Breaking:ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ 100ಕ್ಕೂ ಅಧಿಕ ಮಂದಿ ಸಾವು
ಕಾಬೂಲ್, ಅಕ್ಟೋಬರ್ 08: ಉತ್ತರ ಅಫ್ಘಾನಿಸ್ತಾನದ ಮಸೀದಿಯೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, 100ಕ್ಕೂ ಅಧಿಕ ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ.

ಬಾಂಬ್ ಸ್ಪೋಟದಲ್ಲಿ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ ಎಂದು ತಾಲಿಬಾನ್ ಪೊಲೀಸರು ಮಾಹಿತಿ ನೀಡಿದ್ದಾರೆ.
ದೋಸ್ತ್ ಮೊಹಮ್ಮದ್ ಅವರು ಹೇಳಿರುವ ಪ್ರಕಾರ ಶಿಯಾ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದ್ದು, ದಾಳಿಯಲ್ಲಿ ಬಹುತೇಕರು ಮೃತಪಟ್ಟಿದ್ದಾರೆ. ಕುಂದುಜ್ ಪ್ರದೇಶದಲ್ಲಿ ಸ್ಫೋಟ ನಡೆದಿದ್ದು, ಇಸ್ಲಾಮಿಕ್ ಸ್ಟೇಟ್ ಸೇನೆಯು ಮೊದಲಿನಿಂದಲೂ ಅಫ್ಘಾನಿಸ್ತಾನದ ಅಲ್ಪಸಂಖ್ಯಾತರಾಗಿರುವ ಶಿಯಾ ಮುಸ್ಲಿಮರ ಮೇಲೆ ದಾಳಿ ನಡೆಸುತ್ತಲೇ ಇದೆ.
ಸ್ಫೋಟದಲ್ಲಿ ಅಲ್ಪಸಂಖ್ಯಾತ ಸಮುದಾಯದ ಹೆಚ್ಚಿನ ಮಂದಿ ಗಾಯಗೊಂಡಿದ್ದಾರೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ಸ್ವಾಧೀನಕ್ಕೆ ಪಡೆದುಕೊಂಡ ಬಳಿಕ ಮತ್ತಷ್ಟು ದುರ್ಘಟನೆಗಳು ಸಂಭವಿಸುತ್ತಿವೆ.
ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಈ ಹಿಂದೆ ಕುಂದುಜ್ನಲ್ಲಿ ಶಿಯಾ ಮಸೀದಿಗಳಲ್ಲಿ ಸಾಕಷ್ಟು ಸ್ಫೋಟಗಳು ಸಂಭವಿಸಿವೆ. ಸಾಕಷ್ಟು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.
ಕುಂದುಜ್ ಸ್ಥಳೀಯ ಆಸ್ಪತ್ರೆಗೆ ರಕ್ತದ ಅವಶ್ಯಕತೆ ಇದೆಯೇ ಎಂದು ಪರೀಕ್ಷಿಸಲು ತೆರಳಿದ್ದ ಉದ್ಯಮಿ ಅಲ್ಲಿನ ಭಯನಾಕ ದೃಶ್ಯಗಳನ್ನು ವಿವರಿಸಿದ್ದಾರೆ.
ತಾಲಿಬಾನ್ ಉಗ್ರರು ಆಫ್ಘಾನಿಸ್ತಾನ ಕೈವಶ ಮಾಡಿದ ಬಳಿಕ ಜನ ಆತಂಕದಿಂದ ದಿನ ದೂಡುತ್ತಿದ್ದಾರೆ. ಗುಂಡಿನ ಶಬ್ದ, ಮಿಸೈಲ್ ಮೊರೆತ ಹಾಗೂ ಬಾಂಬ್ ಶಬ್ದಗಳೇ ಪ್ರತಿ ದಿನ ಅಲರಾಂ ಆಗಿದೆ. ಇದೀಗ ಕಾಬೂಲ್ನಲ್ಲಿರುವ ಈದ್ಗಾ ಮಸೀದಿ ಮುಂಭಾಗದ ಬಾಗಿಲ ಬಳಿ ಬಾಂಬ್ ಸ್ಫೋಟಿಸಲಾಗಿತ್ತು. ಪರಿಣಾಮ ಹಲವರು ಸಾವನ್ನಪ್ಪಿದ್ದರು.
ಮುಜಾಹಿದ್ ತಾಯಿ ಪವಿತ್ರ ಪ್ರಾರ್ಥನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಈದ್ಗಾ ಮಸೀದಿಯಲ್ಲಿಸೇರಿದ್ದರು. ಮಸೀದಿ ಮೌಲ್ವಿ ಪ್ರಾರ್ಥನೆಗೆ ಎಲ್ಲರನ್ನು ಆಹ್ವಾನಿಸಿದ್ದರು. ಹೀಗಾಗಿ ಹೆಚ್ಚಿ ಸಂಖ್ಯೆಯಲ್ಲಿ ಜನ ಸೇರಿದ್ದರು. ಪ್ರಾರ್ಥನೆ ನಡೆಯುತ್ತಿದ್ದ ವೇಳೆ ಬಾಂಬ್ ಸ್ಫೋಟಗೊಂಡಿದೆ.
ಮಕ್ಕಳು, ಮಹಿಳೆಯರು ಸೇರಿ ಹಲವರು ಸಾವನ್ನಪ್ಪಿದ್ದರು.ಬಾಂಬ್ ಸ್ಫೋಟಗೊಂಡಿರುವ ಕುರಿತು ತಾಲಿಬಾನ್ ಮಾಧ್ಯಮ ವಕ್ತಾರ ಜಬೀಉಲ್ಲಾ ಮುಜಾಹಿದ್ ಸ್ಪಷ್ಟಪಡಿಸಿದ್ದರು.
ಸ್ಫೋಟದ ಬೆನ್ನಲ್ಲೇ ಮಸೀದಿ ರಸ್ತೆಯನ್ನು ಬ್ಲಾಕ್ ಮಾಡಲಾಗಿದೆ. ಇತ್ತ ಗಾಯಗೊಂಡವರನ್ನು ಸ್ಥಳೀಯರು ಆಸ್ಪತ್ರೆ ದಾಖಲಿಸುವ ಕೆಲಸ ಮಾಡಿದ್ದರು. ಯಾವುದೇ ಸಂಘಟನೆ ಈ ಸ್ಫೋಟದ ಹೊಣೆ ಹೊತ್ತುಕೊಂಡಿರಲಿಲ್ಲ.
ತಾಲಿಬಾನ್ ಉಗ್ರರಿಗೆ ಆಡಳಿತ ಸವಾಲಾಗುತ್ತಿದೆ. ಕಾರಣ ತಾಲಿಬಾನ್ ಉಗ್ರರು ಆಫ್ಘಾನಿಸ್ತಾನ ಕೈವಶ ಮಾಡಿದ ಬಳಿಕ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡು 100ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಈ ಸ್ಫೋಟದಲ್ಲಿ 13 ಅಮೆರಿಕ ಯೋಧರು ಮೃತಪಟ್ಟಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications