ಯಲ್ಲಮ್ಮ ಟ್ಯಾಟೂ ಹಾಕಿಸಿಕೊಂಡ ಪ್ರಕರಣದ ಎರಡು ಮುಖ
ಬೆಂಗಳೂರು, ಅಕ್ಟೋಬರ್. 20: ಕಾಲಿನ ಮೇಲೆ ಹಿಂದೂ ದೇವತೆ ಟ್ಯಾಟೂ ಹಾಕಿಸಿಕೊಂಡ ಮ್ಯಾಥ್ಯೂ ಗೋರ್ಡನ್ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಮ್ಯಾಥ್ಯೂ ಗೋರ್ಡನ್ ಸಾಮಾಜಿಕ ತಾಣ ಫೇಸ್ ಬುಕ್ ನಲ್ಲಿ ಹಾಕಿರುವ ಅಪ್ ಡೇಟ್ಸ್ ಬೇರೆಯದೇ ಕತೆಯನ್ನು ಹೇಳುತ್ತದೆ.
ಕಾಲಿನ ಮೇಲೆ ಯಲ್ಲಮ್ಮ ದೇವತೆ ಟ್ಯಾಟೂ ಹಾಕಿಸಿಕೊಂಡಿದ್ದ ಮ್ಯಾಥ್ಯೂ ತನ್ನ ಪ್ರಿಯತಮೆ ಜತೆ ಬೆಂಗಳೂರು ರೆಸಿಡೆನ್ಸಿ ರಸ್ತೆಯ ಹೋಟೆಲ್ ವೊಂದಕ್ಕೆ ಭೇಟಿ ನೀಡಿದ್ದ. ಈ ವೇಳೆ ಗೋರ್ಡನ್ ಕಾಲಿನ ಮೇಲೆ ದೇವತೆಯ ಚಿತ್ರ ಗಮನಿಸಿದ ರಮೇಶ್ ಯಾದವ್ ಮತ್ತು ಅವರ ಬೆಂಬಲಿಗರು' ಇದು ಸರಿಯಲ್ಲ, ಕಾಲು ಮುಚ್ಚುವಂತೆ ಬಟ್ಟೆ ಧರಿಸಿ ಓಡಾಡಿ, ಇಲ್ಲ ಕೂಡಲೇ ಇಲ್ಲಿಂದ ತೆರಳಿ, ಗೊಂದಲಕ್ಕೆ ಆಸ್ಪದ ನೀಡಬೇಡಿ ಎಂದು ತಿಳಿಹೇಳಿದ್ದಾರೆ.

ನಂತರ ಹೋಟೇಲ್ ಗೆ ಆಗಮಿಸಿದ ಮತ್ತೊಂದು ತಂಡ ಟ್ಯಾಟೋ ಕಂಡು ವಾಗ್ವಾದಕ್ಕೆ ಇಳಿದಿದೆ. ನಂತರ ಆಸ್ಟ್ರೇಲಿಯಾ ಪ್ರಜೆ ಮತ್ತು ಆತನ ಪ್ರೇಯಸಿಯನ್ನು ಅಶೋಕ ನಗರ ಠಾಣೇಗೆ ಕರೆದುಕೊಂಡು ಹೋಗಲಾಗಿದೆ. ಅಲ್ಲಿ ಗೋರ್ಡನ್ ತಪ್ಪೊಪ್ಪಿಗೆ ಪತ್ರ ಬರೆದುಕೊಟ್ಟಿದ್ದಾರೆ. ಆದರೆ ಇದು ಘಟನೆಯ ಒಂದು ಮುಖ ಅಷ್ಟೇ, ಗೋರ್ಡನ್ ಇದೀಗ ಫೇಸ್ ಬುಕ್ ನಲ್ಲಿ ತಮ್ಮದೇ ಆದ ಆರೋಪಗಳನ್ನು ಮುಂದಿಟ್ಟಿದ್ದಾರೆ.[ಯುವತಿ ತೊಡೆ ಮೇಲಿದ್ದ ಟ್ಯಾಟೂ ಕ್ಲಿಕ್ಕಿಸಿದ ಮ್ಯಾನೇಜರ್]
'ನನ್ನಿಂದ ಬಲವಂತವಾಗಿ ಕ್ಷಮಾಪಣೆ ಪತ್ರ ಬರೆಸಿಕೊಳ್ಳಲಾಗಿದೆ. ನನ್ನ ಮೇಲೆ ಹಲ್ಲೆಗೂ ಯತ್ನ ಮಾಡಲಾಗಿದೆ. ಹಿಂದೂ ದೇವತೆಗಳ ಮೇಲೆ ನನಗೆ ಅಪಾರ ಗೌರವವಿದೆ. ಇದಕ್ಕಾಗಿಯೇ 35 ತಾಸುಗಳ ಕಾಲ ಶ್ರಮವಹಿಸಿ ನನ್ನ ಬೆನ್ನಮೇಲೆ ಗಣೇಶನ ಚಿತ್ರ ಹಾಕಿಸಿಕೊಂಡಿದ್ದೇನೆ.
ಪ್ರಕರಣದಲ್ಲಿ ನಾನು ಅಪರಾಧಿಯಲ್ಲ, ನನ್ನ ಗೆಳತಿಯ ಮೇಲೂ ದೌರ್ಜನ್ಯ ಎಸಗಲಾಗಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಲಾಗಿದೆ. ನಮ್ಮನ್ನು ತಪ್ಪಿತಸ್ಥರ ಸ್ಥಾನದಲ್ಲಿ ನಿಲ್ಲಿಸಲಾಗಿದ್ದು ಹೋರಾಟಕ್ಕೆ ನಿಮ್ಮ ಬೆಂಬಲ ಕೇಳುತ್ತಿದ್ದೇನೆ' ಎಂದು ಗೋರ್ಡನ್ ಕೇಳಿಕೊಂಡಿದ್ದಾನೆ. ಆದರೆ ಪೊಲೀಸರು ನಾವು ಬಲಾತ್ಕಾರಯುತವಾಗಿ ಕ್ಷಮಾಪಣೆ ಪತ್ರ ಬರೆಸಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಆಸ್ಟ್ರೇಲಿಯಾ ಪ್ರಜೆ ಫೇಸ್ ಬುಕ್ ಖಾತೆ
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications