ಮಹಿಳೆ ಸಾವಿನ ಬಳಿಕ ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಬಳಕೆ ನಿಲ್ಲಿಸಿದ ಆಸ್ಟ್ರಿಯಾ
ಕೊರೊನಾ ಲಸಿಕೆ ಪಡೆದ ಬಳಿಕ ಮಹಿಳೆಯೊಬ್ಬರು ಮೃತಪಟ್ಟಿರುವ ಕಾರಣ ಆಸ್ಟ್ರಾಜೆನೆಕಾ ಲಸಿಕೆ ಬಳಕೆಯನ್ನು ಆಸ್ಟ್ರಿಯಾ ನಿಲ್ಲಿಸಿದೆ. 49 ವರ್ಷದ ಮಹಿಳೆ ಮೃತಪಟ್ಟಿದ್ದು, ಇನ್ನೊಬ್ಬರ ಸ್ಥಿತಿ ಕೂಡಾ ಚಿಂತಾಜನಕವಾಗಿದೆ ಹೀಗಾಗಿ ಅಸ್ಟ್ರಾಜೆನೆಕಾ ಲಸಿಕೆಯನ್ನು ಆಸ್ಟ್ರಿಯನ್ ಅಧಿಕಾರಿಗಳು ಅಮಾನತುಗೊಳಿಸಿದ್ದಾರೆ.
ತೀವ್ರವಾದ ರಕ್ತ ಹೆಪ್ಪುಗಟ್ಟುವಿಕೆ ಅಸ್ವಸ್ಥತೆಯ ಪರಿಣಾಮವಾಗಿ 49 ವರ್ಷದ ಮಹಿಳೆ ಸಾವನ್ನಪ್ಪಿದ್ದರೆ, 35 ವರ್ಷದ ಮಹಿಳೆ ಶ್ವಾಸಕೋಶದ ತೊಂದರೆ ಅನುಭವಿಸುತ್ತಿದ್ದು, ಈಗ ಚೇತರಿಸಿಕೊಳ್ಳುತ್ತಿದ್ದಾರೆ.
ಕೊರೊನಾ ಲಸಿಕೆಯಿಂದಲೇ ಇದು ಸಂಭವಿಸಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಲಸಿಕೆ ಕುರಿತು ತಿಳಿಸಿರುವ ಅಡ್ಡಪರಿಣಾಮಗಳಲ್ಲಿ ರಕ್ತಹೆಪ್ಪುಗಟ್ಟುವಿಕೆ ಇಲ್ಲ. ಆದರೆ ಸಂಭವನೀಯ ಯಾವುದೇ ಅಡ್ಡಪರಿಣಾಮಗಳನ್ನು ತಳ್ಳಿ ಹಾಕಲು ಸಾಧ್ಯವಿಲ್ಲ, ಈ ಕುರಿತು ತನಿಖೆ ನಡೆಯುತ್ತಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ಈಗ ಉಳಿದಿರುವ ಕೊರೊನಾ ಲಸಿಕೆಗಳನ್ನು ನೀಡಲಾಗುವುದಿಲ್ಲ. ಈ ಕುರಿತು ಅಸ್ಟ್ರಾಜೆನೆಕಾ ಯಾವುದೇ ಪ್ರತಿಕ್ರಿಯೆ ನೀಡಿಲ್ಲ, ಆದರೆ ತನಿಖೆಗೆ ನಾವು ಸಹಕಾರ ನೀಡುತ್ತೇವೆ ಎಂದಷ್ಟೇ ಹೇಳಿದೆ.
ಎಲ್ಲಾ ಪ್ರಯೋಗಗಳು ಅಸ್ಟ್ರಾಜೆನೆಕಾ ಕೊರೊನಾ ಲಸಿಕೆ ಸುರಕ್ಷಿತ ಹಾಗೂ ಪರಿಣಾಮಕಾರಿ ಎಂದೇ ಹೇಳಿವೆ. ಜನವರಿ 30 ರಂದು ಯುರೋಪ್ನಲ್ಲಿ ಈ ಲಸಿಕೆ ಬಳಕೆಗೆ ಅನುಮೋದನೆ ನೀಡಲಾಗಿದೆ. ಇದು ಪರಿಣಾಮಕಾರಿ ಹಾಗೂ ಸುರಕ್ಷಿತವಾಗಿದೆ ಎಂದು ಹೇಳಲಾಗಿದೆ. ಆದರೆ ಎಲ್ಲಿಯೂ ರಕ್ತ ಹೆಪ್ಪುಗಟ್ಟುವಿಕೆ ರೀತಿಯ ಅಡ್ಡಪರಿಣಾಮಗಳು ವರದಿಯಾಗಿಲ್ಲ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications