Just in: ಸಲ್ಮಾನ್ ರಶ್ದಿ ಹಲ್ಲೆ; ಯಾರೊಂದಿಗೂ ಮಾತನಾಡದ ಆರೋಪಿಯ ತಂದೆ
ನ್ಯೂಯಾರ್ಕ್, ಆಗಸ್ಟ್ 15: ಖ್ಯಾತ ಲೇಖಕ ಸಲ್ಮಾನ್ ರಶ್ದಿ ಅವರನ್ನು ಕೊಲೆ ಮಾಡಲು ಯತ್ನಿಸಿದ ಆರೋಪ ಹೊತ್ತಿರುವ ಆರೋಪಿಯ ತಂದೆ ಹಸನ್ ಮಾತರ್ ದಕ್ಷಿಣ ಲೆಬನಾನ್ನಲ್ಲಿರುವ ತನ್ನ ಮನೆಯೊಳಗೆ ಲಾಕ್ ಮಾಡಿಕೊಂಡಿದ್ದಾರೆ. ಯಾರ ಜೊತೆಗೂ ಮಾತನಾಡಲು ಒಪ್ಪುತ್ತಿಲ್ಲ ಎಂದು ಪಟ್ಟಣದ ಮೇಯರ್ ಅಲಿ ತೆಹ್ಫೆ ಹೇಳಿದ್ದಾರೆ.
ನ್ಯೂಯಾರ್ಕ್ ರಾಜ್ಯದಲ್ಲಿ ಶುಕ್ರವಾರ ನಡೆದ ದಾಳಿಯ ಶಂಕಿತ ಆರೋಪಿಯನ್ನು ನ್ಯೂಜೆರ್ಸಿಯ 24 ವರ್ಷದ ಹಾದಿ ಮಾತರ್ ಎಂದು ಪೊಲೀಸರು ಗುರುತಿಸಿದ್ದಾರೆ. ಆರೋಪಿ ತಾನು ನಿರಪರಾಧಿ ಎಂದು ವಾದಿಸುತ್ತಿದ್ದಾರೆ. ರಶ್ದಿ ಮೇಲಿನ ದಾಳಿಯ ಬಗ್ಗೆ ಯಾವುದೇ ಹೆಚ್ಚುವರಿ ಮಾಹಿತಿಯನ್ನು ಸಿಕ್ಕಿಲ್ಲ.
ಆರೋಪಿ ಹಾದಿ ಮಾತರ್ ಮೂಲತಃ ಲೆಬನಾನಿನವರು. ಅವರ ಕುಟುಂಬವು ದಕ್ಷಿಣ ಲೆಬನಾನ್ ಪಟ್ಟಣವಾದ ಯಾರೌನ್ನವರು. ಆತನ ಪೋಷಕರು ಯುನೈಟೆಡ್ ಸ್ಟೇಟ್ಸ್ಗೆ ವಲಸೆ ಹೋಗಿದ್ದರು. ಬಳಿಕ ಅವರ ತಂದೆ ಹಲವಾರು ವರ್ಷಗಳ ಹಿಂದೆ ಲೆಬನಾನ್ಗೆ ಮರಳಿದರು ಎಂದು ಟೆಹ್ಫೆ ಹೇಳಿದ್ದಾರೆ.

"ಅವರ ತಂದೆ ಹಸನ್ ಈಗ ಈ ದೇಶದಲ್ಲಿದ್ದಾರೆ. ಆದರೆ ಅವರು ಮನೆಯೊಳಗೆ ಲಾಕ್ ಆಗಿದ್ದಾರೆ. ಮತ್ತು ಯಾರಿಗೂ ಯಾವುದೇ ರೀತಿಯ ಹೇಳಿಕೆ ನೀಡಲು ಒಪ್ಪುತ್ತಿಲ್ಲ, ನಾವು ಅವರೊಂದಿಗೆ ಮಾತನಾಡಲು ಪ್ರಯತ್ನಿಸಿದ್ದೇವೆ, ಜನರನ್ನು ಕಳುಹಿಸಿದ್ದೇವೆ, ನಾವು ಹೋಗಿ ಬಾಗಿಲು ತಟ್ಟಿದ್ದೇವೆ ಆದರೆ ಅವರು ಮಾತನಾಡಲು ಒಪ್ಪುತ್ತಿಲ್ಲ" ಎಂದಿದ್ದಾರೆ.
ಇತ್ತ ಇರಾನ್ ಬೆಂಬಲಿತ ಲೆಬನಾನಿನ ಸಶಸ್ತ್ರ ಗುಂಪಿನ ಹಿಜ್ಬುಲ್ಲಾದ ಅಧಿಕಾರಿಯೊಬ್ಬರು ಸಲ್ಮಾನ್ ರಶ್ದಿ ಮೇಲಿನ ದಾಳಿಯ ಬಗ್ಗೆ ನಾವು ಯಾವುದೇ ಮಾಹಿತಿಯನ್ನು ಹೊಂದಿಲ್ಲ ಎಂದಿದ್ದಾರೆ.
ಹಿಜ್ಬುಲ್ಲಾ ಸಶಸ್ತ್ರ ಗುಂಪಾಗಿದ್ದು, ಇರಾನ್ನಿಂದ ಬೆಂಬಲಿತವಾಗಿದೆ, ಹಿಜ್ಬುಲ್ಲಾ ಹಿಂದಿನ ಸರ್ವೋಚ್ಚ ನಾಯಕ ಅಯತೊಲ್ಲಾ ರುಹೊಲ್ಲಾ ಖೊಮೇನಿ 1989 ರಲ್ಲಿ ಧರ್ಮನಿಂದೆಯಿದ್ದಕ್ಕಾಗಿ ಸಲ್ಮಾನ್ ರಶ್ದಿಯನ್ನು ಕೊಲ್ಲುವಂತೆ ಮುಸ್ಲಿಮರಿಗೆ ಕರೆ ನೀಡಿ ಫತ್ವಾ ಅಥವಾ ಧಾರ್ಮಿಕ ಶಾಸನವನ್ನು ಘೋಷಿಸಿದ್ದರು.
ಆರೋಪಿ ಮಾತರ್ ಅಥವಾ ಅವರ ಪೋಷಕರು ಹಿಜ್ಬುಲ್ಲಾ ಜೊತೆಗೆ ಸಂಬಂಧ ಹೊಂದಿದ್ದಾರೆಯೇ ಅಥವಾ ಬೆಂಬಲಿಸುತ್ತಾರೆಯೇ ಎಂಬುದು ಇನ್ನು ತಿಳಿದಿಲ್ಲ.
ನ್ಯೂಯಾರ್ಕ್ನ ಬಫಲೋ ಬಳಿಯ ಚೌಟಕ್ವಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾರತೀಯ ಮೂಲದ ಕಾದಂಬರಿಕಾರ ಮತ್ತು ಖ್ಯಾತ ಲೇಖಕ ಸಲ್ಮಾನ್ ರಶ್ದಿ ಮೇಲೆ 10-15 ಬಾರಿ ಚಾಕುವಿನಿಂದ ಇರಿದು ಹಲ್ಲೆ ಮಾಡಲಾಗಿತ್ತು. ಸಲ್ಮಾನ್ ರಶ್ದಿ ಕುತ್ತಿಗೆ ಭಾಗಕ್ಕೆ ತೀವ್ರ ಗಾಯಗಳಾಗಿದ್ದು ಹಲವು ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ವೆಂಟಿಲೇಟರ್ನಲ್ಲಿ ಇರಿಸಲಾಗಿತ್ತು.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications