ಅಟಲ್ ಬಿಹಾರಿ ವಾಜಪೇಯಿಗೆ ಬಾಂಗ್ಲಾದೇಶದಿಂದ ಸನ್ಮಾನ
ಢಾಕಾ, ಜೂ.1: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಸನ್ಮಾನಿಸಲು ಬಾಂಗ್ಲಾ ದೇಶ ಸರ್ಕಾರ ಮುಂದಾಗಿದೆ. 1971ರಲ್ಲಿ ಲೋಕಸಭಾ ಸದಸ್ಯರಾಗಿದ್ದ ವಾಜಪೇಯಿ ಅವರು ಪಾಕಿಸ್ತಾನದಿಂದ ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ಸಿಗಬೇಕು ಎಂದು ಬಲವಾಗಿ ಪ್ರತಿಪ್ರಾದಿಸಿದ್ದರು.
ವಾಜಪೇಯಿ ಅವರು ಅನಾರೋಗ್ಯ ಪೀಡಿತರಾಗಿರುವುದರಿಂದ ಅವರ ಪರವಾಗಿ ನರೇಂದ್ರ ಮೋದಿ ಅವರು ಪ್ರಶಸ್ತಿ ಪಡೆಯಲಿದ್ದಾರೆ. ಜೂ.6ರಂದು ಬಾಂಗ್ಲಾದೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ತೆರಳುತ್ತಿದ್ದಾರೆ. ವಾಜಪೇಯಿ ಅವರ ಪರವಾಗಿ 'ಫ್ರೆಂಡ್ ಆಫ್ ಬಾಂಗ್ಲಾದೇಶ್ ಲಿಬರೇಷನ್ ವಾರ್ ಅವಾರ್ಡ್' ಪಡೆದುಕೊಳ್ಳಲಿದ್ದಾರೆ ಎಂದು ಎಂದು ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ.
1971ರ ಬಾಂಗ್ಲಾ-ಪಾಕ್ ವಿಭಜನೆ ವೇಳೆ ಆಗ ಜನಸಂಘದ ಅಧ್ಯಕ್ಷರು ಹಾಗೂ ಸಂಸದರೂ ಆಗಿದ್ದ ವಾಜಪೇಯಿ ದೃಢವಾದ ನಿರ್ಧಾರ ತಳೆದು, ಆ ಪ್ರಸ್ತಾವನೆಯನ್ನು ಬಲವಾಗಿ ಬೆಂಬಲಿಸಿದ್ದರು ಎಂದು ವಕ್ತಾರರು ಸ್ಮರಿಸಿದ್ದಾರೆ.

ಇದರ ಜೊತೆಗೆ ಬಾಂಗ್ಲಾ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ಭಾರತೀಯ ಯೋಧರ ಪಡೆ ಹಾಗೂ ಹುತಾತ್ಮರ ಕುಟುಂಬದ ಬೆಂಬಲವನ್ನು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಸ್ಮರಿಸಿದ್ದು, ಯೋಧರ ಕುಟುಂಬಕ್ಕೂ ಸನ್ಮಾನ ಪತ್ರ ಸಿಗಲಿದೆ.
2008ರಿಂದ ವಿದೇಶಿ ಗೆಳೆಯರನ್ನು ಅವಾಮಿ ಲೀಗ್ ಸರ್ಕಾರ ಆದರದಿಂದ ಕಾಣುತ್ತಿದೆ. ಈ ಮುಂಚೆ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರಿಗೆ ಗೆಳೆತನ ದ್ಯೋತಕವಾಗಿ ಪ್ರಶಸ್ತಿ ನೀಡಲಾಗಿತ್ತು. ಇಂದಿರಾಗಾಂಧಿ ಅವರ ಸೊಸೆ ಸೋನಿಯಾ ಗಾಂಧಿ ಅವರು ಪ್ರಶಸ್ತಿ ಪಡೆದುಕೊಂಡಿದ್ದರು. (ಪಿಟಿಐ)
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications