ಗಡಿ ಸಾರ್ವಭೌಮತ್ವ ಉಳಿಸಿಕೊಳ್ಳಲು ಭಾರತ ಎಂದಿಗೂ ಬದ್ಧ
ನವದೆಹಲಿ, ಅಕ್ಟೋಬರ್ 06: ಇಂಡೋ-ಪೆಸಿಫಿಕ್ ನಾಲ್ಕು ರಾಷ್ಟ್ರಗಳ ಸಭೆಯಲ್ಲಿ ಗಡಿ ವಿಚಾರ ಪ್ರಸ್ತಾಪಿಸಿದ್ದು, ಗಡಿಯಲ್ಲಿ ಸಾರ್ವಭೌಮತ್ವವನ್ನು ರಕ್ಷಿಸಲು ಎಂದಿಗೂ ಭಾರತ ಬದ್ಧವಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜಯಶಂಕರ್ ತಿಳಿಸಿದ್ದಾರೆ.
ಇಂಡೋ-ಪೆಸಿಫಿಕ್ ಸಾಗರ ಪ್ರದೇಶಗಳಲ್ಲಿ ಚೀನಾದ ಆರ್ಭಟಕ್ಕೆ ಅಂಕುಶ ಹಾಕಿ ಅಲ್ಲಿ ಮುಕ್ತ ವಾತಾವರಣ ನಿರ್ಮಿಸುವ ಸಲುವಾಗಿ ಭಾರತ, ಅಮೆರಿಕ, ಜಪಾನ್ ಮತ್ತು ಆಸ್ಟ್ರೇಲಿಯಾ ದೇಶಗಳು ಒಂದಾಗಿ ಕಾರ್ಯಯೋಜನೆ ರೂಪಿಸುತ್ತಿವೆ.
ಲಡಾಖ್ ಎತ್ತರದ ಪ್ರದೇಶದಲ್ಲಿ ಭಾರತದ ಹಿಡಿತ: ಚೀನಾ ಎದೆಯಲ್ಲಿ ನಡುಕ!
ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್, ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮೈಕ್ ಪಾಂಪಿಯೋ, ಆಸ್ಟ್ರೇಲಿಯಾದ ವಿದೇಶಾಂಗ ಸಚಿವ ಮಾರೈಸ್ ಪಾಯ್ನೆ ಹಾಗೂ ಜಪಾನ್ ನೂತನ ಪ್ರಧಾನಿ ಯೋಶಿಹಿದೆ ಸುಗಾ ಅವರು ಇಂದು ಟೋಕಿಯೋದಲ್ಲಿ ಭೇಟಿಯಾಗಿ ಈ ವಿಚಾರದ ಬಗ್ಗೆ ಮಹತ್ವದ ಚರ್ಚೆ ಮಾಡಿದರು ಎಂದು ಜಪಾನ್ ತಿಳಿಸಿದೆ.
ಇಲ್ಲಿ ಮುಕ್ತವಾಗಿರುವ ಹಾಗೂ ನಿಯಮಾಧಾರಿತ ಅಂತಾರಾಷ್ಟ್ರೀಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಈ ನಾಲ್ಕು ದೇಶಗಳು ಪರಸ್ಪರ ಸಮ್ಮತಿಸಿವೆ.
ಕಾನೂನಿಗೆ ಬದ್ಧವಾಗಿರುವ, ಪಾರದರ್ಶಕವಾಗಿರುವ, ಅಂತಾರಾಷ್ಟ್ರೀಯ ಸಾಗರದಲ್ಲಿ ಮುಕ್ತವಾಗಿ ಸಂಚರಿಸುವ, ಶಾಂತಿಯುತವಾಗಿ ವಿವಾದ ಬಗೆಹರಿಸುವಂತಹ ನಿಯಮ ಆಧಾರಿತ ಅಂತಾರಾಷ್ಟ್ರೀಯ ವ್ಯವಸ್ಥೆ ರೂಪಿಸುವುದಕ್ಕೆ ಭಾರತ ಸದಾ ಬದ್ಧವಾಗಿರಲಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಈ ಸಂದರ್ಭದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
Recommended Video
ಕೊರೊನಾವನ್ನು ನಿಗ್ರಹಿಸಲು ಭಾರತ ಮತ್ತು ಅಮೆರಿಕ ಜಂಟಿಯಾಗಿ ಪ್ರಯತ್ನ ಮುಂದುವರೆಸಬೇಕು ಒಟ್ಟಿಗೆ ಕೆಲಸ ಮಾಡಬೇಕಾದ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು.