ಅಮೆರಿಕ ಬಳಿಕ 'ವೀಸಾಘಾತ' ನೀಡಿದ ಆಸ್ಟ್ರೇಲಿಯಾ
ಅಮೆರಿಕ ನಂತರ ಆಸ್ಟ್ರೇಲಿಯಾ ತನ್ನ ವೀಸಾ ನೀತಿಯನ್ನು ಬದಲಾಯಿಸಿಕೊಂಡಿದ್ದು, ವಿದೇಶಿಯರನ್ನು ತಾತ್ಕಾಲಿಕವಾಗಿ ಉದ್ಯೋಗಕ್ಕೆ ನೇಮಿಸಿಕೊಳ್ಳುವ 'ವೀಸಾ 457' ಯೋಜನೆ ರದ್ದಾಗಿದೆ.
ಕ್ಯಾನ್ ಬೆರಾ, ಏಪ್ರಿಲ್ 19: ಅಮೆರಿಕ ನಂತರ ಆಸ್ಟ್ರೇಲಿಯಾ ತನ್ನ ವೀಸಾ ನೀತಿಯನ್ನು ಬದಲಾಯಿಸಿಕೊಂಡಿದ್ದು, ವಿದೇಶಿಯರನ್ನು ತಾತ್ಕಾಲಿಕವಾಗಿ ಉದ್ಯೋಗಕ್ಕೆ ನೇಮಿಸಿಕೊಳ್ಳುವ 'ವೀಸಾ 457' ಯೋಜನೆ ರದ್ದಾಗಿದೆ.
ಆಸ್ಟ್ರೇಲಿಯಾ ಫಸ್ಟ್ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ. 'ವೀಸಾ 457' ಯೋಜನೆಯಿಂದ ನಿರುದ್ಯೋಗ ಸಮಸ್ಯೆ ತಲೆದೋರಿತ್ತು.

ವಿದೇಶಿಯರಿಗೆ ತಾತ್ಕಾಲಿಕವಾಗಿ ಉದ್ಯೋಗ ನೀಡುತ್ತಿದ್ದ ಕೌಶಲ್ಯಪೂರ್ಣ ವಲಸೆಗೆ ಒತ್ತು ನೀಡುತ್ತಿದ್ದ ವೀಸಾ 457 ಯೋಜನೆ ಇನ್ಮುಂದೆ ಬಂದ್ ಆಗಲಿದೆ ಎಂದು ಆಸ್ಟ್ರೇಲಿಯಾದ ಪ್ರಧಾನಿ ಮಾಲ್ಕಂ ಟರ್ನ್ ಬುಲ್ ಘೋಷಿಸಿದ್ದಾರೆ.
ಭಾರತೀಯ ಐಟಿ ರಂಗಕ್ಕೆ ಎಚ್ಚರಿಕೆ: ವಿದೇಶಕ್ಕೆ ಭಾರತದಿಂದ ಕೌಶಲ್ಯ ಹೊಂದಿರುವ ಉದ್ಯೋಗಿಗಳನ್ನು ಕಳಿಸುತ್ತಿದ್ದ ಭಾರತೀಯ ಐಟಿ ರಂಗಕ್ಕೆ ಇದು ಎಚ್ಚರಿಕೆಯ ಗಂಟೆಯಾಗಿದೆ. ಅಮೆರಿಕ, ಬ್ರಿಟನ್ ಹಾಗೂ ಸಿಂಗಪುರ ನಂತರ ಆಸ್ಟ್ರೇಲಿಯಾ ತನ್ನ ವೀಸಾ ನೀತಿ ಬದಲಾಯಿಸಿಕೊಂಡು ವಲಸಿಗರ ಮೇಲೆ ಕಡಿವಾಣ ಹಾಕುತ್ತಿದೆ.
ಸದ್ಯ 95,000ಕ್ಕೂ ಅಧಿಕ ಉದ್ಯೋಗಿಗಳಿಗೆ 457 ವೀಸಾ ನೀಡಿದ್ದು, ಇದರ ನಿಷೇಧ ಭಾರತೀಯರ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ. 457 ವೀಸಾದ ಮೂಲಕ ಆಸ್ಟ್ರೇಲಿಯಾದ ಕಂಪನಿಗಳು 4 ವರ್ಷ ಗಳ ಅವಧಿಗೆ ವಿದೇಶಿಯರನ್ನು ನೇಮಿಸಿ ಕೊಳ್ಳಬಹುದಾಗಿತ್ತು. ಇದರಿಂದ ಆಸ್ಟ್ರೇಲಿಯನ್ನರಿಗೆ ಉದ್ಯೋಗ ಕೊರತೆ ಎದುರಾಗಿತ್ತು ಎಂದು ಎಬಿಸಿ ವರದಿ ಮಾಡಿದೆ.
-
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ಬೆಲೆ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್ಗಳಲ್ಲಿ ಆಹಾರ ದರ ಏರಿಸಲು ಚಿಂತನೆ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ












Click it and Unblock the Notifications