ಅಟಲ್ ಬಿಹಾರಿ ವಾಜಪೇಯಿಗೆ ಬಾಂಗ್ಲಾದೇಶದಿಂದ ಸನ್ಮಾನ
ಢಾಕಾ, ಜೂ.1: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸನ್ಮಾನಿಸಲು ಬಾಂಗ್ಲಾ ದೇಶ ಸರ್ಕಾರ ಮುಂದಾಗಿದೆ. 1971ರಲ್ಲಿ ಲೋಕಸಭಾ ಸದಸ್ಯರಾಗಿದ್ದ ವಾಜಪೇಯಿ ಅವರು ಪಾಕಿಸ್ತಾನದಿಂದ ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಸಿಗಬೇಕು ಎಂದು ಬಲವಾಗಿ ಪ್ರತಿಪ್ರಾದಿಸಿದ್ದರು.
ವಾಜಪೇಯಿ ಅವರು ಅನಾರೋಗ್ಯ ಪೀಡಿತರಾಗಿರುವುದರಿಂದ ಅವರ ಪರವಾಗಿ ನರೇಂದ್ರ ಮೋದಿ ಅವರು ಪ್ರಶಸ್ತಿ ಪಡೆಯಲಿದ್ದಾರೆ. ಜೂ.6ರಂದು ಬಾಂಗ್ಲಾದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೆರಳುತ್ತಿದ್ದಾರೆ. ವಾಜಪೇಯಿ ಅವರ ಪರವಾಗಿ 'ಫ್ರೆಂಡ್ ಆಫ್ ಬಾಂಗ್ಲಾದೇಶ್ ಲಿಬರೇಷನ್ ವಾರ್ ಅವಾರ್ಡ್' ಪಡೆದುಕೊಳ್ಳಲಿದ್ದಾರೆ ಎಂದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.
1971ರ ಬಾಂಗ್ಲಾ-ಪಾಕ್ ವಿಭಜನೆ ವೇಳೆ ಆಗ ಜನಸಂಘದ ಅಧ್ಯಕ್ಷರು ಹಾಗೂ ಸಂಸದರೂ ಆಗಿದ್ದ ವಾಜಪೇಯಿ ದೃಢವಾದ ನಿರ್ಧಾರ ತಳೆದು, ಆ ಪ್ರಸ್ತಾವನೆಯನ್ನು ಬಲವಾಗಿ ಬೆಂಬಲಿಸಿದ್ದರು ಎಂದು ವಕ್ತಾರರು ಸ್ಮರಿಸಿದ್ದಾರೆ.

ಇದರ ಜೊತೆಗೆ ಬಾಂಗ್ಲಾ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಭಾರತೀಯ ಯೋಧರ ಪಡೆ ಹಾಗೂ ಹುತಾತ್ಮರ ಕುಟುಂಬದ ಬೆಂಬಲವನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸ್ಮರಿಸಿದ್ದು, ಯೋಧರ ಕುಟುಂಬಕ್ಕೂ ಸನ್ಮಾನ ಪತ್ರ ಸಿಗಲಿದೆ.
2008ರಿಂದ ವಿದೇಶಿ ಗೆಳೆಯರನ್ನು ಅವಾಮಿ ಲೀಗ್ ಸರ್ಕಾರ ಆದರದಿಂದ ಕಾಣುತ್ತಿದೆ. ಈ ಮುಂಚೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಗೆಳೆತನ ದ್ಯೋತಕವಾಗಿ ಪ್ರಶಸ್ತಿ ನೀಡಲಾಗಿತ್ತು. ಇಂದಿರಾಗಾಂಧಿ ಅವರ ಸೊಸೆ ಸೋನಿಯಾ ಗಾಂಧಿ ಅವರು ಪ್ರಶಸ್ತಿ ಪಡೆದುಕೊಂಡಿದ್ದರು. (ಪಿಟಿಐ)
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications