೆ ಮಾಡುತ್ತಿದ್ದಾರೆ. ಇದು ಯಾವುದೇ ಪ್ರಯೋಜನ ನೀಡುವುದಿಲ್ಲ ಎಂದು ಅವರು ಹೇಳಿದ್ದಾರೆ.
ಸಿರಿಯಾವನ್ನು 'ನೋ ಪ್ಲೈ' ಜೋನ್ ಆಗಿ ಸಿದ್ಧಪಡಿಸಬೇಕು ಎಂಬ ಹಿಲರಿ ಪ್ರತಿಪಾದನೆ ಸರಿಯಲ್ಲ ಎಂದು ಟ್ರಂಪ್ ಅಲ್ಲಗೆಳೆದಿದ್ದಾರೆ. ಅವರ ಯೋಚನೆ ರಷ್ಯಾದೊಂದಿಗೆ ಘರ್ಷಣೆಗೆ ಎಡೆಮಾಡಿಕೊಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಇದಷ್ಟೇ ಅಲ್ಲದೇ ಸ್ವಪಕ್ಷೀಯರ ವಿರುದ್ಧವೇ ಟ್ರಂಪ್ ಅಸಮಾಧಾನ ವ್ಯಕ್ತಪಡಿಸಿದ್ದು, ನಮ್ಮ ಪಕ್ಷದವರು ನನಗೆ ಸಂಪೂರ್ಣ ಬೆಂಬಲ ನೀಡಿದರೆ ಹಿಲರಿಯವರನ್ನು ಗೆಲ್ಲುವುದು ಕಷ್ಟವೇನೂ ಅಲ್ಲ ಎಂದು ಹೇಳಿದ್ದಾರೆ.
ಪ್ರಬಲ ಅಣ್ವಾಸ್ತ್ರಗಳನ್ನು ರಷ್ಯಾ ಹೊಂದಿದ್ದು, ರಷ್ಯಾ ವಿರುದ್ಧ ಸಿಡಿದೇಳುವ ದೇಶದ ವಿರುದ್ಧ ಅಣ್ವಸ್ತ್ರಾಗಳನ್ನು ಪ್ರಯೋಗಿಸುವಲ್ಲಿ ವಿವೇಚಿಸುವುದಿಲ್ಲ ಎಂದು ಎಚ್ಚರಿಸಿದರು.
ಪುಟಿನ್ ಮೇಲೆ ಹಿಲರಿ ಕ್ಲಿಂಟನ್ ಅವರು ವಾಗ್ದಾಳಿ ನಡೆಸುತ್ತಿದ್ದಾರೆ. ಒಂದು ವೇಳೆ ಹಿಲರಿ ಅಧ್ಯಕ್ಷರಾದರೆ ಪುಟಿನ್ ಜತೆ ಹೇಗೆ ಮಾತುಕತೆ ನಡೆಸುತ್ತಾರೆ ಎಂದು ಪ್ರಶ್ನಿಸಿದರು. ರಷ್ಯಾವನ್ನು ಶತ್ರುವಾಗಿ ಬಿಂಬಿಸಿ ಅಮೆರಿಕರನ್ನು ಭಯಪಡಿಸಲು ಹಿಲ್ಲರಿ ಮುಂದಾಗಿದ್ದಾರೆ ಎಂದು ಟ್ರಂಪ್ ಆಗ್ರಹಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications