ವಿಯೆಟ್ನಾಂನಲ್ಲಿ 9ನೇ ಶತಮಾನದ ವಿಶಿಷ್ಟ ಶಿವಲಿಂಗ ಪತ್ತೆ
ಹನೋಯ್/ ನವದೆಹಲಿ, ಮೇ 28: ವಿಯೆಟ್ನಾಂನಲ್ಲಿ 9ನೇ ಶತಮಾನದ ಶಿವಲಿಂಗ ಪತ್ತೆಯಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ತಿಳಿಸಿದ್ದಾರೆ. ವಿಯೆಟ್ನಾಂನ ಮೈಸನ್ ಪ್ರದೇಶದಲ್ಲಿ ಉತ್ಖನನ ನಡೆಸುವಾಗ ಈ ವಿಶಿಷ್ಟ ಶಿವಲಿಗವನ್ನು ಭಾರತದ ಪುರಾತತ್ವ ಇಲಾಖೆ(ASI) ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
Recommended Video
ಮೈಸನ್ ಪ್ರದೇಶದ ಚಾಮ್ ದೇಗುಲಗಳ ಸಮೂಹದಲ್ಲಿ ಉತ್ಖನನ ಕಾರ್ಯ ನಡೆಸಲಾಗುತ್ತಿದೆ. ಇಲ್ಲಿ ಅನೇಕ ಶಿಥಿಲವಾಸ್ಥೆ, ಪೂರ್ಣ ಹಾಳಾದ ದೇಗುಲಗಳ ಅವಶೇಷಗಳಿವೆ. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿರುವ ಈ ತಾಣವನ್ನು ಕ್ರಿ.ಶ 4ನೇ ಶತಮಾನದಿಂದ 14ನೇ ಶತಮಾನದ ಅವಧಿಯಲ್ಲಿ ಚಂಪಾ ಅರಸರು ಆಳಿದ್ದರು ಎಂದು ತಿಳಿದು ಬಂದಿದೆ.

ಈ ಭಾಗದಲ್ಲಿ ಅನೇಕ ಶಿವಲಿಂಗಗಳಿದ್ದು, ಇಲ್ಲಿ ಶಿವನನ್ನು ಭದ್ರೇಶ್ವರ ಎಂಬ ಹೆಸರಿನಲ್ಲಿ ಆರಾಧಿಸಲಾಗುತ್ತಿತ್ತು. ಚಂಪಾ ಅರಸರಿಂದ ಇಲ್ಲಿ 70ಕ್ಕೂ ಅಧಿಕ ದೇಗುಲಗಳ ನಿರ್ಮಾಣವಾಗಿತ್ತು. ವಿಯೆಟ್ನಾಂ ಯುದ್ಧದ ವೇಳೆ ಅಮೆರಿಕದ ಬಾಂಬ್ ದಾಳಿಯಿಂದ ಅನೇಕ ದೇಗುಲಗಳು ನಾಶವಾಗಿವೆ.
Reaffirming a civilisational connect.
— Dr. S. Jaishankar (@DrSJaishankar) May 27, 2020
Monolithic sandstone Shiv Linga of 9th c CE is latest find in ongoing conservation project. Applaud @ASIGoI team for their work at Cham Temple Complex, My Son, #Vietnam. Warmly recall my visit there in 2011. pic.twitter.com/7FHDB6NAxz
ಭಾರತೀಯ ಪುರಾತತ್ವ ಇಲಾಖೆ ಅಧಿಕಾರಿಗಳು ನಾಲ್ಕು ಋತುಗಳ ಕಾಲ ಇಲ್ಲಿ ಉತ್ಖನನ ನಡೆಸುತ್ತಿದ್ದಾರೆ. ಸದ್ಯ ಜನವರಿಯಿಂದ ಜೂನ್ ಅವಧಿಯ ಕಾರ್ಯ ನಡೆಯುತ್ತಿದ್ದು, ಎಎಸ್ಐ ತಂಡದಲ್ಲಿ ನಾಲ್ವರು ಅಧಿಕಾರಿಗಳಿದ್ದಾರೆ. ಒಟ್ಟು 6 ಶಿವಲಿಂಗಗಳು ಪತ್ತೆಯಾಗಿವೆ. ಸಂಸ್ಕೃತಿ, ಪರಂಪರೆ ಮೌಲ್ಯಯುಕ್ತ ವಸ್ತುಗಳನ್ನು ಸಂರಕ್ಷಿಸಲು ಭಾರತ ಹಾಗೂ ವಿಯೆಟ್ನಾಂ ಮುಂದಾಗಿದ್ದು, ವಿದೇಶಾಂಗ ಸಚಿವಾಲಯವು ಇದಕ್ಕಾಗಿ ಡಿಪಿಎ IV ಎಂಬ ವಿಭಾಗವನ್ನು ಸ್ಥಾಪಿಸಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications