ಆಸ್ಟ್ರಿಯಾ ಸರ್ಕಾರದ ಪತನಕ್ಕೆ ಕಾರಣವಾದ ಇಸ್ರೇಲ್ ಗುಪ್ತಚರ ಸಂಸ್ಥೆ
ವಿಯೆನ್ನಾ, ಮೇ 28: ಆಸ್ಟ್ರಿಯಾದ ಕನ್ಸರ್ವೇಟಿವ್ ಚಾನ್ಸೆಲರ್ ಸೆಬಾಸ್ಟಿಯನ್ ಕುರ್ಜ್ ವಿಶ್ವಾಸಮತ ಕಳೆದುಕೊಂಡಿದ್ದಾರೆ.
ಭ್ರಷ್ಟಾಚಾರ ಹಗರಣಕ್ಕೆ ಸಂಬಂಧಿಸಿದಂತೆ ಬಿಡುಗಡೆಯಾದ ವಿಡಿಯೋ ಅವರ ಸಮ್ಮಿಶ್ರ ಸರ್ಕಾರವನ್ನು ಪತನಗೊಳಿಸಿದೆ. ಇಸ್ರೇಲ್ನ ಗುಪ್ತಚರ ಸಂಸ್ಥೆ ಮೊಸ್ಸಾದ್ ಈ ವಿಡಿಯೋ ಸೋರಿಕೆ ಹಿಂದೆ ಇದೆ ಎಂದು ಜರ್ಮನಿಯ ಗುಪ್ತಚರ ಸಂಸ್ಥೆಗಳ ಮಾಹಿತಿ ತಿಳಿಸಿದೆ.
ಕುರ್ಜ್ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಹಗರಣದ ಆರೋಪ ಬಂದ ಹಿನ್ನೆಲೆಯಲ್ಲಿ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸಲಾಗಿದ್ದು, ಸಂಪುಟ ವಜಾಗೊಂಡಿದೆ.

ವಿರೋಧಪಕ್ಷ ಸೋಷಿಯಲ್ ಡೆಮಾಕ್ರಾಟ್ಸ್ ಸಲ್ಲಿಸಿದ್ದ ಅರ್ಜಿಯನ್ನು ಅಂಗೀಕರಿಸಲಾಗಿದೆ. ಹೀಗಾಗಿ ಅವರು ವಿಶ್ವಾಸಮತ ಕಳೆದುಕೊಂಡಿದ್ದಾರೆ ಎಂದು ಸಂಸತ್ನ ಡೆಪ್ಯುಟಿ ಸ್ಪೀಕರ್ ಡೋರಿಸ್ ಬ್ಯುರೆಸ್ ತಿಳಿಸಿದ್ದಾರೆ.
ಭಾನುವಾರ ನಡೆದ ಯುರೋಪಿಯನ್ ಚುನಾವಣೆಗಳಲ್ಲಿ ಕುರ್ಜ್ ಅವರ ಕನ್ಸರ್ವೇಟಿವ್ ಪೀಪಲ್ಸ್ ಪಾರ್ಟಿ ಭರ್ಜರಿ ಜಯಗಳಿಸಿದ ಬಳಿಕ ಸಂಭ್ರಮಾಚರಣೆಯಲ್ಲಿ ಮುಳುಗಿತ್ತು. ಶೇ 34.9ರಷ್ಟು ಮತಗಳನ್ನು ಪಡೆಯುವುದರ ಜತೆಗೆ ಯುರೋಪಿಯನ್ ಸಂಸತ್ ಕ್ಷೇತ್ರಗಳಲ್ಲಿ ಎರಡು ಹೆಚ್ಚುವರಿ ಸೀಟುಗಳನ್ನು ಪಡೆದುಕೊಂಡಿತ್ತು.
ಆದರೆ, 'ಇಬಿಜಾ-ಗೇಟ್' ಹಗರಣ ಅವರ ಸರ್ಕಾರಕ್ಕೆ ಆಘಾತ ನೀಡಿದೆ. ಎಫ್ಪಿಒ ನಾಯಕ ಮತ್ತು ವೈಸ್ ಚಾನ್ಸಲರ್ ಹೀಂಜ್-ಕ್ರಿಶ್ಚಿಯನ್ ಸ್ಟ್ರಾಚ್ ಅವರು ಎರಡೂ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಈ ವಿಡಿಯೋದಲ್ಲಿ ಅವರು ರಷ್ಯಾದ ನಕಲಿ ಬೆಂಬಲಿಗನೊಬ್ಬನ ಮೂಲಕ ಪ್ರಚಾರಕ್ಕೆ ನೆರವು ಪಡೆದಿದ್ದಕ್ಕಾಗಿ ಗುತ್ತಿಗೆಗಳನ್ನು ನೀಡುವ ಹಗರಣದಲ್ಲಿ ತೊಡಗಿದ್ದಾಗ ಸಿಕ್ಕಿಬಿದ್ದಿದ್ದರು. ಈ ಹಗರಣಕ್ಕೆ ಹೊಣೆ ಹೊತ್ತು ಕುರ್ಜ್ ಅವರು ಅಧಿಕಾರದಿಂದ ಕೆಳಕ್ಕಿಳಿಯಬೇಕಾಗಿದೆ.
ಕೇವಲ 32 ವರ್ಷದವರಾದ ಕುರ್ಜ್ ಅವರ ಸರ್ಕಾರ 2017ರ ಡಿಸೆಂಬರ್ನಲ್ಲಿ ಅಧಿಕಾರಕ್ಕೆ ಬಂದಿತ್ತು. ಬಲಪಂಥೀಯ ಎಫ್ಪಿಒ ಜತೆಗೂಡಿ ಅವರು ಸರ್ಕಾರ ರಚಿಸಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications