ಹುಷಾರ್... ಅನ್ಯಗ್ರಹ ಜೀವಿ ಭೂಮಿಗೆ ಬಂದ್ರೆ ಅನಾಹುತ
ಜೀವಂತ ದಂತ ಕತೆಯಾಗಿರುವ ವಿಜ್ಞಾನಿ ಸ್ಟೀಫನ್ ಹಾಕಿನ್ಸ್ ಅವರು ದೇಹದ ಮೇಲೆ ಸಂಪೂರ್ಣ ನಿಯಂತ್ರಣ ಕಳೆದುಕೊಂಡಿದ್ದಾರೆ. ಆದರೆ, ಬುದ್ಧಿಮತ್ತೆಯಲ್ಲಿ ಅವರಿಗವರೇ ಸಾಟಿ. ಹಲವು ವಿಷಯಗಳಲ್ಲಿ ಜಗತ್ತಿನಲ್ಲಿ ಎಲ್ಲರೂ ಮೈಮರೆತಿರುವಾಗ ಅವರು ಎಚ್ಚರಿಕೆ ನೀಡಿದ್ದಾರೆ.
ಈ ಸ್ಫೀಫನ್ ಹಾಕಿನ್ಸ್ ನೀಡಿರುವ ಎಚ್ಚರಿಕೆ ಅನ್ಯಗ್ರಹ ಜೀವಿಗಳ ಕುರಿತು! ಭೂಮಿಯಲ್ಲದೆ ಬೇರೆ ಗ್ರಹಗಳಲ್ಲೂ ಜೀವಿಗಳಿವೆ ಎಂದು ವಿಜ್ಞಾನಿಗಳು ದೃಢವಾಗಿ ನಂಬಿದ್ದಾರೆ. ಈಗಾಗಲೇ ಹಲವು ಬಾರಿ ಅನ್ಯಗ್ರಹ ಜೀವಿಗಳಿಗೆ "ಭೂಮಿ ಎಂಬುದೊಂದಿದೆ. ಇಲ್ಲಿ ಜೀವಿಗಳಿದ್ದಾರೆ" ಎಂಬ ಸಂದೇಶವನ್ನು ರೇಡಿಯೋ ತರಂಗಗಳ ಮೂಲಕ ರವಾನಿಸಿದ್ದಾರೆ. ಆದರೆ, ಇಂತಹ ಪ್ರಯತ್ನಗಳು ಅಪಾಯ ತಂದೊಡ್ಡಬಹುದು ಎಂದು ಸ್ಟೀಫನ್ ಹಾಕಿಂಗ್ಸ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬ್ರಿಟನ್ನ 'ಡೇಲಿ ಸ್ಟಾರ್' ವರದಿ ಮಾಡಿದೆ.

"ಒಂದು ವೇಳೆ ಅನ್ಯಗ್ರಹ ಜೀವಿಗಳು ಭೂಮಿಗೆ ಬಂದರೆ ನಮಗೆ ಒಳಿತಾಗುವುದಿಲ್ಲ. ಕೊಲಂಬಸ್ ಅಮೆರಿಕಕ್ಕೆ ಬಂದಿಳಿದ ನಂತರ ಸ್ಥಳೀಯರು ತೀವ್ರ ತೊಂದರೆ ಎದುರಿಸಬೇಕಾಯಿತು. ಅಂತಹದೇ ಪರಿಣಾಮ ಅನ್ಯಗ್ರಹ ಜೀವಿಗಳಿಂದ ಭೂ ವಾಸಿಗಳಿಗೂ ಉಂಟಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ 'ಎಕ್ಸ್ಟ್ರಾಟೆರಿಸ್ಟ್ರಿಯಲ್ ಇಂಟೆಲಿಜೆನ್ಸ್ ಇನ್ಸ್ಟಿಟ್ಯೂಟ್' ಮತ್ತೊಮ್ಮೆ ವಿವಿಧ ನಕ್ಷತ್ರಗಳು ಹಾಗೂ ಗ್ರಹಗಳಿಗೆ ರೇಡಿಯೋ ಟೆಲಿಸ್ಕೋಪ್ ಮೂಲಕ ಭೂಮಿಯ ಅಸ್ತಿತ್ವದ ಕುರಿತು ಅಂಕಿ ಅಂಶಗಳನ್ನು ಕಳುಹಿಸಲು ಸಿದ್ಧತೆ ನಡೆಸಿದೆ. ಆದರೆ, ಸ್ಟ್ಪೀಫನ್ ಹಾಕಿಂಗ್ಸ್ ಈಗ ನೀಡಿರುವ ಎಚ್ಚರಿಕೆಗೆ ವಿಜ್ಞಾನಿಗಳು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ












Click it and Unblock the Notifications