ಹುಷಾರ್... ಅನ್ಯಗ್ರಹ ಜೀವಿ ಭೂಮಿಗೆ ಬಂದ್ರೆ ಅನಾಹುತ
ಜೀವಂತ ದಂತ ಕತೆಯಾಗಿರುವ ವಿಜ್ಞಾನಿ ಸ್ಟೀಫನ್ ಹಾಕಿನ್ಸ್ ಅವರು ದೇಹದ ಮೇಲೆ ಸಂಪೂರ್ಣ ನಿಯಂತ್ರಣ ಕಳೆದುಕೊಂಡಿದ್ದಾರೆ. ಆದರೆ, ಬುದ್ಧಿಮತ್ತೆಯಲ್ಲಿ ಅವರಿಗವರೇ ಸಾಟಿ. ಹಲವು ವಿಷಯಗಳಲ್ಲಿ ಜಗತ್ತಿನಲ್ಲಿ ಎಲ್ಲರೂ ಮೈಮರೆತಿರುವಾಗ ಅವರು ಎಚ್ಚರಿಕೆ ನೀಡಿದ್ದಾರೆ.
ಈ ಸ್ಫೀಫನ್ ಹಾಕಿನ್ಸ್ ನೀಡಿರುವ ಎಚ್ಚರಿಕೆ ಅನ್ಯಗ್ರಹ ಜೀವಿಗಳ ಕುರಿತು! ಭೂಮಿಯಲ್ಲದೆ ಬೇರೆ ಗ್ರಹಗಳಲ್ಲೂ ಜೀವಿಗಳಿವೆ ಎಂದು ವಿಜ್ಞಾನಿಗಳು ದೃಢವಾಗಿ ನಂಬಿದ್ದಾರೆ. ಈಗಾಗಲೇ ಹಲವು ಬಾರಿ ಅನ್ಯಗ್ರಹ ಜೀವಿಗಳಿಗೆ "ಭೂಮಿ ಎಂಬುದೊಂದಿದೆ. ಇಲ್ಲಿ ಜೀವಿಗಳಿದ್ದಾರೆ" ಎಂಬ ಸಂದೇಶವನ್ನು ರೇಡಿಯೋ ತರಂಗಗಳ ಮೂಲಕ ರವಾನಿಸಿದ್ದಾರೆ. ಆದರೆ, ಇಂತಹ ಪ್ರಯತ್ನಗಳು ಅಪಾಯ ತಂದೊಡ್ಡಬಹುದು ಎಂದು ಸ್ಟೀಫನ್ ಹಾಕಿಂಗ್ಸ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬ್ರಿಟನ್ನ 'ಡೇಲಿ ಸ್ಟಾರ್' ವರದಿ ಮಾಡಿದೆ.

"ಒಂದು ವೇಳೆ ಅನ್ಯಗ್ರಹ ಜೀವಿಗಳು ಭೂಮಿಗೆ ಬಂದರೆ ನಮಗೆ ಒಳಿತಾಗುವುದಿಲ್ಲ. ಕೊಲಂಬಸ್ ಅಮೆರಿಕಕ್ಕೆ ಬಂದಿಳಿದ ನಂತರ ಸ್ಥಳೀಯರು ತೀವ್ರ ತೊಂದರೆ ಎದುರಿಸಬೇಕಾಯಿತು. ಅಂತಹದೇ ಪರಿಣಾಮ ಅನ್ಯಗ್ರಹ ಜೀವಿಗಳಿಂದ ಭೂ ವಾಸಿಗಳಿಗೂ ಉಂಟಾಗುತ್ತದೆ" ಎಂದು ಎಚ್ಚರಿಕೆ ನೀಡಿದ್ದಾರೆ.
ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ 'ಎಕ್ಸ್ಟ್ರಾಟೆರಿಸ್ಟ್ರಿಯಲ್ ಇಂಟೆಲಿಜೆನ್ಸ್ ಇನ್ಸ್ಟಿಟ್ಯೂಟ್' ಮತ್ತೊಮ್ಮೆ ವಿವಿಧ ನಕ್ಷತ್ರಗಳು ಹಾಗೂ ಗ್ರಹಗಳಿಗೆ ರೇಡಿಯೋ ಟೆಲಿಸ್ಕೋಪ್ ಮೂಲಕ ಭೂಮಿಯ ಅಸ್ತಿತ್ವದ ಕುರಿತು ಅಂಕಿ ಅಂಶಗಳನ್ನು ಕಳುಹಿಸಲು ಸಿದ್ಧತೆ ನಡೆಸಿದೆ. ಆದರೆ, ಸ್ಟ್ಪೀಫನ್ ಹಾಕಿಂಗ್ಸ್ ಈಗ ನೀಡಿರುವ ಎಚ್ಚರಿಕೆಗೆ ವಿಜ್ಞಾನಿಗಳು ಹೇಗೆ ಸ್ಪಂದಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications