ಪ್ಯಾರಿಸ್ನ ವಾರ ಪತ್ರಿಕೆ ಮೇಲೆ ದಾಳಿ : ಓರ್ವ ಉಗ್ರ ಶರಣು
ಪ್ಯಾರಿಸ್, ಜ. 8: ಫ್ರಾನ್ಸ್ನ ವಿಡಂಬನಾ ವಾರಪತ್ರಿಕೆ ಚಾರ್ಲಿ ಹೆಬ್ಡೊ ಕಚೇರಿಯಲ್ಲಿ ಬುಧವಾರ ನಡೆದ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಕಚೇರಿ ಸುತ್ತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಓರ್ವ ಉಗ್ರ ಶರಣಾಗಿದ್ದು, ಇನ್ನಿಬ್ಬರ ಫೋಟೊಗಳನ್ನು ಪೊಲೀಸರು ಮಾಧ್ಯಮಕ್ಕೆ ಬಿಡುಗಡೆ ಮಾಡಿದ್ದಾರೆ.
ಇಬ್ಬರು ಶಂಕಿತ ಉಗ್ರರು ಸಹೋದರರು ಎಂದು ಪೊಲೀಸರು ತಿಳಿಸಿದ್ದಾರೆ. ಅವರ ಹೆಸರು ಸೈಯದ್ ಕೌಚಿ ಮತ್ತು ಚೆರಿಫ್ ಕೌಚಿ, ಇಬ್ಬರೂ 30ರಿಂದ 35 ವರ್ಷ ವಯಸ್ಸಿನವರು ಎಂದು ಹೇಳಿದ್ದಾರೆ. ಪ್ಯಾರಿಸ್ನಲ್ಲಿಯೇ ಹುಟ್ಟಿ ಬೆಳೆದ ಮುಸ್ಲಿಂ ಮೂಲಭೂತವಾದಿಗಳು ಈ ಹತ್ಯಾಕಾಂಡ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ. [ವ್ಯಂಗ್ಯಚಿತ್ರ ಪತ್ರಿಕೆ ಕಚೇರಿಯಲ್ಲಿ ಹತ್ಯಾಕಾಂಡ]

ಮೂರನೇ ಶಂಕಿತನ ಹೆಸರು ಹಮಿದ್ ಮೌರಾದ್ (18). ಈತ ಪೊಲೀಸರಿಗೆ ಶರಣಾಗಿದ್ದಾನೆ. ತಾನಾಗಿಯೇ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. [ಕೋಸ್ಟ್ ಗಾರ್ಡ್ ಕಣ್ಣಿಗೆ ಪಾಕ್ ದೋಣಿ ಬಿದ್ದಿದ್ದು ಹೇಗೆ]
ಚಾರ್ಲಿ ಹೆಬ್ಡೊ ವ್ಯಂಗ್ಯಚಿತ್ರ ವಾರಪತ್ರಿಕೆಯ ಮೇಲೆ ಬುಧವಾರ ಮುಸುಕುಧಾರಿ ಉಗ್ರರು ಇಸ್ಲಾಂ ಪರ ಘೋಷಣೆ ಕೂಗುತ್ತ ದಾಳಿ ನಡೆಸಿದ್ದರು. ಪತ್ರಿಕೆಯ ಪ್ರಧಾನ ಸಂಪಾದಕ ಸೇರಿ 12 ಜನ ಪತ್ರಕರ್ತರು ಹಾಗೂ ವ್ಯಂಗ್ಯಚಿತ್ರಕಾರರು ಮೃತಪಟ್ಟಿದ್ದರು. ಪ್ರವಾದಿ ಮೊಹಮ್ಮದ್ ಕುರಿತು ಪದೇ ಪದೆ ಈ ವಾರಪತ್ರಿಕೆ ವ್ಯಂಗ್ಯಚಿತ್ರ ಪ್ರಕಟಿಸುತ್ತಿತ್ತು. ಈಚೆಗೆ ಫ್ರಾನ್ಸ್ ಶೀಘ್ರ ಮುಸ್ಲಿಂ ಆಡಳಿತಕ್ಕೆ ಒಳಪಡುತ್ತದೆ ಎಂಬ ಕಾಲ್ಪನಿಕ ಚಿತ್ರಲೇಖನ ಪ್ರಕಟಿಸಿತ್ತು.
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications