ಒಹಾಯೊ ವಿವಿಯಲ್ಲಿ ದಾಳಿ, ಹನ್ನೊಂದು ಮಂದಿ ಆಸ್ಪತ್ರೆಗೆ ದಾಖಲು
ಕೊಲಂಬಸ್ ನಲ್ಲಿ ವಾಸವಿರುವ ಸೊಮಾಲಿ ಕುಟುಂಬದ ಅಬ್ದುಲ್ ರಜಾಕ್ ಅಲಿ ಅರ್ಥಾನ್ ಒಹಾಯೊ ವಿವಿಯಲ್ಲಿ ದೊಡ್ಡ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಹನ್ನೊಂದು ಮಂದಿ ಆಸ್ಪತ್ರೆ ಸೇರಿದ್ದಾರೆ
ಕೊಲಂಬಸ್, ನವೆಂಬರ್ 29: ಅಮೆರಿಕಾದ ಒಹಾಯೊ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯೊಬ್ಬನು ನಡೆಸಿದ ದಾಳಿಯಿಂದ ಹನ್ನೊಂದು ಮಂದಿ ಆಸ್ಪತ್ರೆಗೆ ಸೇರಿದ್ದಾರೆ. ವಿವಿ ತರಗತಿಗಳು ನಡೆಯುವ ಕಟ್ಟಡದ ಬಳಿ ಸೋಮವಾರ ಕಾರಿನಲ್ಲಿ ಬಂದ ವ್ಯಕ್ತಿ ಜನರ ಮೇಲೆ ದೊಡ್ಡ ಚಾಕುವಿನಿಂದ ದಾಳಿ ನಡೆಸಿದ್ದಾನೆ. ಇದೊಂದು ಯೋಜಿತ ಕೃತ್ಯ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಬ್ದುಲ್ ರಜಾಕ್ ಅಲಿ ಅರ್ಥಾನ್ ದಾಳಿ ನಡೆಸಿದ ವ್ಯಕ್ತಿ. ಈತ ಕೊಲಂಬಸ್ ನಲ್ಲಿ ವಾಸವಿರುವ ಸೊಮಾಲಿಯನ್ ಕುಟುಂಬಕ್ಕೆ ಸೇರಿದವನು ಎಂದು ಗುರುತಿಸಲಾಗಿದೆ. ಆತನ ದಾಳಿಯ ಹಿಂದಿನ ಉದ್ದೇಶ ಗೊತ್ತಾಗಿಲ್ಲ. ಆದರೆ ಭಯೋತ್ಪಾದನಾ ಕೃತ್ಯ ಇದಾಗಿರಬಹುದು ಎಂದು ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.[ಅಮೆರಿಕಾಗಿಂತ ಭಾರತ ಉತ್ತಮ: ಉಗ್ರನ ಬಾಯಿಂದ ಎಂತಾ ಮಾತು?]

ದಾಳಿ ವೇಳೆ ತಕ್ಷಣ ಎಚ್ಚೆತ್ತ ಸ್ಥಳೀಯ ಪೊಲೀಸರು ದಾಳಿಕೋರ ಅರ್ಥಾನ್ ನನ್ನು ಕೆಲ ನಿಮಿಷಗಳಲ್ಲೇ ಹೊಡೆದುರುಳಿಸಿದ್ದಾರೆ. ಇಪ್ಪತ್ತು ವರ್ಷದ ಅರ್ಥಾನ್ 2014ರಲ್ಲಿ ಈ ವಿವಿ ಸೇರಿದ್ದ. ಈ ಹಿಂದೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಅವನು, ಇಷ್ಟು ದೊಡ್ಡ ಒಹಾಯೊ ರಾಜ್ಯದಲ್ಲಿ ಮುಸ್ಲಿಮರಿಗೆ ಪ್ರಾರ್ಥನೆ ಮಾಡಲು ಸ್ಥಳವಿಲ್ಲ ಎಂದು ಹೇಳಿದ್ದ.[ಕಾಬೂಲ್ : ಅಮೆರಿಕದ ವಿವಿ ಮೇಲೆ ದಾಳಿ, 12 ಜನ ಸಾವು]
ದಾಳಿ ವೇಳೆ ಕಾರಿನಲ್ಲಿ ಅರ್ಥಾನ್ ಒಬ್ಬನೇ ಇದ್ದ. ಈ ದಾಳಿಯ ಹಿಂದಿನ ಉದ್ದೇಶ ಏನು, ಅದರ ಹಿಂದೆ ಯಾರಿದ್ದಾರೆ ಎಂಬ ವಿಷಯ ಇನ್ನೂ ಗೊತ್ತಾಗಬೇಕಿದೆ ಎಂದು ಒಹಾಯೊ ರಾಜ್ಯ ವಿವಿ ಪೊಲೀಸ್ ಮುಖ್ಯಸ್ಥ ಕ್ರೆಗ್ ಸ್ಟೋನ್ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಅರ್ಥಾನ್ ಯಾರ ತಂಟೆಗೂ ಹೋಗದ, ನಿತ್ಯ ಮಸೀದಿಗೆ ಪ್ರಾರ್ಥನೆಗೆ ತೆರಳುತ್ತಿದ್ದ ಸಭ್ಯ ಹುಡುಗನಾಗಿದ್ದ ಎಂದು ಆತನ ನೆರೆಮನೆಯವರು ತಿಳಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications