ಕ್ಯಾಲಿಫೋರ್ನಿಯಾ: ಕಾಳ್ಗಿಚ್ಚಿಗೆ 2 ಬಲಿ, 1.4 ಲಕ್ಷ ಎಕರೆ ಜಾಗ ಬೆಂಕಿಗಾಹುತಿ
ಕ್ಯಾಲಿಫೋರ್ನಿಯ, ಡಿಸೆಂಬರ್ 8: ಅಮೆರಿಕದ ಕ್ಯಾಲಿಫೊರ್ನಿಯದಲ್ಲಿ ಸಂಭವಿಸಿದ ಕಾಳ್ಗಿಚ್ಚಿಗೆ ಇಬ್ಬರು ಬಲಿಯಾಗಿದ್ದು, 1,41,000 ಎಕರೆ ಯಷ್ಟು ಜಾಗ ಸುಟ್ಟು ಕರಕಲಾಗಿದೆ ಎಂದು ಪತ್ರಿಕೆಗಳು ವರದಿ ಮಾಡಿವೆ.
ಎಷ್ಟು ಜನ ಗಾಯಗೊಂಡಿದ್ದಾರೆ ಎಂಬ ಬಗ್ಗೆ ಇನ್ನೂ ಮಾಹಿತಿ ದೊರೆತಿಲ್ಲ. 20 ಕ್ಕೂ ಹೆಚ್ಚು ಕಟ್ಟಡಗಳು ಬೆಂಕಿಗೆ ಆಹುತಿಯಾಗಿವೆ. ಹಲವು ಎಕರೆಯಷ್ಟು ಸುಂದರ ಕಾಡು ಸುಟ್ಟು, ಸ್ಮಶಾನದಂತೇ ಕಾಣಿಸುತ್ತಿದೆ!

ಸದ್ಯಕ್ಕೆ 1,90,000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಅಗ್ನಿಶಾಮಕ ದಳದ 5,700 ಕ್ಕೂ ಹೆಚ್ಚು ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.
ಒಣಹವೆ ಮತ್ತು ಅತಿಯಾದ ಗಾಳಿಯೇ ಈ ಕಾಳ್ಗಿಚ್ಚಿಗೆ ಕಾರಣ ಎಂದು ಹೇಳಲಾಗುತ್ತಿದೆ. ಬಿರುಗಾಳಿ ಬೀಸುತ್ತಿದ್ದರಿಂದ ಕಾಳ್ಗಿಚ್ಚು ಹಬ್ಬುವುದನ್ನು ತಡೆಯಲು ಸಾಧ್ಯವಾಗಿರಲಿಲ್ಲ. ಕ್ಯಾಲಿಫೋರ್ನಿಯಾದಲ್ಲಿರುವ ಅರ್ಧಕ್ಕಿಂತಲೂ ಹೆಚ್ಚು ಅಗ್ನಿಶಾಮಕದಳದ ಸಿಬ್ಬಂದಿಗಳನ್ನು ಇಲ್ಲಿನ ಬೆಕಿ ಆರಿಸುವುದಕ್ಕೇ ಕಳಿಸಲಾಗಿದೆ! ಅಷ್ಟರ ಮಟ್ಟಿಗೆ ಕಾಳ್ಗಿಚ್ಚು ಎಲ್ಲೆಡೆ ವ್ಯಾಪಿಸಿದೆ.
ಜನರನ್ನು ತಕ್ಷಣವೇ ಸ್ಥಳಾಂತರಿಸಿದ್ದರಿಂದ ಹೆಚ್ಚು ಸಾವು ನೋವು ಸಂಭವಿಸಿಲ್ಲ. ಅ.10 ರಂದಷ್ಟೇ, ಇದೇ ಕ್ಯಾಲಿಫೋರ್ನಿಯಾದಲ್ಲಿ ಸಂಭವಿಸಿದ್ದ ದೈತ್ಯ ಕಾಳ್ಗಿಚ್ಚಿಗೆ 10 ಕ್ಕೂ ಹೆಚ್ಚು ಜನ ಬಲಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications