ಬಾಂಗ್ಲಾದೇಶ್ ನಲ್ಲಿ ಭಾರೀ ಅಗ್ನಿ ಅವಘಡ ಹದಿನೇಳು ಮಂದಿ ಸಾವು
ಢಾಕಾ (ಬಾಂಗ್ಲಾದೇಶ್), ಮಾರ್ಚ್ 28: ಬಾಂಗ್ಲಾದೇಶ್ ರಾಜಧಾನಿ ಢಾಕಾದಲ್ಲಿ ಗಂಗನಚುಂಬಿ ಕಟ್ಟಡ ಕಚೇರಿಯಲ್ಲಿ ಗುರುವಾರ ಬೆಂಕಿ ಕಾಣಿಸಿಕೊಂಡು, ಹದಿನೇಳು ಮಂದಿ ಸಾವನ್ನಪ್ಪಿದ್ದು, ಎಪ್ಪತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಹಲವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ಬಹಳ ಹೊತ್ತಿನ ಪ್ರಯತ್ನದ ನಂತರ ಒಳಗೆ ಸಿಲುಕಿದವರ ರಕ್ಷಣೆ ಮಾಡಲಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಸದ್ಯಕ್ಕೆ ಪರಿಸ್ಥಿತಿ ಹತೋಟಿಯಲ್ಲಿದೆ ಎಂದು ನಾಗರಿಕ ರಕ್ಷಣೆ ಹಾಗೂ ಅಗ್ನಿ ಶಾಮಕ ಸೇವೆಯ ಉನ್ನತಾಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಕಿಯ ತೀವ್ರತೆ ಕಡಿಮೆ ಮಾದಲು ಸಾಧ್ಯವಾಯಿತು. ಆದರೆ ಪೂರ್ತಿಯಾಗಿ ಶಮನ ಮಾಡಲು ಆಗಿಲ್ಲ ಎಂದು ತಿಳಿಸಲಾಗಿದೆ. ವಿಷಾನಿಲ ಕಟ್ಟಡದ ಹೊರಗೆ ಬರಬೇಕು ಎಂದು ಗಾಜಿನ ಗೋಡೆಗಳನ್ನು ಒಡೆಯಲಾಗಿದೆ.
ಢಾಕಾದ ಬನಾನಿ ವಾಣಿಜ್ಯ ಜಿಲ್ಲೆಯ ಎಫ್ ಆರ್ ಟವರ್ ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಸೇನಾ ಹೆಲಿಕಾಪ್ಟರ್ ಗಳು ಕೂಡ ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿವೆ. ಹನ್ನೆರಡಕ್ಕೂ ಹೆಚ್ಚು ಮಂದಿ ಕಟ್ಟಡದ ಥಾರಸಿಗೆ ಬಂದು, ಅವರನ್ನು ಅಲ್ಲಿಂದ ರಕ್ಷಿಸಲಾಗಿದೆ. ಅಂದಹಾಗೆ ಬನಾನಿಯಲ್ಲಿ ಅಪಾರ ಪ್ರಮಾಣದಲ್ಲಿ ಬಹು ಅಂತಸ್ತಿನ ಕಟ್ಟಡಗಳು ಇವೆ. ಕಚೇರಿಗಳು, ವಿ.ವಿ. ಹಾಗೂ ರೆಸ್ಟೋರೆಂಟ್ ಗಳಿವೆ.

ಬಾಂಗ್ಲಾದೇಶ್ ನಲ್ಲಿ ಬೆಂಕಿ ಅವಘಡ ಸಾಮಾನ್ಯ ಎಂಬಂತಾಗಿದೆ. ಕಳೆದ ತಿಂಗಳು ಢಾಕಾದ ಹಳೆ ಪ್ರದೇಶವೊಂದರಲ್ಲಿ ಅನಾಹುತ ಸಂಭವಿಸಿ, ಅಪಾರ್ಟ್ ಮೆಂಟ್, ಮಳಿಗೆ ಹಾಗೂ ಗೋದಾಮುಗಳಿಗೆ ಬೆಂಕಿ ತಗುಲಿ ಕನಿಷ್ಠ ಅರವತ್ತೇಳು ಮಂದಿ ಸಾವನ್ನಪ್ಪಿದ್ದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications